ನಟ ಶಂಕರ್ನಾಗ್ ಬಗ್ಗೆ ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ ಡಿ.ಕೆ ಶಿವಕುಮಾರ್!
ಕನ್ನಡಿಗರ ಕಣ್ಮಣಿ ಹಾಗೂ ಪ್ರಸಿದ್ಧ ದಿವಂಗತ ನಟ ಶಂಕರ್ ನಾಗ್ ಅವರು ಜನ್ಮದಿನಾದ ಗೌರವಾರ್ಥವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಸಂಭ್ರಮಾಚರಣೆ ನಡೆದಿದೆ. ಆಟೋ ಚಾಲಕರು ಹಾಗೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ನಟ ಶಂಕರ್ ನಾಗ್ ಅವರ ಜನ್ಮದಿನವನ್ನು ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದ್ದು. ಶಂಕರ್ ನಾಗ್ ಅವರ ಅಭಿಮಾನಿಗಳು ಡಿ.ಕೆ ಶಿವಕುಮಾರ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಟ ಶಂಕರ್ ನಾಗ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿಯೇ ನಮ್ಮ ಮೆಟ್ರೋದ ನಿಲ್ದಾಣವೊಂದಕ್ಕೆ ಅವರ ಹೆಸರನ್ನು ಇರಿಸಬೇಕು ಎನ್ನುವ ವಿಷಯ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಅಲ್ಲದೇ ಡಿ.ಕೆ ಶಿವಕುಮಾರ್ ಅವರು ಮಾಡಿರುವ ಟ್ವೀಟ್ಗೆ ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಏನು ಟ್ವೀಟ್ ಮಾಡಿದ್ದರು ಹಾಗೂ ಇದಕ್ಕೆ ಜನ ರಿಯಾಕ್ಟ್ ಮಾಡಿದ್ದೇನು ಅಂತ ನೋಡೋಣ.

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ಮತ್ತು ನಿರ್ಮಾಪಕರಾದ ಶಂಕರ್ ನಾಗ್ ಅವರ ಜನ್ಮದಿನದಂದು ಗೌರವ ನಮನಗಳು. ಮೂರು ದಶಕಗಳ ಹಿಂದೆಯೇ ಬೆಂಗಳೂರಿಗೆ ಮೆಟ್ರೋ ರೈಲು ಮತ್ತು ನಂದಿಬೆಟ್ಟಕ್ಕೆ ರೋಪ್ ವೇಯಂತಹ ಮಹತ್ವದ ಮೂಲಸೌಕರ್ಯಗಳ ಕನಸು ಕಂಡ ಶ್ರೇಯಸ್ಸು ಶಂಕರ್ ನಾಗ್ ಅವರಿಗೆ ಸಲ್ಲುತ್ತದೆ. ಅವರ ದೂರದೃಷ್ಟಿ ಇಂದಿಗೂ ನಮಗೆಲ್ಲ ಸ್ಫೂರ್ತಿ ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ ನಟ ಶಂಕರ್ ನಾಗ್ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಿ, ಮೆಟ್ರೋ ಕನಸು ಕಂಡ ಶಂಕರ್ ನಾಗ್ ಅವರ ಹೆಸರಿನಲ್ಲಿ ಒಂದು ಮೆಟ್ರೋ ನಿಲ್ದಾಣ ಇಲ್ಲ ಅದನ್ನು ಮಾಡಿ ಎಂದು ನೆಟ್ಟಿಗರು ರಿಯಾಕ್ಟ್ ಮಾಡಿದ್ದಾರೆ. ಅಧಿಕಾರದಲ್ಲಿ ಇದ್ದೀರಿ ನಮ್ಮ ಶಂಕರ್ ನಾಗ್ ಹೆಸರನ್ನು ಒಂದು ಮೆಟ್ರೋ ಸ್ಟೇಷನ್ಗಾದರು ಇರಿಸಿ..
ಅಧಿಕಾರದಲ್ಲಿ ಇದ್ದಾಗ ಕನ್ನಡ ಕನ್ನಡಿಗರ ಪರ ಕೆಲಸ ಮಾಡಿ. ಈ ರೀತಿ ವಿಶ್ ಮಾಡಿ ಟ್ವೀಟ್ ಹಾಕೋ ಬದಲು ಈ ರೀತಿ ಮೆಟ್ರೋ ಸ್ಟೇಷನ್ ಗೆ ಶಂಕರ್ ನಾಗ್ ಅವರ ಹೆಸರು ಇಟ್ಟಿದ್ದೀವಿ ಅಂತ ಟ್ವೀಟ್ ಮಾಡಿದ್ದರೆ ತುಂಬಾ ಸಂತೋಷ ಆಗುತ್ತಿತ್ತು ಎಂದು ನೆಟ್ಟಿಗರು ರಿಯಾಕ್ಟ್ ಮಾಡಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications