ದಾಂಡೇಲಿ: 14 ವಿದ್ಯಾರ್ಥಿನಿಯರ ಕೈಗಳ ಮೇಲೆ ಬ್ಲೇಡಿನಿಂದ ಹೆಚ್ಚಿದ ಗುರುತುಗಳು ಪತ್ತೆ
ಬೆಂಗಳೂರು, ಸೆಪ್ಟಂಬರ್ 21: ದಾಂಡೇಲಿಯ ಖಾಸಗಿ ಶಾಲೆಯ ಸುಮಾರು 14 ವಿದ್ಯಾರ್ಥಿನಿಯರ ಕೈಲಿ ಕಂಡು ಬಂದ ಗುರುತುಗಳು ಈ ಭಾಗದ ಪೋಷಕರಲ್ಲಿ ಆತಂಕ ಹುಟ್ಟು ಹಾಕಿದೆ. ಖಾಸಗಿ ಶಾಲೆಯ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಕೈಯಲ್ಲಿ ಗುರುತುಗಳ ಕಂಡು ಬಂದಿವೆ.
ದಾಂಡೇಲಿ ಪ್ರದೇಶದಲ್ಲಿನ ಖಾಸಗಿ ಶಾಲೆಯ ಸುಮಾರು 14 ವಿದ್ಯಾರ್ಥಿಗಳ ಮಣಿಕಟ್ಟು ಮತ್ತು ಕೈಗಳಲ್ಲಿ ಬ್ಲೇಡಿನಿಂದ ಹೆಚ್ಚಿದ ಗುರುತುಗಳು ಪತ್ತೆಯಾಗಿವೆ. ಇದನ್ನು ಗಮನಿಸಿದರೆ ಆ ವಿದ್ಯಾರ್ಥಿನಿಯರಿಗೆ ಸ್ವಯಂ ಹಾನಿ ಮಾಡಿಕೊಂಡಿದ್ದಾರೆ ಎಂದನಿಸುತ್ತಿದೆ. ಇವರನ್ನು 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ ಎಂದು ವರದಿ ಆಗಿದೆ.

ಶಾಲಾ ಹೆಣ್ಣು ಮಕ್ಕಳ ಕೈಯಲ್ಲಿ ಬ್ಲೇಡಿನಿಂದ ಹಾನಿಯಾದ ಗುರುತುಗಳ ಪತ್ತೆಯಾಗಿದ್ದ ಬಗ್ಗೆ ಶಾಲಾ ಅಧಿಕಾರಿಗಳ ಗಮನಕ್ಕೆ ತರಲಾಯಿತಾದರೂ ಸಹ ಯಾವುದೇ ಪ್ರಯೋಜನ ಆಗಿಲ್ಲ. ವಿದ್ಯಾರ್ಥಿಗಳು ಏಕೆ ಹೀಗೆ ಮಾಡಿಕೊಂಡಿದ್ದಾರೆ ಇಲ್ಲ ಈ ಗುರುತುಗಳು ಆಗಲು ಕಾರಣವೇನು ಎಂದು ಕೇಳಿದರೆ ಅದಕ್ಕೆ ಪೋಸಕರಾಗಲಿ ಇಲ್ಲವೇ ಶಾಲಾಧಿಕಾರಿಗಳ ಬಳಿ ಉತ್ತರ ಸಿಗಲಿಲ್ಲ. ಇದು ಇನ್ನಷ್ಟು ಕುತೂಹಲ ಮತ್ತು ಅನುಮಾನಗಳಿಗೆ ಕಾರಣವಾಗಿದೆ.
ಸೆಂ.ಮೀ.ನಷ್ಟು ಗಾಯದ ಗುರುತುಗಳು
ವಿದ್ಯಾರ್ಥಿನಿಯರ ಕೈ ಮೇಲೆ ಇಂತಹ ಗುರುತುಗಳ ಪತ್ತೆ ಮಾಡಿ ಬೆನ್ನಲ್ಲೆ ಶಾಲಾ ಅಧಿಕಾರಿಗಳು ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಬಳಿಕ ಕಾರವಾರದ ಜಿಲ್ಲಾ ಸಾರ್ವಜನಿಕ ಸೂಚನಾ ಉಪನಿರ್ದೇಶಕ (DDPI) ಕಚೇರಿಗೆ ಮಾಹಿತಿ ರವಾನಿಸಿದರು.
ಈ 14 ಮಂದಿ ಹೆಣ್ಣು ಮಕ್ಕಳ ಗುಂಪಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಎಡಗೈ ನಲ್ಲಿ ಬ್ಲೇಡ್ ನಿಂದ ಹಾನಿಯಾದ ಗಾಯಗಳು ಇವೆ. ಅವರ ಮಣಿಕಟ್ಟಿನ ಮೇಲೆ ಕೆಲವು ಸೆಂಟಿ ಮೀಟರ್ಗಳಷ್ಟು ಉದ್ದ ಗಾಯಗಳಾಗಿವೆ. ಒಬ್ಬೊಬ್ಬ ವಿದ್ಯಾರ್ಥಿನಿಯ ಕೈ ಮೇಲೆ ಸುಮಾರು 14 ರಿಂದ 15 ಗಾಯಗಳಾಗಿವೆ. ಈ ಬ್ಲೇಡ್ (ರೇಜರ್)ಗಳನ್ನು ಸಾಮಾನ್ಯವಾಗಿ ಶೇವಿಂಗ್ಗೆ ಬಳಸುತ್ತಾರೆ.
ಸದ್ಯ ಅಷ್ಟು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ದಾಂಡೇಲಿಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ ಅವರ ಆರೋಗ್ಯ ದಲ್ಲಿ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ವಿದ್ಯಾರ್ಥಿನಿಯರ ಪ್ರತಿಕ್ರಿಯೆ ಏನು?
ಘಟನೆ ಬಗ್ಗೆ ಶಾಲೆಯ ಸಿಬ್ಬಂದಿಯನ್ನು ಪ್ರಶ್ನಿಸಲಾಗಿದೆ. ವಿದ್ಯಾರ್ಥಿನಿಯರು ಒಬ್ಬರ ಹೇಳಿಕೆಗಳು ವಿಭಿನ್ನವಾಗಿವೆ. ಇಂತಹ ಸ್ವಯಂ ಹಾನಿ ಮಾಡಿಕೊಳ್ಳಲು ಪ್ರಚೋದಿಸಿದ್ದು ಯಾರು ಎಂಬುದರ ಕುರಿತು ಅರ್ಥಮಾಡಿಕೊಳ್ಳಲು ಮನೋವೈದ್ಯರ ಮಾರ್ಗದರ್ಶನ ತೆಗೆದುಕೊಳ್ಳುತ್ತೇವೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಾಹಿತಿ ನೀಡಿದ್ದಾರೆ.
ಹೆಣ್ಣುಮಕ್ಕಳ ಕೈಗೆ ಯಾಕೆ ಹೀಗಾಯಿತು? ಮಕ್ಕಳಾಗಲೀ ಈ ಬಗ್ಗೆ ಮಾತನಾಡುತ್ತಿಲ್ಲ, ಪೋಷಕರಾಗಲೀ ಬಹಿರಂಗವಾಗಿ ಏನನ್ನೂ ಹೇಳುತ್ತಿಲ್ಲ. ಐದರಿಂದ ಆರು ಮಕ್ಕಳನ್ನು ಅವರ ಪೋಷಕರು ಗದರಿಸಿದ್ದಾರೆ ಅದಕ್ಕಾಗಿಯೇ ಹೀಗೆ ಮಾಡಿಕೊಂಡಿದ್ದೇನೆ ಎಂದು ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನನ್ನ ಸ್ನೇಹಿತ ನನ್ನೊಂದಿಗೆ ಮಾತನಾಡುತ್ತಿಲ್ಲ, ಅದಕ್ಕಾಗಿ ನಾನು ಹೀಗೆ ಮಾಡಿಕೊಂಡಿದ್ದೇನೆ ಎಂದಿದ್ದಾಳೆ.
ಈ ಘಟನೆಯ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ಮನೋವೈದ್ಯರ ತಂಡದ ನೆರವು ಪಡೆಯುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
-
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications