ಡಿಕೆಶಿ ಹಿಂದೂ ಹೌದ, ಅಲ್ಲವಾ ಅನ್ನೋದರ ಬಗೆಗೆ ಸಂಶಯ; ಸಿಟಿ ರವಿ

ಬೆಂಗಳೂರು, ಡಿಸೆಂಬರ್ 31; ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸುವ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿ, "ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ದೇಗುಲಗಳಿಂದ ಸರ್ಕಾರದ ಖಜಾನೆಗೆ ಸಾಕಷ್ಟು ಆದಾಯ ಬರುತ್ತಿದೆ. ಕೋವಿಡ್‌ ಪರಿಸ್ಥಿತಿಯಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಇಂತಹ ಸಮಯದಲ್ಲಿ ಆದಾಯ ತರುತ್ತಿರುವ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ ಖಾಸಗಿಯವರಿಗೆ ಕೊಡುವುದೆಂದರೆ ಗಾಯದ ಮೇಲೆ ಬರೆ ಎಳೆದಂತೆ" ಎಂದು ಹೇಳಿದ್ದರು.

"ದೇಗುಲಗಳೇ ಆಗಲಿ, ಸಂಸ್ಥೆಗಳೇ ಆಗಲಿ ಸರ್ಕಾರದ ಸುಪರ್ದಿಯಲ್ಲಿರುವವರೆಗೆ ಅದು ಸಾರ್ವಜನಿಕರ ಆಸ್ತಿ.ಖಾಸಗಿಯವರಿಗೆ ಸೇರಿದ ನಂತರ ಅದರ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇರುವುದಿಲ್ಲ. ಸರ್ಕಾರಕ್ಕೆ ನಿಜವಾಗಿಯೂ ಬದ್ಧತೆ ಇದ್ದರೆ, ದೇಗುಲಗಳನ್ನು ತನ್ನ ನಿಯಂತ್ರಣದಲ್ಲೇ ಇಟ್ಟುಕೊಂಡು ಸಮಾಜದ ಎಲ್ಲ ವರ್ಗದವರನ್ನೂ ದೇಗುಲದ ಸಿಬ್ಬಂದಿಯನ್ನಾಗಿ ನೇಮಿಸಲಿ" ಎಂದು ಒತ್ತಾಯಿಸಿದ್ದರು.

CT Ravi Verbal Attack On KPCC President DK Shivakumar In the Issue Of Temple

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಡಿ. ಕೆ. ಶಿವಕುಮಾರ್‌ಗೆ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ಪೋಸ್ಟ್ ಹಾಕಿದ್ದು, ಡಿ. ಕೆ. ಶಿವಕುಮಾರ್ ಹಿಂದೂ ಹೌದ ಅಲ್ಲವಾ ಅನ್ನೋದರ ಬಗೆಗೆ ಸಂಶಯ ಬರೋದು ಸಹಜ ತಾನೇ? ಎಂದು ಪ್ರಶ್ನಿಸಿದ್ದಾರೆ.

ಸಿ. ಟಿ. ರವಿ ಪೋಸ್ಟ್; ಶುಕ್ರವಾರ ತಮ್ಮ ಫೇಸ್ ಬುಕ್ ಪೋಸ್ಟ್‌ನಲ್ಲಿ ಸಿ. ಟಿ. ರವಿ,

ಕಾಂಗ್ರೆಸ್ ನಾಯಕ, ಕೊತ್ವಾಲ್ ಶಿಷ್ಯ:
✓ ದೇಗುಲಗಳನ್ನು ಸರ್ಕಾರಿ ಸಾಮ್ಯದಿಂದ ಹಿಂದೂಗಳಿಗೆ ವಾಪಸು ನೀಡುವುದಕ್ಕೆ ವಿರೋಧ...
✓ ಗೋಹತ್ಯಾ ನಿಷೇಧಕ್ಕೆ ವಿರೋಧ...
✓ ಮತಾಂತರ ನಿಷೇಧ ಕಾಯಿದೆಗೆ ವಿರೋಧ....
✓ ರಾಮ ಮಂದಿರ ಪುನರ್ನಿರ್ಮಾಣಕ್ಕೆ ವಿರೋಧ..
✓ CAA ಗೆ ವಿರೋಧ... ಹಿಂದೂಗಳ ಪರವಾದ ಯಾವುದೇ ವಿಚಾರವಿದ್ದರೂ ಪ್ರತಿಬಾರಿಯೂ ಈತನ ವಿರೋಧ ಇದ್ದದ್ದೆ. ಈತ ಹಿಂದೂ ಹೌದ ಅಲ್ಲವಾ ಅನ್ನೋದರ ಬಗೆಗೆ ಸಂಶಯ ಬರೋದು ಸಹಜ ತಾನೇ? ಎಂದು ಕೇಳಿದ್ದಾರೆ.

ಸಿದ್ದರಾಮಯ್ಯ ಮಾತು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದೇವಾಲಯಗಳ ಕಾನೂನು ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ, "ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ಧಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ" ಎಂದು ಹೇಳಿದ್ದಾರೆ.

"ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ದಿಪಡಿಸುವ ಕೆಲಸ ಮಾಡಿದರೆ ನಮ್ಮ ತರಕಾರು ಇಲ್ಲ. ಸಾರಸಗಟಾಗಿ ಎಲ್ಲ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಬೇಕು" ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

"ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ದೇವಾಲಯಗಳನ್ನು ಸ್ವತಂತ್ರಗೊಳಿಸಿದರೆ ಅವುಗಳನ್ನು ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗಲಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಿತು. ಕಾರ್ಯಕಾರಣಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡುತ್ತೇವೆ" ಎಂದು ಹೇಳಿದ್ದರು.

"ದೇವಾಲಯಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಬೇರೆ ಏನೂ ಇರುವುದಿಲ್ಲ. ಈ ಕುರಿತು ಕಾನೂನು ರೂಪಿಸುತ್ತೇವೆ. ನಮ್ಮ ಸರ್ಕಾರದ ಅವಧಿಯಲ್ಲೇ ಇದನ್ನು ಮಾಡುತ್ತೇವೆ. ಇದು ನಮ್ಮ ಸಂಕಲ್ಪ" ಎಂದು ತಿಳಿಸಿದ್ದರು.

"ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ. ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕು" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದರು. ಬಳಿಕ ರಾಜ್ಯದಲ್ಲಿ ಈ ಕುರಿತು ಚರ್ಚೆಗಳು ಆರಂಭವಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+