ಚಿಂತಾಮಣಿಯಲ್ಲಿ 900 ಸಿಲಿಂಡರ್ ಸ್ಫೋಟ, 2 ಲಾರಿ ಭಸ್ಮ
ಚಿಂತಾಮಣಿ, ಡಿಸೆಂಬರ್, 26: ಚಿಕ್ಕಬಳ್ಳಾಪುರದ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 900ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದಿರುವ ಘಟನೆ ಜರುಗಿದೆ. ಅದೃಷ್ಟ ವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಚಿಂತಾಮಣಿ- ಬಾಗೇಪಲ್ಲಿ ಮಾರ್ಗಮಧ್ಯದಲ್ಲಿರುವ ಚೋಕೆನಲ್ಲಿ ಗೇಟ್ ಬಳಿ ಎಸ್ಎಲ್ಎನ್ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ರಾತ್ರೋ ರಾತ್ರಿ ಲಾರಿಯಲ್ಲಿದ್ದ ಸಿಲಿಂಡರ್ ಗಳು ಸ್ಪೋಟಗೊಂಡಿದ್ದು ಎರಡು ಲಾರಿ ಸೇರಿ 900ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಪೋಟಗೊಂಡಿವೆ.[ಸಿಲಿಂಡರ್ ಸ್ಫೋಟ, ಪಟಾಕಿ ಸಿಡಿತ : ಬೆಡಿ ಸಾಯೇಬನ ಮನೆ ಧ್ವಂಸ]
ಇನ್ನು ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಗೋದಾಮಿನಲ್ಲಿ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದು ಯಾರಿಗೂ ತಿಳಿದಿಲ್ಲ. ಅದರೆ 70ಲಕ್ಷ ಮೌಲ್ಯದ ಸಿಲಿಂಡರ್ ಗಳು ನಾಶ ಹೊಂದಿವೆ.

ಗ್ಯಾಸ್ ಸಿಲಿಂಡರ್ ಸ್ಪೋಟದ ಶಬ್ದಕ್ಕೆ ಜನ ಭಯಭೀತಗೊಂಡಿದ್ದು, ಎಲ್ಲಿ ಈ ಶಬ್ದ ಬಂದಿರಬಹುದೆಂದು ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಇನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ಲಾರಿಯ ಬ್ಯಾಟರಿಯಲ್ಲಿ ಏನಾದರೂ ಸಮಸ್ಯೆ ಎದುರಾದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದೆಂದು ಊಹಿಸಿದ್ದಾರೆ.[ಎಲ್ಲೆಡೆ ನೋಟ್ ಬಂದ್: ಹುಬ್ಬಳ್ಳಿಯಲ್ಲಿ ಗ್ಯಾಸ್ ಬಂದ್]

ನಿನ್ನೆ(ಡಿ.25) ಭಾನುವಾರವಾದ್ದರಿಂದ ಗ್ಯಾಸ್ ಎಜೆನ್ಸಿಯ ಸಿಬ್ಬಂದಿಗಳು ಮನೆಗೆ ತೆರಳಿದ್ದರು. ರಾತ್ರಿ ವೇಳೆ ಈ ಅಗ್ನಿ ಅವಘಡ ನಡೆದಿದ್ದು ಯಾರಿಗೂ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಅಲ್ಲದೆ ಗ್ಯಾಸ್ ಗೋದಾಮಿನ ಸಮೀಪ ರಾಜೀವ್ ಗಾಂಧಿ ವಸತಿ ಶಾಲೆಯಿದ್ದು ಹಗಲಿನಲ್ಲಿ ಈ ಅಪಘಾತ ಸಂಭವಿಸಿದ್ದಿದ್ದರೆ ಪರಿಣಾಮ ಭೀಕರವಾಗಿರುತ್ತಿತ್ತು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಸ್ಥಳಕ್ಕೆ ತಹಸೀಲ್ದಾರ್ ಗಂಗಣ್ಣ, ಡಿವೈಎಸ್ ಪಿ ಕೃಷ್ಣಮೂರ್ತಿ, ಎಸ್ ಪಿ ಚೈತ್ರಾ, ಗ್ಯಾಸ್ ಎಜೆನ್ಸಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#WATCH: More than 900 cylinders blast near Chintamani (Karnataka) last night. 3 vehicles gutted. pic.twitter.com/hJE4l1dhaF
— ANI (@ANI_news) December 26, 2016
-
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications