ಕರ್ನಾಟಕಕ್ಕೂ ತಟ್ಟಿದ ವಾರ್ಧಾ ಚಂಡಮಾರುತ ಭೀತಿ!
ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಅಬ್ಬರಿಸಿ ಬೊಬ್ಬರಿದ ನಂತರ ವಾರ್ಧಾ ಚಂಡಮಾರುತ ನಿಧಾನಗತಿಯಲ್ಲಿ ಕರ್ನಾಟಕದ ಕರಾವಳಿಗೆ ಮಂಗಳವಾರ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಬೆಂಗಳೂರು, ಡಿಸೆಂಬರ್ 13: ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಅಬ್ಬರಿಸಿ ಬೊಬ್ಬರಿದ ನಂತರ ವಾರ್ಧಾ ಚಂಡಮಾರುತ ನಿಧಾನಗತಿಯಲ್ಲಿ ಕರ್ನಾಟಕದ ಕರಾವಳಿಗೆ ಮಂಗಳವಾರ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಗೋವಾದಲ್ಲಿರುವ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆಯನ್ನು ನೀಡಿದ್ದು, ಡಿಸೆಂಬರ್ 14 ರಂದು ಗೋವಾದ ಕಡಲನ್ನು ಮುಟ್ಟಲಿದೆ.

ಹವಾಮಾನ ಇಲಾಖೆಯ ನಿರ್ದೇಶಕ ಎಂಎಲ್ ಸಾಹು ಅವರು ಮಾತನಾಡಿ, ದಕ್ಷಿಣ ಗೋವಾದ ತೀರ ಪ್ರದೇಶಕ್ಕೆ ಬುಧವಾರ (ಡಿಸೆಂಬರ್ 14) ರಂದು ವಾರ್ಧಾ ಚಂಡಮಾರುತ ಬಡಿಯಲಿದೆ. ಇದರ ಪರಿಣಾಮ ಹವಾಮಾನ ವೈಪರೀತ್ಯ, ಅಲ್ಪ ಪ್ರಮಾಣದ ಮಳೆ ಸಾಧ್ಯತೆಯಿದೆ ಎಂದಿದ್ದಾರೆ.
ಸೋಮವಾರದಂದು ಚೆನ್ನೈ ಸೇರಿದಂತೆ ಹಲವೆಡೆ ರುದ್ರ ನರ್ತನ ಮಾಡಿದ ವಾರ್ಧಾ, ಸಾವಿರಾರು ಮರಗಳು, ಲೈಟ್ ಕಂಬಗಳನ್ನು ನೆಲಕ್ಕುರಳಿಸಿತ್ತು. ಹಯಾತ್ ಹೋಟೆಲಿನ ಮುಂಭಾಗದ ಫೈನಲ್ ಪ್ಯಾನೆಲ್ ಚಿಂದಿಯಾಗಿತ್ತು. ಹತ್ತಾರು ಜನರನ್ನು ಬಲಿ ಪಡೆದ ವಾರ್ಧಾ ನಂತರ ಆಂಧ್ರ ಕರಾವಳಿಯನ್ನು ಪ್ರವೇಶಿಸಿತ್ತು.
ವಾರ್ಧಾ ಚಂಡಮಾರುತ ಸಾಗುವ ತೀರ ಪ್ರದೇಶಗಳತ್ತ ಸುಳಿಯದಂತೆ ಮೀನುಗಾರರು ಸೇರಿದಂತೆ ನಾಗರಿಕರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
More From
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications