ತುಂಗಭದ್ರಾ ಡ್ಯಾಂ 7 ಗೇಟ್ಗಳಿಗೆ ಹಾನಿ: ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಸಂಕಷ್ಟ!
ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದ್ದು ಸರ್ಕಾರದ ಎಡವಟ್ಟಿನಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಈ ವಿಚಾರವಾಗಿ ಬಿಜೆಪಿ ಸಹ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಾಭದ್ರಾ ಡ್ಯಾಂನ ಏಳು ಗೇಟ್ಗಳು ಡ್ಯಾಮೇಜ್ ಆಗಿವೆ. ಇದರಿಂದ 4 ಜಿಲ್ಲೆಗಳ ಜೀವನಾಡಿಯಾಗಿರುವ ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ರೈತರ ಬದುಕು ಕೊಚ್ಚಿ ಹೋಗುವ ಆತಂಕ ಎದುರಾಗಿದೆ ಎಂದು ಬಿಜೆಪಿ ಹೇಳಿದೆ.
ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದ್ದರೂ ಎಚ್ಚೆತ್ತುಕೊಳ್ಳದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಕಡೆಗಣನೆಯಿಂದ ತುಂಗಭದ್ರಾ ಜಲಾಶಯದ 4, 11, 18, 20, 24, 27 ಹಾಗೂ 28ನೇ ಗೇಟ್ ಸೇರಿದಂತೆ 7 ಗೇಟ್ಗಳು ಬೆಂಡ್ ಆಗಿವೆ. ತುಂಗಾಭದ್ರ ಜಲಾಯನ ಪ್ರದೇಶ ವ್ಯಾಪ್ತಿಯಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ವ್ಯಾಪ್ತಿಗೆ ಒಳಪಟ್ಟಿದೆ.
ಏಳು ಗೇಟ್ಗಳ ಡ್ಯಾಮೇಜ್ನಿಂದ ಲಕ್ಷಾಂತರ ರೈತ ಕುಟುಂಬಗಳ ಬದುಕಿನ ಮೇಲೆ ಕಾರ್ಮೋಡ ಕವಿದಿದೆ. ಕಳೆದ ವರ್ಷ ಕೊಚ್ಚಿ ಹೋಗಿದ್ದ 19ನೇ ಕ್ರಸ್ಟ್ ಗೇಟ್ ರಿಪೇರಿ ಮಾಡಿ ಸರ್ಕಾರ ಕೈತೊಳೆದುಕೊಂಡಿತ್ತು. ಕನಿಷ್ಠ ಹೊಸ ಗೇಟ್ ಅಳವಡಿಸುವ ಕೆಲಸ ಸಹ ಮಾಡಿಲ್ಲ. ಸಿಎಂ ಸಿದ್ದರಾಮಯ್ಯನವರೇ, ಕೂಡಲೇ ಡ್ಯಾಂ ತಜ್ಞರ ಕರೆಯಿಸಿ ಕ್ರಮ ಕೈಗೊಳ್ಳಿ, ರೈತರಲ್ಲಿ ಉಂಟಾಗಿರುವ ಆತಂಕ ದೂರ ಮಾಡಿ ಹಾಗೂ ಡ್ಯಾಂ ಭರ್ತಿಯಾಗುವ ಮುನ್ನ ಶೀಘ್ರ ಕ್ರಮ ವಹಿಸಿ ಎಂದು ಆಗ್ರಹಿಸಿದೆ.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಗಾಢನಿದ್ರೆಗೆ ಜಾರಿದೆ. ಡ್ಯಾಂ ತಜ್ಞರ ವರದಿ ಕಸದ ಬುಟ್ಟಿ ಸೇರಿದೆ. ಎಲ್ಲಾ ಗೇಟ್ಗಳ ಬದಲಾವಣೆ ವಿಚಾರ ಕೊಚ್ಚಿ ಹೋಗಿದೆ. 2 ಬೆಳೆ ಬೆಳೆಯುವ ಕಲ್ಯಾಣ ಕರ್ನಾಟಕದ ರೈತರ ಕನಸು ಭಗ್ನವಾಗಿದೆ. ತುಂಗಾಭದ್ರ ನೀರು ಆಂಧ್ರ, ತೆಲಂಗಾಣ ಪಾಲಾಗಿದೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರವಿರಲಿ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಟಿಬಿ ಡ್ಯಾಂನ 130 ಟಿಎಂಸಿ ನೀರು ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಪಾಲಾಗಿದೆ. ಕರ್ನಾಟಕದ ರೈತರಿಗಾದ ಈ ನಷ್ಟಕ್ಕೆ ಯಾರು ಹೊಣೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಅನ್ಯರಾಜ್ಯಗಳಿಗೆ ನೀರು, ರಾಜ್ಯದ ರೈತರಿಗೆ ಕಣ್ಣೀರು
➡️ಕಾವೇರಿ ನೀರು
ತಮಿಳುನಾಡು ಪಾಲು
➡️ತುಂಗಾಭದ್ರಾ ನೀರು
ಆಂಧ್ರ ಪಾಲು
➡️ನಾರಾಯಣಪುರ ಡ್ಯಾಂ
ನೀರು ತೆಲಂಗಾಣ ಪಾಲು
ನಮ್ಮ ನೀರು, ನಮ್ಮ ಹಕ್ಕು ಅಂತ ಪುಂಗಿದ ಸಚಿವ ಡಿ.ಕೆ.ಶಿವಕುಮಾರ್ ಅವರೇ, ತುಂಗಾಭದ್ರ ಡ್ಯಾಂ ನೀರು ಆಂಧ್ರದ ಪಾಲಾಗುವ ಮುನ್ನ ಕಣ್ತೆರೆದು ಅನ್ನದಾತರ ಹಿತ ಕಾಪಾಡಿ ಎಂದು ಬಿಜೆಪಿ ಈ ವಿಚಾರವಾಗಿ ಸರಣಿ ಟ್ವೀಟ್ಗಳನ್ನು ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications