ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್
ರಾಜ್ಯ ಕಾಂಗ್ರೆಸ್ನಲ್ಲಿ ದಲಿತ ನಾಯಕರು ತಮ್ಮ ಬಲ ಪ್ರದರ್ಶನಕ್ಕಾಗಿ ದಲಿತ ಸಮಾವೇಶ ಆಯೋಜಿಸಲು ಉತ್ಸುಕರಾಗಿದ್ದರು. ಈ ಮೂಲಕ ದಲಿತ ಸಿಎಂ ಹಾಗೂ ದಲಿತರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳುವ ಅಂದಾಜಿನಲ್ಲಿದ್ದರು. ಆದರೆ ಈ ದಲಿತ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ವಿಚಾರ ಈಗ ಸಂಚಲನ ಸೃಷ್ಟಿಸಿದೆ.
ಶೋಷಿತರ ಸಮಾವೇಶದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾವು ದಲಿತ ಸಮಾವೇಶ ನಡೆಸಲು ಸಿದ್ಧತೆ ನಡೆಸುತ್ತಿದ್ದೆವು. ಈಗ ಹೈಕಮಾಂಡ್ ಸೂಚನೆ ಮೇರೆಗೆ ಈ ಸಮಾವೇಶವನ್ನು ಮುಂದೂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ದಲಿತ ನಾಯಕರಿಗೆ ಇದರಿಂದ ನಿರಾಸೆಯಾಗಿದೆ.

ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾವೇಶ ಆಯೋಜಿಸಿದ್ದೆವು. ಆ ಸಮಾವೇಶದಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾದರೂ ಕೆಲವು ಈವರೆಗೆ ಅನುಷ್ಠಾನವೇ ಆಗಿಲ್ಲ. ಇದರ ಬಗ್ಗೆ ಚರ್ಚಿಸಲೆಂದೇ ದಲಿತ ಸಮಾವೇಶಕ್ಕೆ ತಯಾರಿ ನಡೆಸಿದ್ದೆವು. ಆದರೆ, ಸದ್ಯಕ್ಕೆ ಸಮಾವೇಶ ನಡೆಸುವುದು ಬೇಡ ಎಂದು ಹೈಕಮಾಂಡ್ ಹೇಳಿದೆ. ಇದರ ಹಿಂದೆ ರಾಜಕೀಯ ಕಾರಣವೂ ಇದೆ ಎಂದು ಬಾಂಬ್ ಸಿಡಿಸಿದ್ದಾರೆ.
ಸದ್ಯ ಕಾಂಗ್ರೆಸ್ನಲ್ಲೂ ಬಂಡಾಯ ಬೂದಿ ಮುಚ್ಚಿದ ಕೆಂಡದಂತಿದೆ. ಒಂದೆಡೆ ಸಿಎಂ ಬದಲಾವಣೆ ವಿಚಾರದ ಕಿಚ್ಚು ಹೊತ್ತಿಕೊಂಡಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಅತ್ತ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಮೇಲೆ ಹಲವರು ಕಣ್ಣಿಟ್ಟಿದ್ದರೆ, ಇತ್ತ ಡಿ.ಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ನಾಯಕರು ಹದ್ದಿನಕಣ್ಣಿಟ್ಟಿದ್ದಾರೆ.

ಮತ್ತೊಂದೆಡೆ ಈ ಎರಡು ಕುರ್ಚಿಗಳಿಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದ್ದು, ದಲಿತ ನಾಯಕರು ಕೂಡ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹಲವು ವರ್ಷಗಳಿಂದ ಈಡೇರದ ದಲಿತ ಸಿಎಂ ಕನಸನ್ನು ಸಾಕಾರಗೊಳಿಸಲು ತುದಿಗಾಗಲಲ್ಲಿ ನಿಂತಿದ್ದಾರೆ. ಇದಕ್ಕಾಗಿ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ದಲಿತ ನಾಯಕರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಯೂ ಬಂದಿದೆ.
ರಾಜ್ಯದಲ್ಲಿ ದಲಿತ ಸಮುದಾಯದ ನಾಯಕರಿಗೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಕೂಡ ಇತ್ತೀಚೆಗೆ ದೆಹಲಿಗೆ ತೆರಳಿ, ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅಲ್ಲದೆ ಹೈಕಮಾಂಡ್ ಸೂಚಿಸಿದರೆ ನಾನು ನನ್ನ ಸಚಿವ ಸ್ಥಾನದಿಂದ ಕೆಳಗಿಳಿದು ಕೆಪಿಸಿಸಿ ಅಧ್ಯಕ್ಷನಾಗುವೆ ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಲೋಕಸಭೆ ಚುನಾವಣೆವರೆಗೆ ಮಾತ್ರವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಹೇಳಿತ್ತು. ಆದರೆ ಈಗಲೂ ಯಾವುದೇ ಬದಲಾವಣೆಯಾಗಿಲ್ಲ. ನಾವು ಡಿಕೆ ಶಿವಕುಮಾರ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೋರುತ್ತಿಲ್ಲ. ಹೈಕಮಾಂಡ್ ಈ ಗೊಂದಲವನ್ನು ಪರಿಹರಿಸಬೇಕು ಎಂದು ಪರೋಕ್ಷವಾಗಿ ರಾಜಣ್ಣ ಹೇಳಿದ್ದರು. ಅಲ್ಲದೆ ನಾವು ದಲಿತ ಸಮಾವೇಶ ನಡೆಸಲು ಹೈಕಮಾಂಡ್ಗೆ ತಿಳಿಸಿದ್ದೇವೆ. ಅವರನ್ನೂ ಈ ಸಮಾವೇಶಕ್ಕೆ ಆಹ್ವಾನಿಸುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ದಿಢೀರನೆ ದಲಿತ ಸಮಾವೇಶಕ್ಕೆ ಹೈಕಮಾಂಡ್ ಬ್ರೇಕ್ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications