Darshan: ದರ್ಶನ್ ಜೈಲಿನಲ್ಲಿ ನೋವಿನಲ್ಲಿದ್ದಾರೆ: ಶಾಂಕಿಂಗ್‌ ಹೇಳಿಕೆ ನೀಡಿದ ವಕೀಲರು

ಬೆಂಗಳೂರು, ಜುಲೈ 04: ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ ಎಂಬ ವಿಚಾರವಾಗಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದಂದುಕೊಲೆ ಮಾಡಿದ ದರ್ಶನ್ ಅಂಡ್ ಗ್ಯಾಂಗ್ ಇದೀಗ ಜೈಲು ಸೇರಿದ್ದು, ಜೈಲಿನಲ್ಲಿ ನಟ ದರ್ಶನ್‌ ವಿಲವಿಲ ಎನ್ನುತ್ತಿದ್ದಾರೆ.

ದರ್ಶನ್‌ ಅವರು ಜೈಲಿನಲ್ಲಿ ಅನುಭವಿಸುತ್ತಿರುವ ನೋವಿನ ಬಗ್ಗೆ ವಕೀಲರು ಮಾಹಿತಿ ಹಂಚಿಕೊಂಡಿದ್ದು, ದರ್ಶನ್ ಅವರನ್ನು ಬಂಧಿಸಿ ತಿಂಗಳಾಗುತ್ತಾ ಬಂದಿದೆ. ಮೊದಲು ಕೆಲವು ದಿನ ದರ್ಶನ್ ಅವರನ್ನು ತೀವ್ರವಾಗಿ ವಿಚಾರಣೆ ಮಾಡಲಾಯಿತು. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈಗ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರು ಜೈಲಿನಲ್ಲಿ ಸಾಕಷ್ಟು ನೋವಿನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

Darshan Thoogudeepa Is Very Sad In Jail Says His Lawyer

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರು ಸದ್ಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ನಿತ್ಯವೂ ಅವರು ಕಂಬಿಗಳ ಮಧ್ಯೆ ಸಮಯ ಕಳೆಯಬೇಕಿದೆ. ದರ್ಶನ್ ಅವರಿಗೆ ಜೈಲುವಾಸ ನರಕಯಾತನೆ ಅನಿಸುತ್ತಿದೆ. ಈ ಬಗ್ಗೆ ಅವರ ಪರ ವಕೀಲರು ಮಾತನಾಡಿದ್ದು,'ದರ್ಶನ್ ಅವರು ಬೇಸರದಲ್ಲಿದ್ದಾರೆ. ಅವರಿಗೆ ಸಾಕಷ್ಟು ನೋವಿದೆ. ಅವರು ಸಾಕಷ್ಟು ಕಷ್ಟಪಟ್ಟು ಸ್ಟಾರ್​ಪಟ್ಟ ಪಡೆದಿದ್ದಾರೆ.

ನಟ ದರ್ಶನ್‌ ಅವರ ಮೇಲೆ ಈಗ ಇಂಥ ಆರೋಪ ಬಂದಿದ್ದಕ್ಕೆ ಅವರಿಗೆ ನೋವಿದೆ. ಅವರು ಹೊರಗೆ ಬಂದೇ ಬರುತ್ತಾರೆ. ಸಿನಿಮಾ ಮಾಡಿಯೇ ಮಾಡುತ್ತಾರೆ. ಅವರ ಅಭಿಮಾನಿಗಳು ಇಟ್ಟಿರೋ ಗೌರವದಿಂದ ಮತ್ತೊಂದು ಹಂತಕ್ಕೆ ಹೋಗುತ್ತಾರೆ ಎಂದು ವಕೀಲರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+