ರಾಜ್ಯಕ್ಕೆ ಮೂರು ಡಿಸಿಎಂ ಹುದ್ದೆ: ಸಿಎಂ ಉತ್ತರಿಸುತ್ತಾರೆ ಎಂದ ಡಿ.ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 18: ಸಚಿವ ಕೆ.ಎನ್.ರಾಜಣ್ಣ ಮೂರು ಡಿಸಿಎಂಗಳು ಅವಶ್ಯಕತೆ ಇದೆ ಎನ್ನುವ ಮಾತಿನ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನನ್ನನ್ನು ಈ ಹುದ್ದೆಗೆ ನೇಮಕ ಮಾಡಿದ್ದು ಮುಖ್ಯಮಂತ್ರಿಗಳು. ಅವರೇ ಇದಕ್ಕೆ ಉತ್ತರ ನೀಡುತ್ತಾರೆ, ರಾಜಣ್ಣ ಅವರು ಏಕೆ ಈ ರೀತಿ ಹೇಳಿಕೆ ಕೊಟ್ಟರೊ ಗೊತ್ತಿಲ್ಲ. ನಾವೆಲ್ಲಾ ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುವವರು ಅವರನ್ನೇ ಕೇಳಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರ ಬಳಿ ಮುಖ್ಯಮಂತ್ರಿಗಳು, ಹೈಕಮಾಂಡ್ ಉತ್ತರ ಕೇಳುತ್ತದೆ. ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಪತ್ರ ಬರೆದಿದೆ. ನಾನು ಯಾರಿಗೆ ಉತ್ತರ ಕೊಡಬೇಕೋ ಅವರಿಗೆ ಮಾತ್ರ ಕೊಡುತ್ತೇನೆ. ನಾನು ಯಾರಿಗೆ ಉತ್ತರ ಕೇಳಬೇಕೋ ಅವರ ಬಳಿ ಕೇಳುತ್ತೇನೆ, ಯಾವುದೇ ಮುಲಾಜಿಲ್ಲ ನನಗೆ ಎಂದು ಉತ್ತರಿಸಿದರು.

ಹೈಕಮಾಂಡ್ ಒಂದೇ ಡಿಸಿಎಂ ಎಂದು ಹೇಳಿದ ನಂತರವೂ ಈ ಬೆಳವಣಿಗೆ ಏಕೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎರಡು ದಿನಗಳಿಂದ ಹೈದರಾಬಾದ್ನಲ್ಲಿ ಎಐಸಿಸಿ ಸಭೆಯಲ್ಲಿ ಇದ್ದೆ, ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು, ಈಗ ತಿಳಿದುಕೊಂಡು ಹೇಳುವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕಾರಣವಿಲ್ಲ
ಬಿ.ಕೆ.ಹರಿಪ್ರಸಾದ್ ಅವರ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಬಣ ಮೌನ ತಾಳಿದ ಕಾರಣ ಡಿಸಿಎಂ ವಿವಾದ ಎದ್ದಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ಬಣವಿಲ್ಲ, ನಿಮ್ಮ ಬಳಿ ಇರಬೇಕು. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಬಣಕ್ಕೆ ನಾನು ಬೆಂಬಲ ಕೊಟ್ಟಿಲ್ಲ. ನನಗೆ ಬಣದ ಅವಶ್ಯಕತೆ ಇಲ್ಲ. ಎಸ್.ಎಂ.ಕೃಷ್ಣ ಅವರು, ಬಂಗಾರಪ್ಪ ಅವರ ಕಾಲದಲ್ಲಿ ಬಣ ಮಾಡಬಹುದಿತ್ತು, ನನ್ನದು ಕಾಂಗ್ರೆಸ್ ಬಣ. ಬಣದ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಬೇಡಿ ಎಂದು ಸಿಡಿಮಿಡಿಗೊಂಡರು.
ಕೆ.ಎನ್ ರಾಜಣ್ಣ ಹೇಳಿದ್ದೇನು..?
ಲಿಂಗಾಯತ, ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಈ ಹಿಂದೆ ವಿಧಾನಸಭೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ್ದೆವು, ಈಗ ಲೋಕಸಭಾ ಚುನಾವಣೆಗೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬೇಕಾದರೆ ಮತ್ತೆ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ಕೆ.ಎನ್ ರಾಜಣ್ಣ ಹೇಳಿದ್ದರು.
-
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications