Darshan Thoogudeepa ದರ್ಶನ್ ಚಾರ್ಜ್ಶೀಟ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು
Darshan Chargesheet: ನಟ ಹಾಗೂ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ತುಗುದೀಪ ಅವರ ಚಾರ್ಜ್ಶೀಟ್ನ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಬಗ್ಗೆ ಕೋರ್ಟ್ ಸಹ ಮಹತ್ವದ ಆದೇಶ ನೀಡಿದೆ. ಕೋರ್ಟ್ ಆದೇಶಕ್ಕೂ ಮುನ್ನ ಜಿ. ಪರಮೇಶ್ವರ ಅವರು ಮಾತನಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರೇಶ್ವರ್ ಅವರು, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್ಗೂ ಚಾರ್ಜ್ಶೀಟ್ ನೀಡಲಾಗುತ್ತದೆ. ಚಾರ್ಜ್ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ಶೀಟ್ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.

ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ.
ಇನ್ನು ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ ಎಂದಷ್ಟೇ ಹೇಳಿದರು.

ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗಿದ್ದಾರೆ. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದು ಹೇಳಿದರು.
ಬಿಜೆಪಿ ಕಚೇರಿ ಸ್ಫೋಟಿಸುವ ಸಂಚು ನಡೆದಿದ್ದ ಅಂಶ ಇದೆ
ಇನ್ನು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೊಂಡಿದೆ. ಚಾರ್ಜ್ಶೀಟ್ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿರುವ ಉಳಿದ ವಿಚಾರಗಳ ಬಗ್ಗೆ ಗೊತ್ತಿಲ್ಲ ಎಂದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications