Darshan Thoogudeepa: ಜೈಲಿನಲ್ಲಿದ್ದರೂ ಕರಗಲಿಲ್ಲ ಕೊಬ್ಬು: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಬಳ್ಳಾರಿ, ಸೆಪ್ಟೆಂಬರ್ 12: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬರೋಬ್ಬರಿ ಮೂರು ತಿಂಗಳು ಜೈಲಿನಲ್ಲಿ ಕಳೆದಿದ್ದರೂ ನಟ ದರ್ಶನ್ ಅಹಂಕಾರ ಮಾತ್ರ ಸ್ವಲ್ಪವೂ ಕಡಿಮೆಯಾಗಿಲ್ಲ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸುವುದು ಕ್ಯಾಮಾರದಲ್ಲಿ ಸೆರೆಯಾಗಿದೆ.
ಪೊಲೀಸರು ಬಂಧಿಸಿದ ಆರಂಭದಲ್ಲಿ ನಕಲಿ ಪಶ್ಚಾತ್ತಾಪ ತೋರ್ಪಡಿಸಿದ್ದ ದರ್ಶನ್ ಈಗ ತಮ್ಮ ನಿಜ ವ್ಯಕ್ತಿತ್ವ ಪ್ರದರ್ಶಿಸುತ್ತಿದ್ದಾರೆ. ತಮ್ಮದು ಅದೆಂಥಹಾ ದುರುಳ ವ್ಯಕ್ತಿತ್ವ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲನ್ನು ಹಣದ ದರ್ಪ ಬಳಸಿ ರೆಸಾರ್ಟ್ ಮಾಡಿಕೊಂಡು ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿರುವ ದರ್ಶನ್,ಸಂದರ್ಶಕರ ಕೊಠಡಿಗೆ ಬರುವಾಗ ಕ್ಯಾಮೆರಾಗಳನ್ನು ನೋಡಿ ಅಸಹ್ಯವಾಗಿ ಸಂಜ್ಞೆ ಮಾಡಿದ್ದಾರೆ.

ಇಂದು(ಗುರುವಾರ) ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ಭೇಟಿಯಾಗಲು ಬಂದಿದ್ದರು. ಈ ವೇಳೆ ಸೆಲ್ನಿಂದ ಹೊರ ಬಂದ ದರ್ಶನ್ ಮಿಡಲ್ ಫಿಂಗರ್ ತೋರಿಸಿ ಗಾಂಚಾಲಿ ತೋರಿಸಿದ್ದಾರೆ. ಜೈಲಿನ ಹೊರಗೂ ಇದೇ ದರ್ಪ ತೋರಿಸುತ್ತಿದ್ರು. ಈಗಲೂ ಇದೇ ರೀತಿ ಮಾಡಿದ್ದಾರೆ.ಪೊಲೀಸರ ಜೊತೆಗೆ ಬರುತ್ತಿದ್ದರು ಎರಡು ಕೈಗಳಲ್ಲೂ ಮಿಡಲ್ ಫಿಂಗರ್ ತೋರುತ್ತಾ ಬಂದಿದ್ದು, ಇದೀಗ ಎರಡು ಕೈಗಳಲ್ಲೂ ಮಿಡಲ್ ಫಿಂಗರ್ ತೋರುತ್ತಾ ಬಂದಿರುವ ಫೋಟೋ ಹಾಗೂ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ ಬರೋಬ್ಬರಿ ಮೂರು ತಿಂಗಳು ಕಳೆದರು ನಟ ದರ್ಶನ್ ದುರಂಹಕಾರ ಮಾತ್ರ ಕಡಿಮೆಯಾಗಿಲ್ಲ. ಪೊಲೀಸರ ಸುತ್ತಮುತ್ತ ಇರುವಾಗಲೇ ನಟ ದರ್ಶನ್ ಅವರು ಅಸಭ್ಯ ವರ್ತನೆ ತೋರಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications