Darshan Case: ಜೈಲಾಧಿಕಾರಿಗಳಿಂದ ನ್ಯಾಯಾಂಗ ನಿಂದನೆ: ಕೋರ್ಟ್ ಮೊರೆಹೋದ ದರ್ಶನ್ ಪರ ವಕೀಲ
Darshan Thoogudeepa Case: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರ ಜೈಲಿನ ನರಕಯಾತನೆ ಮುಂದುವರಿದಿದೆ. ಕನಿಷ್ಠ ಸೌಲಭ್ಯಗಳಿಗಾಗಿ ಕೋರ್ಟ್ ಆದೇಶ ನೀಡಿತ್ತು. ಇದೀಗ ಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕಾಗಿ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ಆರೋಪಿ ದರ್ಶನ್ ಪರ ವಕೀಲರು ಸೋಮವಾರ ಸಲ್ಲಿಸಿದ್ದಾರೆ.
ಹೌದು, ಇತ್ತೀಚೆಗೆ ನಟ ದರ್ಶನ್ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್ ಶೀಟ್ ನೀಡುವಂತೆ ಹಾಗೂ ತಮ್ಮನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇವುಗಳ ವಿಚಾರಣೆ ವೇಳೆ ನಟ ದರ್ಶನ್ ಹಾಗೂ ಇತರ ಆರೋಪಿಗಳು ವಿಡಿಯೋ ಕಾನ್ಫ್ರೆನ್ಸ್ ಮೂಲಕ ಹಾಜರಾಗಿದ್ದರು.

ಈ ವೇಳೆ ನ್ಯಾಯಾಲಯದಿಂದ ತಮಗೆ ವಿಷ ನೀಡುವಂತೆ ಆದೇಶಿಸಬೇಕು. ನನಗೆ ಇಲ್ಲಿ ಬದುಕಲು ಆಗುತ್ತಿಲ್ಲ. ಬಿಸಿಲಿನ ದರ್ಶನವೇ ಆಗಿಲ್ಲ. ಕೈಗಳಿಗೆ ಫಂಗಸ್ ಉಂಟಾಗಿದೆ ಎಂದೆಲ್ಲ ನಟ ದರ್ಶನ್ ಮನವಿ ಮಾಡಿದ್ದರು. ಹಾಗೆ ಆದೇಶಿಸಲು ಬರುವುದಿಲ್ಲ. ಈ ರೀತಿ ಕೇಳುವುದು ತಪ್ಪು. ನಿಮಗೆ ಜೈಲಿನ ನಿಯಮಗಳ ಅಡಿಯಲ್ಲಿ ಕನಿಷ್ಠ ಸೌಲಭ್ಯ ಒದಗಿಸಲಾಗುವುದು. ನಂತರ ಜೈಲಿನ ಆವರಣದಲ್ಲಿ ಓಡಾಟಕ್ಕೆ ಅನುಮತಿ ನೀಡಿ ನ್ಯಾಯಾಧೀಶರು ಸೆಪ್ಟಂಬರ್ 09ರಂದು ಆದೇಶಿಸಿದ್ದರು. ಈ ವೇಳೆ ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ಯಾವುದೇ ಸಕಾರಣ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟು ದರ್ಶನ್ ಮನವಿಯನ್ನು ನಿರಾಕರಿಸಿತ್ತು.
ಮೋರ್ಟ್ ಆದೇಶ ಪಾಲಿಸಿದ ಜೈಲಾಧಿಕಾರಿಗಳು: ವಕೀಲ
ಇದಾದ ಬಳಿಕ ಜೈಲು ಅಧಿಕಾರಿಗಳಿಗೆ ಆದೇಶ ಪ್ರತಿ ಇ-ಮೇಲ್ ಕಳುಹಿಸಲಾಗಿದೆ. ಆದರೆ ಇದಕ್ಕೆ ಅವರಿಂದ ಸ್ಪಂದನೆ ಸಿಕ್ಕಿಲ್ಲ . ಅಲ್ಲದೇ ಜೈಲಲ್ಲಿರುವ ದರ್ಶನ್ ಅವರಿಗೆ ಕನಿಷ್ಠ ಸೌಲಭ್ಯ ನೀಡುವಂತೆ ಕೋರ್ಟ್ ಆದೇಶ ನೀಡಿದ್ದರು ಸಹಿತ ಸೌಲಭ್ಯಗಳನ್ನು ನೀಡಿಲ್ಲ. ಜೈಲಾಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದು ಸ್ಪಷ್ಟವಾಗಿದೆ ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ದೂರಿದ್ದಾರೆ.
ಅಲ್ಲದೇ ದರ್ಶನ್ಗೆ ದಿಂಬು ಹಾಸಿಗೆ ಸೇರಿ ಅಗತ್ಯ ಸೌಲಭ್ಯ ಸಿಗುತ್ತಿದೆಯೊ ಇಲ್ಲವೋ ಎಂದು ನಾನೇ ಜೈಲಿಗೆ ಹೋಗಿ ವಿಚಾರಿಸಿದ್ದೇನೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿಲ್ಲ. ಇದರಿಂದ ದರ್ಶನ್ ಅವರಿಗೆ ತೊಂದರೆ ಆಗುತ್ತಿದೆ. ನ್ಯಾಯಾಂಗ ನಿಂದನೆ ಆಗಿದೆ ಎಂದು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ್ದಾರೆ. ಜೈಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ. ಸದ್ಯ ಈ ಅರ್ಜಿ ವಿಚಾರಣೆ ನಡೆಯಬೇಕಿದೆ. ಜೈಲಾಧಿಕಾರಿಗಳು ಸೌಲಭ್ಯ ಒದಗಿಸುವವರೆಗೂ ದರ್ಶನ್ ಯಾತನೆ ಮುಂದುವರಿಯಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications