Get Updates
Get notified of breaking news, exclusive insights, and must-see stories!

DK Shivakumar: ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದ ಡಿ.ಕೆ ಶಿವಕುಮಾರ್!

DK Shivakumar: ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿರುವಾಗಲೇ ಮಹತ್ವದ ಟ್ವೀಟ್ ಮಾಡಿದ್ದು. ಈ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ಕಾರಣಗಳಿಗೆ ಚರ್ಚೆಗೆ ಗ್ರಾಸವಾಗಿದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆ ನಡೆದಿದೆ. 2.5 ವರ್ಷಗಳ ನಂತರ, ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಲ್ಲೇ ಇದ್ದಾರೆ. ಆದರೆ, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ ನಿರಾಕರಿಸುತ್ತಲ್ಲೇ ಇದೆ. ಇದೀಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2.5 ವರ್ಷ ಅಧಿಕಾರ ಅವಧಿಯನ್ನು ಪೂರೈಸಿದ್ದು, ಕಳೆದ ಹಲವು ತಿಂಗಳುಗಳಿಂದ ಚರ್ಚೆ ಆಗುತ್ತಿರುವ ನವೆಂಬರ್ ಕ್ರಾಂತಿ ಚರ್ಚೆಯ ಮುನ್ನೆಲೆಗೆ ಬಂದಿದೆ.

D K Shivakumar said where there is effort there is fruit and where there is devotion there is God

ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ ಎಂದು ಹೇಳುವ ಮೂಲಕ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಮತ್ತು ಮುಂದೆ ಅಧಿಕಾರ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂಬರ್ಥದಲ್ಲಿ ಡಿ.ಕೆ ಶಿವಕುಮಾರ್ ಅವರ ಟ್ವೀಟ್ ಇದೆ.

ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಸಂಘಟನೆಗೆ ದುಡಿದ ಕಾರ್ಯಕರ್ತರಿಗೆ ಅಧಿಕಾರ ಕೊಟ್ಟಿದ್ದೇವೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನೀವು ನಿಮ್ಮ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ಅನೇಕ ನಿಗಮಮಂಡಳಿ ನಿರ್ದೇಶಕರ ಪಟ್ಟಿ ಸಿದ್ಧವಾಗಿದ್ದು, ಮರುಪರಿಶೀಲನೆ ಮಾಡಿಸಿ, ಬ್ಲಾಕ್ ಅಧ್ಯಕ್ಷರಿಗೆ ಅಧಿಕಾರ ಕೊಡಬೇಕಾಗಿದೆ.

ಎನ್ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಿದ್ದೇವೆ. ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಗ್ಯಾರಂಟಿ ಸಮಿತಿಗಳ ಮೂಲಕ ಪ್ರತಿ ಸಮಿತಿಯಲ್ಲಿ 15 ಕಾರ್ಯಕರ್ತರಿಗೆ ಅಧಿಕಾರ ನೀಡಿದ್ದೇವೆ. ಇಡೀ ದೇಶದಲ್ಲಿ ಕಾರ್ಯಕರ್ತರಿಗೆ ಈ ರೀತಿ ಅಧಿಕಾರ ನೀಡಿರುವುದು ನಮ್ಮಲ್ಲಿ ಮಾತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಬರಹ ವೈರಲ್ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+