ಬಿಎಸ್ವೈ ಎಲ್ಲೇ ಊಟ ಮಾಡಲಿ, ದಲಿತರ ವೋಟ್ ನಮಗೇ ಗ್ಯಾರಂಟಿ
ಯಡಿಯೂರಪ್ಪ ಮತ್ತು ಆ ಪಕ್ಷದ ಮುಖಂಡರು ಎಷ್ಟೇ ದಲಿತರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲಿ, ಆ ಸಮುದಾಯದ ಮತ ಕಾಂಗ್ರೆಸ್ಸಿಗೇ ಎಂದು ಸಮಾಜ ಕಲ್ಯಾಣ ಖಾತೆಯ ಸಚಿವ ಎಚ್ ಆಂಜನೇಯ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗ, ಮೇ 19: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಆ ಪಕ್ಷದ ಮುಖಂಡರು ಎಷ್ಟೇ ದಲಿತರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲಿ, ಆ ಸಮುದಾಯದ ಮತ ಕಾಂಗ್ರೆಸ್ಸಿಗೇ ಎಂದು ಸಮಾಜ ಕಲ್ಯಾಣ ಖಾತೆಯ ಸಚಿವ ಎಚ್ ಆಂಜನೇಯ ವೋಟ್ ಬ್ಯಾಂಕ್ ರಾಜಕಾರಣದ ಮಾತನ್ನಾಡಿದ್ದಾರೆ.
ನಗರದಲ್ಲಿ ಶುಕ್ರವಾರ (ಮೇ 19) ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಆಂಜನೇಯ, ನಾಡಿನಲ್ಲಿ ಅಸ್ಪಶೃತೆ ಇನ್ನೂ ಜೀವಂತವಾಗಿದೆ. ಬಿಜೆಪಿ ನಾಯಕರ ಆಟ ಈ ವಿಚಾರದಲ್ಲಿ ನಡೆಯುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಯಡಿಯೂರಪ್ಪನವರಿಗೆ ನಿಜವಾಗಲೂ ಅಸ್ಪಶೃತೆ ವಿರುದ್ದ ಹೋರಾಡ ಬೇಕಿಂದಿದ್ದರೆ, ಹಾವೇರಿ ಜಿಲ್ಲೆಗೆ ಪ್ರವಾಸ ಮಾಡಲಿ. ಆ ಭಾಗದಲ್ಲಿ ದಲಿತರ ಮನೆಯಲ್ಲಿ ಮದುವೆಯಿದ್ದರೆ ಅಂಗಡಿ ಹೋಟೆಲ್ ಮುಚ್ಚುತ್ತಾರೆ. ಆ ಸಮುದಾಯದವರು ಅಂಗಡಿಯೊಳಗೆ ಪ್ರವೇಶಿಸುತ್ತಾರೆ ಎನ್ನುವುದಕ್ಕಾಗಿ ಬಾಗಿಲು ಹಾಕಲಾಗುತ್ತದೆ.
ಚುನಾವಣೆ ಸಮೀಪಿಸುತ್ತಿದ್ದಂತೇ ಬಿಜೆಪಿಯವರು ಹೊಸ ಪ್ರಯೋಗ ಮಾಡಲು ಹೊರಟಿದ್ದಾರೆ. ಬಿಜೆಪಿ ನಾಯಕರ ಆಟ ನಡೆಯುವುದಿಲ್ಲ, ಅವರು ಎಷ್ಟೇ ದಲಿತರ ಮನೆಯಲ್ಲಿ ಊಟ, ವಾಸ್ತವ್ಯ ಮಾಡಿದರೂ ಆ ಸಮುದಾಯದ ಮತ ನಮಗೇ ಎಂದು ಆಂಜನೇಯ ಹೇಳಿದ್ದಾರೆ.
ಜನ ಮಾತನಾಡದ ದೇವಾಲಯಕ್ಕೆ ಹೋಗುತ್ತಾರೆ, ಬುದ್ದಿ ಇಲ್ಲದ ಜನ ದೇಗುಲಕ್ಕೆ ಪ್ರವೇಶ ಕೇಳುತ್ತಾರೆ ಇದು ನಮ್ಮ ವ್ಯವಸ್ಥೆ. ದಲಿತ ಸಮುದಾಯದ ಮೇಲೆ ನಿಜವಾದ ಕಾಳಜಿ ಯಡಿಯೂರಪ್ಪನವರಿಗೆ ಇದ್ದರೆ, ನಾನು ಅವರನ್ನು ಗೌರವಿಸುತ್ತಿದ್ದೆ ಎಂದು ಆಂಜನೇಯ ಹೇಳಿದ್ದಾರೆ.
ಜಾತಿ, ಪಕ್ಷವನ್ನು ಮೀರಿ ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಜೀವಂತವಾಗಿರುವ ಅಸ್ಪಶೃತೆ ಎನ್ನುವ ಪಿಡುಗನ್ನು ಮಟ್ಟಹಾಕಬೇಕಾಗಿದೆ. ಅದು ಬಿಟ್ಟು, ಚುನಾವಣೆ ಸಮೀಪಿಸುತ್ತಿದ್ದಂತೇ, ದಲಿತರ ನೆನಪಾದರೆ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಆ ಸಮುದಾಯ ಸರಿಯಾದ ಪಾಠ ಕಲಿಸಲಿದೆ ಎಂದು ಆಂಜನೇಯ ಹೇಳಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications