ಉತ್ತರಕನ್ನಡದಲ್ಲಿ ಭಾರೀ ಮಳೆ, ಮೀನುಗಾರಿಕೆ ಸ್ಥಗಿತ
ಕಾರವಾರ, ಸೆಪ್ಟೆಂಬರ್ 24 : ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಉತ್ತರ ಕನ್ನಡದಲ್ಲಿ ಮೀನುಗಾರಿಕೆ ಸ್ಥಗಿತಗೊಂಡಿದೆ. 60ಕ್ಕೂ ಅಧಿಕ ದೋಣಿಗಳು ಬೈತಖೋಲ್ ಬಂದರು ಬಳಿ ಲಂಗರು ಹಾಕಿವೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೆರಡು ವಾರಗಳಿಂದ ಗಾಳಿ ಸಹಿತ ಮಳೆಯಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳ ದೋಣಿಗಳು ಸೇರಿದಂತೆ ಕೇರಳ, ಗೋವಾ, ತಮಿಳುನಾಡು ರಾಜ್ಯಗಳ 60ಕ್ಕೂ ಅಧಿಕ ದೋಣಿಗಳು ಇಲ್ಲಿನ ಬೈತಖೋಲ್ ಬಂದರು ಬಳಿ ಲಂಗರು ಹಾಕಿವೆ.
ಕರ್ನಾಟಕದಲ್ಲಿ ಎರಡು ದಿನ ಸಾಧಾರಣ ಮಳೆ ಮುನ್ಸೂಚನೆ

ಇದರಿಂದಾಗಿ ಆಳಸಮುದ್ರ ಮೀನುಗಾರಿಕೆ ಸ್ಥಗಿತಗೊಂಡಿದ್ದು, ಸ್ಥಳೀಯ ಮಾರುಕಟ್ಟೆಗೆ ಮೀನುಗಳ ಸರಬರಾಜು ಕಡಿಮೆಯಾಗಿದೆ. ಜತೆಗೆ ಮೀನುಗಳ ದರದಲ್ಲಿಯೂ ಭಾರೀ ಏರಿಕೆಯಾಗಿದೆ.
ಮೊಬೈಲ್ ಗೆ ಸಂದೇಶ : ಸಮುದ್ರದಲ್ಲಿ ತೂಫಾನ್ ಹೆಚ್ಚಿದೆ. ಈ ವೇಳೆ ಮೀನುಗಾರಿಕೆಗೆ ತೆರಳುವುದು ಅಪಾಯಕಾರಿ. ಗಾಳಿಯು ಜೋರಾಗಿ ಬೀಸುವುದರಿಂದ ಬಲೆಗಳನ್ನು ಬಿಡಲು ಆಗುವುದಿಲ್ಲ ಎಂಬ ಸಂದೇಶ ಮೀನುಗಾರರಿಗೆ ಬರುತ್ತಿದೆ.
'ಹೈದರಾಬಾದ್ನಲ್ಲಿರುವ ಸಾಗರ ಮಾಹಿತಿ ಸೇವೆಗಳ ಭಾರತೀಯ ರಾಷ್ಟ್ರೀಯ ಕೇಂದ್ರವು ಆಳಸಮುದ್ರದ ಹವಾಮಾನ ಕುರಿತು ಪ್ರತಿನಿತ್ಯ ಮೀನುಗಾರರ ಮೊಬೈಲ್ಗಳಿಗೆ ಸಂದೇಶ ಕಳುಹಿಸುತ್ತದೆ' ಎಂದು ಪರ್ಶಿಯನ್ ಬೋಟ್ ಮಾಲೀಕರ ಸಂಘದವರು ಹೇಳಿದ್ದಾರೆ.
ಈ ಸಂದೇಶವನ್ನು ಆಧರಿಸಿ ಮೀನುಗಾರಿಕೆಗೆ ತೆರಳ ಬೇಕೋ ಅಥವಾ ಬೇಡವೇ ಎಂಬುದನ್ನು ಮೀನುಗಾರರು ನಿರ್ಧರಿಸುತ್ತಾರೆ. ಆಳ ಸಮುದ್ರದಲ್ಲಿ ತೂಫಾನ್ ಇರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ನಾಲ್ಕೈದು ದಿನಗಳಿಂದ ಇದೇ ರೀತಿಯ ವಾತಾವರಣ ಇರುವುದರಿಂದ ಹಾಗೂ ಸುರಕ್ಷತೆ ದೃಷ್ಟಿಯಿಂದ ಬೋಟ್ ಗಳು ಲಂಗರು ಹಾಕಿವೆ.
ಅಲೆಗಳ ಆರ್ಭಟ : ಆಳ ಸಮುದ್ರದಲ್ಲಿ ಗಾಳಿ ಹಾಗೂ ತೆರೆಗಳ ಆರ್ಭಟ ಜೋರಾಗಿದೆ. ಕಡಲತೀರದಿಂದ ಸುಮಾರು 50 ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 7ರಿಂದ 9 ಅಡಿ ಎತ್ತರ ದೈತ್ಯ ಅಲೆಗಳು ಏಳುತ್ತಿದ್ದು, ಗಾಳಿಯು ಗಂಟೆಗೆ 29 ಕಿ.ಮೀ ವೇಗದಲ್ಲಿ ಬೀಸುತ್ತಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications