ಮಾನವ ಹಕ್ಕು ಆಯೋಗಕ್ಕೆ ಡಿ.ಮುರುಗೇಶನ್ ಅಧ್ಯಕ್ಷರು
ಬೆಂಗಳೂರು, ಡಿ. 18 : ಸುಮಾರು ಹದಿನಾರು ತಿಂಗಳಿನಿಂದ ಖಾಲಿ ಉಳಿದ್ದಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹುದ್ದೆಗೆ ದೆಹಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಮುರುಗೇಶನ್ ಹೆಸರನ್ನು ಸರ್ಕಾರ ಅಂತಿಮಗೊಳಿಸಿದೆ. ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು, ಅವರು ಒಪ್ಪಿಗೆ ನೀಡದ ಬಳಿಕ ಡಿ.ಮುರುಗೇಶನ್ ಅಧಿಕಾರ ಸ್ವೀಕರಿಸಲಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಮೂಲದ ಮುರುಗೇಶನ್ ಹೆಸರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹುದ್ದೆಗೆ ಅಂತಿಮಗೊಳಿಸಿ ರಾಜ್ಯಪಾಲರಿಗೆ ಕಳುಹಿಸಿ ಕೊಡಲಾಗಿದೆ. ಈ ಮೂಲಕ 16 ತಿಂಗಳಿನಿಂದ ಖಾಲಿ ಉಳಿದಿದ್ದ ಆಯೋಗದ ಅಧ್ಯಕ್ಷ ಸ್ಥಾನ ಭರ್ತಿಯಾಗಲಿದೆ.

ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಒಪ್ಪಿಗೆ ನೀಡಿದ ಬಳಿಕ ಮುರುಗೇಶನ್ ರಾಜ್ಯ ಮಾನವ ಹಕ್ಕು ಆಯೋಗದ 2ನೇ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ. 2005ರಲ್ಲಿ ಆಯೋಗ ರಚನೆಯಾದ ಬಳಿಕ 2007ರಲ್ಲಿ ನ್ಯಾ. ಎಸ್.ಆರ್.ನಾಯಕ್ ಅವರನ್ನು ಮೊದಲ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 2012ರ ಜುಲೈ 25ರಂದು ನಾಯಕ್ ನಿವೃತ್ತಿಯಾದ ಬಳಿಕ ಹುದ್ದೆ ಖಾಲಿ ತೆರವಾಗಿತ್ತು.
ಮುರುಗೇಶನ್ ಯಾರು? : ದೆಹಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮುರುಗೇಶನ್ ತಮಿಳನಾಡು ಮೂಲದವರು. 1951ರಲ್ಲಿ ತಮಿಳುನಾಡಿನಲ್ಲಿ ಜನಿಸಿದ ಮುರುಗೇಶನ್, 1975ರಲ್ಲಿ ವಕೀಲರ ಅಸೋಸಿಯೇಷನ್ ಸದಸ್ಯರಾದರು. 1984ರಿಂದ 87 ರವರೆಗೆ ಮದ್ರಾಸ್ ವಿವಿ ಹಾಗೂ 1992ರಿಂದ 96ರವರೆಗೆ ಚೆನ್ನೈ ನಗರಪಾಲಿಕೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸಿದರು.
ರಿಟ್ ಅರ್ಜಿಗಳಿಗೆ, ಶಿಕ್ಷಣ ವ್ಯಾಜ್ಯಗಳಿಗೆ ಸರ್ಕಾರದ ವಿಶೇಷ ಅಭಿಯೋಜಕರಾಗಿ ಮುರುಗೇಶನ್ ಸೇವೆ ಸಲ್ಲಿಸಿದ್ದಾರೆ. 1998ರಲ್ಲಿ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡ ಅವರು, 2000ರಲ್ಲಿ ಮದ್ರಾಸ್ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಾಧೀಶರಾದರು ನಂತರ, 2001 ರಲ್ಲಿ ಕಾಯಂ ನ್ಯಾಯಾಧೀಶರಾದರು. 2012ರಲ್ಲಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ಅವರು, ಜೂನ್ 10, 2013ರಂದು ನಿವೃತ್ತರಾಗಿದ್ದಾರೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications