ಚಿಂತಾಮಣಿಯಲ್ಲಿ 900 ಸಿಲಿಂಡರ್ ಸ್ಫೋಟ, 2 ಲಾರಿ ಭಸ್ಮ
ಚಿಂತಾಮಣಿ, ಡಿಸೆಂಬರ್, 26: ಚಿಕ್ಕಬಳ್ಳಾಪುರದ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 900ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದಿರುವ ಘಟನೆ ಜರುಗಿದೆ. ಅದೃಷ್ಟ ವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಚಿಂತಾಮಣಿ- ಬಾಗೇಪಲ್ಲಿ ಮಾರ್ಗಮಧ್ಯದಲ್ಲಿರುವ ಚೋಕೆನಲ್ಲಿ ಗೇಟ್ ಬಳಿ ಎಸ್ಎಲ್ಎನ್ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ರಾತ್ರೋ ರಾತ್ರಿ ಲಾರಿಯಲ್ಲಿದ್ದ ಸಿಲಿಂಡರ್ ಗಳು ಸ್ಪೋಟಗೊಂಡಿದ್ದು ಎರಡು ಲಾರಿ ಸೇರಿ 900ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಪೋಟಗೊಂಡಿವೆ.[ಸಿಲಿಂಡರ್ ಸ್ಫೋಟ, ಪಟಾಕಿ ಸಿಡಿತ : ಬೆಡಿ ಸಾಯೇಬನ ಮನೆ ಧ್ವಂಸ]
ಇನ್ನು ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಗೋದಾಮಿನಲ್ಲಿ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದು ಯಾರಿಗೂ ತಿಳಿದಿಲ್ಲ. ಅದರೆ 70ಲಕ್ಷ ಮೌಲ್ಯದ ಸಿಲಿಂಡರ್ ಗಳು ನಾಶ ಹೊಂದಿವೆ.

ಗ್ಯಾಸ್ ಸಿಲಿಂಡರ್ ಸ್ಪೋಟದ ಶಬ್ದಕ್ಕೆ ಜನ ಭಯಭೀತಗೊಂಡಿದ್ದು, ಎಲ್ಲಿ ಈ ಶಬ್ದ ಬಂದಿರಬಹುದೆಂದು ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಇನ್ನು ಅಗ್ನಿ ಶ್ಯಾಮಕ ಸಿಬ್ಬಂದಿ ಲಾರಿಯ ಬ್ಯಾಟರಿಯಲ್ಲಿ ಏನಾದರೂ ಸಮಸ್ಯೆ ಎದುರಾದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದೆಂದು ಊಹಿಸಿದ್ದಾರೆ.[ಎಲ್ಲೆಡೆ ನೋಟ್ ಬಂದ್: ಹುಬ್ಬಳ್ಳಿಯಲ್ಲಿ ಗ್ಯಾಸ್ ಬಂದ್]

ನಿನ್ನೆ(ಡಿ.25) ಭಾನುವಾರವಾದ್ದರಿಂದ ಗ್ಯಾಸ್ ಎಜೆನ್ಸಿಯ ಸಿಬ್ಬಂದಿಗಳು ಮನೆಗೆ ತೆರಳಿದ್ದರು. ರಾತ್ರಿ ವೇಳೆ ಈ ಅಗ್ನಿ ಅವಘಡ ನಡೆದಿದ್ದು ಯಾರಿಗೂ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಅಲ್ಲದೆ ಗ್ಯಾಸ್ ಗೋದಾಮಿನ ಸಮೀಪ ರಾಜೀವ್ ಗಾಂಧಿ ವಸತಿ ಶಾಲೆಯಿದ್ದು ಹಗಲಿನಲ್ಲಿ ಈ ಅಪಘಾತ ಸಂಭವಿಸಿದ್ದಿದ್ದರೆ ಪರಿಣಾಮ ಭೀಕರವಾಗಿರುತ್ತಿತ್ತು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಸ್ಥಳಕ್ಕೆ ತಹಸೀಲ್ದಾರ್ ಗಂಗಣ್ಣ, ಡಿವೈಎಸ್ ಪಿ ಕೃಷ್ಣಮೂರ್ತಿ, ಎಸ್ ಪಿ ಚೈತ್ರಾ, ಗ್ಯಾಸ್ ಎಜೆನ್ಸಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#WATCH: More than 900 cylinders blast near Chintamani (Karnataka) last night. 3 vehicles gutted. pic.twitter.com/hJE4l1dhaF
— ANI (@ANI_news) December 26, 2016
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications