ರಾಮಮಂದಿರ ಉದ್ಘಾಟನೆ ಎಲೆಕ್ಷನ್ ಗಿಮಿಕ್: ಪುಲ್ವಾಮಾ ಸಾವಿನ ಬಗ್ಗೆ ಡಿ.ಸುಧಾಕರ್ ವಿವಾದಾತ್ಮಕ ಹೇಳಿಕೆ?: ಬಿಜೆಪಿ ಕಿಡಿ
ಬೆಂಗಳೂರು, ಡಿಸೆಂಬರ್ 31: ದಲಿತರನ್ನು ಚಪ್ಪಲಿಗಾಲಿನಲ್ಲಿ ಒದ್ದ ಕಾಂಗ್ರೆಸ್ ಸಚಿವರಾದ ಡಿ. ಸುಧಾಕರ್ ಅವರೇ, ಅಯೋಧ್ಯೆಯ ರಾಮ ಮಂದಿರ ವಿಕಸಿತ ಭಾರತದ ಅಭಿವೃದ್ಧಿ ಹಾಗೂ ಪರಂಪರೆಯ ಸಂಕೇತ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ಗೆ ಏಕೆ ರಾಮಮಂದಿರದ ಉಸಾಬರಿ ಎಂದು ಕರ್ನಾಟಕ ಬಿಜೆಪಿಯು ಖಾರವಾಗಿ ಪ್ರಶ್ನಿಸಿದೆ.
ಉತ್ತರ ಪ್ರದೇಶದ ಅಯೋಧ್ಯೆ ಶ್ರಿರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟಿಸಲಿರುವುದು, ರಾಮಮಂದಿರ ಕುರಿತು ಬಿಜೆಪಿ ನಾಯಕರು ಮಾತನಾಡುವುದು ಇಲ್ಲವೆ ಭಾರಿ ಚರ್ಚೆಯಾಗುತ್ತಿವೆ. ವಿಪಕ್ಷಗಳ ನಾಯಕರಿಗೆ ಮಂದಿರ ಲೋಕಾರ್ಪಣೆಗೆ ಆಹ್ವಾನಿಸಲಾಗಿದೆ. ಆದರೆ ಕಾಂಗ್ರೆಸ್ ಸೇರಿದಂತೆ ಕೆಲವು ವಿಪಕ್ಷ ನಾಯಕರು ಈ ವಿಚಾರವನ್ನು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ವಿರೋಧಿಸುತ್ತಿದ್ದಾರೆ.

ಇದೀಗ ಕಾಂಗ್ರೆಸ್ ಸಚಿವ ಡಿ. ಸುಧಾಕರ್ ಅವರು ಸಹ ಶ್ರೀರಾಮಮಂದಿರದ ಕುರಿತು ಹಾಗೂ ಪುಲ್ವಾಮಾ ಯೋಧರ ಕುರಿತು ಮಾತನಾಡಿದ್ದಾರೆ. ಈ ಮೂಲಕ ಸಚಿವರು ದೇಶದ ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಅಂತಲೂ ಹೇಳಲಾಗುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಭಾನುವಾರ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಸಚಿವರನ್ನು ಕಾಂಗ್ರೆಸ್ ಛೂ ಬಿಟ್ಟಿದೆ: ಬಿಜೆಪಿ
ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ಗೆ ಈಗೇಕೆ ರಾಮಮಂದಿರದ ಉಸಾಬರಿ? ಈ ಅಯೋಧ್ಯೆಯ ರಾಮ ಮಂದಿರ ಕೋಟ್ಯಂತರ ಭಾರತೀಯರ ದಶಕಗಳ ಕನಸು. ಅದೀಗ ನನಸಾಗುತ್ತಿದೆ. ಅಖಂಡ ಹಿಂದೂಗಳನ್ನು ಕೆಣಕಲೆಂದೇ ಸಚಿವ ಡಿ. ಸುಧಾಕರ್ ಅಂತಹ ತಲೆ ಮಾಸಿದ ಸಚಿವರನ್ನು ಕಾಂಗ್ರೆಸ್ ಛೂ ಬಿಟ್ಟಿರುವುದಂತು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದೆ.
ರಾಮಮಂದಿರ ಐಕ್ಯತೆಯ ಸಂಕೇತವಾದರೆ, ಕಾಂಗ್ರೆಸ್ ವಿಘಟನೆಯ ಸಂಕೇತ ಎಂಬುದು ಸುಧಾಕರ್ ಅವರ ಹೇಳಿಕೆಯಿಂದ ಸಾಬೀತಾಗುತ್ತಿದೆ ಎಂದು ಬಿಜೆಪಿ ಟಾಂಗ್ ನೀಡಿದೆ.

ಡಿ.ಸುಧಾಕರ್ ವಿವಾದಾತ್ಮಕ ಹೇಳಿಕೆ?
ಸದ್ಯ ರಾಮಮಂದಿರ ಉದ್ಘಾಟನೆ ಲೋಕಸಭಾ ಚುನಾವಣೆಯ ಗಿಮಿಕ್ ಎಂದು ಸಚಿವ ಡಿ. ಸುಧಾಕರ್ ಅವರು ಹೇಳಿದ್ದಾರೆ. ಈ ಹಿಂದಿನ ಬಾರಿ ಎಲ್ಲಿತ್ತು ರಾಮಮಂದಿರಾ? ಆಗ ಪುಲ್ವಾಮ ದಾಳಿ ತೋರಿಸಿದ್ದರು. ಅದ್ಯವಾವುದೋ ಸುಮ್ ಸುಮ್ಮನೇ ವಿಮಾನ ತೋರಿಸಿದ್ದರು. ಆಗಲೂ ಜನರು ಮರುಳರಾದರೂ. ಆಗ ದೇಶ ಕಾಪಾಡುವ ಜನರು ಪಾಪಾ ಎಷ್ಟು ಜನ ಯೋಧರ ಹತಾತ್ಮರಾದರೂ ಎಂದು ಅವರು ಹೇಳಿದ್ದಾರೆ.
ಹೀಗೆ ಹೇಳಿಕೆ ನೀಡುವ ಮೂಲಕ ಸಚಿವ ಸುಧಾಕರ್ ಜನರ ಕೆಂಗಣ್ಣಿಗೆ ಗುರಿಯಾದರಾ ಎಂಬ ಅನುಮಾನ ಕಾಡುತ್ತಿದೆ. ಏಕೆಂದರೆ ಯೋಧರ ಸಾವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ. ಎಷ್ಟು ಜನ ಯೋಧರು ಹುತಾತ್ಮರಾದರೂ ಎಂದು ಅವರು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಇದೀಗ ಹೆಚ್ಚು ಚರ್ಚೆ ಆಗುತ್ತಿದ್ದು, ಈ ಬಗ್ಗೆ ಕರ್ನಾಟಕ ಬಿಜೆಪಿ ಸಚಿವರನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications