D.Sudhakar Profile: ಹಿರಿಯೂರು ಕ್ಷೇತ್ರಕ್ಕೆ ಮಂತ್ರಿ ಸ್ಥಾನ: ಡಿ. ಸುಧಾಕರ್ ರಾಜಕೀಯ ಪರಿಚಯ
ಚಿತ್ರದುರ್ಗ, ಮೇ 27: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯೂರು ಕ್ಷೇತ್ರಕ್ಕೆ ಮಂತ್ರಿ ಸ್ಥಾನ ಸಿಕ್ಕಿದೆ. ಇಲ್ಲಿನ ಶಾಸಕ ಡಿ.ಸುಧಾಕರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ. ಸುಧಾಕರ್ ಅವರ ವ್ಯಕ್ತಿ ಪರಿಚಯ ಇಲ್ಲಿದೆ.
ದಿವಂಗತ ಎನ್. ದಯಶರಥಯ್ಯ ಮಗನಾಗಿ, 28/03/1961ರಲ್ಲಿ ಡಿ.ಸುಧಾಕರ್ ಚಳ್ಳಕೆರೆಯಲ್ಲಿ ಜನಿಸಿದರು. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಜನಿಸಿರುವ ಇವರು, ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಬಿಕಾಂ ಪದವಿ ಶಿಕ್ಷಣವನ್ನು ನ್ಯಾಷನಲ್ ಕಾಲೇಜು, ಶಿವಮೊಗ್ಗದಲ್ಲಿ ಮುಗಿಸಿದ್ದಾರೆ.

ಪದವಿ ಶಿಕ್ಷಣ ಮುಗಿಸಿದ ಬಳಿಕ ಬ್ಯುಸಿನೆಸ್ ಕಡೆ ಗಮನಹರಿಸಿದ್ದರು. ನಂತರ ಶ್ರೀಮತಿ ಹರ್ಷಿಣಿ ಎಂಬುವರೊಂದಿಗೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರಿಗೆ ಒಂದು ಗಂಡು ಮತ್ತು ಒಬ್ಬ ಹೆಣ್ಣು ಮಗಳಿದ್ದಾರೆ. ಇನ್ನು ಇವರ ಚಿಕ್ಕಪ್ಪರಾದ ಎನ್.ಜಯಣ್ಣ ಅವರು ಚಳ್ಳಕೆರೆ ಕ್ಷೇತ್ರದಲ್ಲಿ 1978 ಹಾಗೂ 1989ರಲ್ಲಿ ಎರಡು ಬಾರಿ ಶಾಸಕರಾಗಿದ್ದರು.
ಚಿಕ್ಕಪ್ಪನ ರಾಜಕೀಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಡಿ.ಸುಧಾಕರ್ ರಾಜಕೀಯ ದಾರಿಯನ್ನು ಕಂಡುಕೊಂಡರು. ಡಿ.ಸುಧಾಕರ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ 47,550 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದರು.
ನಂತರ ಚಳ್ಳಕೆರೆ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾದ್ದರಿಂದ 2008ರಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ದಿಢೀರ್ ಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 43,078 ಮತಗಳನ್ನು ಪಡೆದು 16,158 ಮತಗಳ ಅಂತರದಿಂದ ಅಮೋಘ ಗೆಲುವು ಸಾಧಿಸಿದ್ದರು.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಸುಧಾಕರ್
ಈ ಮೂಲಕ ಅವರು ಬಿಜೆಪಿ ಸರ್ಕಾರದಲ್ಲಿ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದರು. ಬದಲಾದ ಸಮಯದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆದರು. ಇನ್ನು 2013ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆಗ ಇವರಿಗೆ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ನಡೆದವು. ಆದರೆ ಅದು ಸಾಧ್ಯವಾಗಲಿಲ್ಲ.
2013ರಲ್ಲಿ ಡಿ.ಸುಧಾಕರ್ ಅವರಿಗೆ ಕಾಂಗ್ರೆಸ್ ಪಕ್ಷ ಬಿ ಫಾರಂ ನೀಡಿತ್ತು. ಜೆಡಿಎಸ್ ಅಭ್ಯರ್ಥಿ ದಿವಂಗತ ಎ.ಕೃಷ್ಣಪ್ಪ ವಿರುದ್ಧ ಕೂದಲೆಳೆ ಅಂತರದಲ್ಲಿ ಅಂದರೆ 1,205 ಮತಗಳನ್ನು ಪಡೆದು, ಮರು ಆಯ್ಕೆಯಾದರು. (71,661ಒಟ್ಟು ಮತಗಳು) ಇದರ ಜೊತೆಗೆ ಚಿತ್ರದುರ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಸಹ ಆಯ್ಕೆಯಾದರು.
ಸೋತ ಜಾಗದಲ್ಲೇ ಗೆದ್ದ ಡಿ.ಸುಧಾಕರ್
ಡಿ.ಸುಧಾಕರ್ 2018ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಆದರೆ ಈ ಚುನಾವಣೆಯಲ್ಲಿ 64,858 ಮತಗಳನ್ನು ಪಡೆದು, ಮತದಾರರ ತೀರ್ಪಿಗೆ ಸುಧಾಕರ್ ತಲೆ ಭಾಗಿದರು. ಯಾಕಂದರೆ ಬಿಜೆಪಿ ಅಭ್ಯರ್ಥಿ ಕೆ.ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸುಮಾರು 12 ಸಾವಿರ ಮತಗಳಿಂದ ಪರಾಭವಗೊಂಡರು. ಇದೀಗ ಮೇ 10 ರಂದು ನಡೆದ 2023ರ ರಾಜ್ಯ ವಿಧಾನಸಭಾ ಚುನಾವಣೆಯ ಮೇ 13 ರಂದು ನಡೆದ ಮತದಾನ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರ ವಿರುದ್ಧ 30,322 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಇದೀಗ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಒದಗಿ ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications