KSRTC Tour Package: ದಸರಾ 2025 ಪ್ರಯುಕ್ತ ಪ್ರವಾಸ ಪ್ಯಾಕೇಜ್ ಘೋಷಣೆ! ಮಾರ್ಗಗಳು, ದರ-ವಿವರ
ಮಂಗಳೂರು, ಸೆಪ್ಟಂಬರ್ 22: ಈ ವರ್ಷದ ದಸರಾ ಹಬ್ಬದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಮಂಗಳೂರು ವಿಭಾಗವು ಪ್ರವಾಸಿಗರಿಗಾಗಿ ಮೂರು ವಿಭಿನ್ನ ಮತ್ತು ಆಕರ್ಷಕ ಪ್ಯಾಕೇಜ್ಗಳನ್ನು ಪ್ರಕಟಿಸಿದೆ. ಈ ಪ್ಯಾಕೇಜ್ಗಳು ಸೆಪ್ಟೆಂಬರ್ 22, 2025 ರಿಂದ ಅಕ್ಟೋಬರ್ 02, 2025 ರವರೆಗೆ ಲಭ್ಯವಿದೆ. ಭಕ್ತರು ಮತ್ತು ಪ್ರವಾಸಿಗರಿಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ತಾಣಗಳನ್ನು ಸುಲಭವಾಗಿ ತಲುಪಲು ಇದೊಂದು ಉತ್ತಮ ಅವಕಾಶವಾಗಿದೆ.
KSRTC ಕೊಲ್ಲೂರು ಟೂರ್ ಪ್ಯಾಕೇಜ್
ಕೊಲ್ಲೂರು ಟೂರ್ ಪ್ಯಾಕೇಜ್ ಈ ಒಂದು ದಿನದ ಪ್ರವಾಸವು ಇದಾಗಿದ್ದು, ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಬಸ್ ಸಂಚಾರ ಆರಂಭವಾಗುತ್ತದೆ. ಇದು ಉಚ್ಚಿಲ ಮಹಾಲಕ್ಷ್ಮೀ, ಕಾಪು ಶ್ರೀ ಮರಿಯಮ್ಮ, ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ಮತ್ತು ಮರಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯಗಳ ದರ್ಶನವನ್ನು ಒಳಗೊಂಡಿದೆ. ರಾತ್ರಿ 8 ಗಂಟೆಗೆ ಬಸ್ಸು ಮಂಗಳೂರಿಗೆ ಮರಳುತ್ತದೆ. ಪ್ರಯಾಣ ದರ ವಯಸ್ಕರಿಗೆ ₹600 ಮತ್ತು 6 ರಿಂದ 12 ವರ್ಷದ ಮಕ್ಕಳಿಗೆ ₹500 ಆಗಿದೆ.

KSRTC ಮಡಿಕೇರಿ ಟೂರ್ ಪ್ಯಾಕೇಜ್
ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಇಚ್ಛಿಸುವವರಿಗಾಗಿ ಈ ಪ್ರವಾಸವನ್ನು ಆಯೋಜಿಸಲಾಗಿದೆ. ಇದು ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಪ್ರಯಾಣ ಪ್ರಾರಂಭಿಸುತ್ತದೆ. ಮಡಿಕೇರಿಯ ರಾಜಾಸೀಟ್, ಅಬ್ಬಿಫಾಲ್ಸ್, ನಿಸರ್ಗಧಾಮ ಮತ್ತು ಗೋಲ್ಡನ್ ಟೆಂಪಲ್ (ಬೈಲಕುಪ್ಪೆ) ತಾಣಗಳಿಗೆ ಮಾರ್ಗವಾಗಿ ಸಾಗುತ್ತದೆ. ಬಸ್ ರಾತ್ರಿ 9:30 ಕ್ಕೆ ಮಂಗಳೂರಿಗೆ ತಲುಪುತ್ತದೆ. ಈ ಪ್ಯಾಕೇಜ್ಗೆ ವಯಸ್ಕರಿಗೆ ₹600 ಹಾಗೂ ಮಕ್ಕಳಿಗೆ ₹500 ಟಿಕೆಟ್ ದರ ನಿಗದಿಪಡಿಸಲಾಗಿದೆ.
KSRTC ಸಿಗಂದೂರು ಟೂರ್ ಪ್ಯಾಕೇಜ್
ಈ ಹೊಸ ಪ್ರವಾಸ ಪ್ಯಾಕೇಜ್ ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಹೊರಟು, ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಭೇಟಿ ನೀಡುತ್ತದೆ. ರಾತ್ರಿ 7:30 ಕ್ಕೆ ಮರಳಿ ಮಂಗಳೂರಿಗೆ ನಿಲ್ದಾಣಕ್ಕೆ ಬರುತ್ತದೆ. ಈ ಪ್ರವಾಸದ ದರ ವಯಸ್ಕರಿಗೆ ₹700 ಮತ್ತು ಮಕ್ಕಳಿಗೆ ₹600 ನಿಗದಿಪಡಿಸಲಾಗಿದೆ.
KSRTC: ನವದುರ್ಗ ದರ್ಶನ ಪ್ಯಾಕೇಜ್
ಮಂಗಳೂರು ಸುತ್ತಮುತ್ತಲಿನ ಒಂಬತ್ತು ದೇವಾಲಯಗಳಿಗೆ ಭೇಟಿ ನೀಡುವ ಈ ಪ್ರವಾಸವು ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8:30 ಕ್ಕೆ ಮರಳಿ ಮಂಗಳೂರಿಗೆ ಬರುತ್ತದೆ. ಮಂಗಳಾದೇವಿ, ಬಪ್ಪನಾಡು, ಕಟೀಲು, ಸಸಿಹಿತ್ಲು, ಕುದ್ರೋಳಿ ಸೇರಿದಂತೆ ನವದುರ್ಗೆಯರ ದರ್ಶನಕ್ಕೆ ಅವಕಾಶವಿದೆ. ಈ ಪ್ಯಾಕೇಜ್ಗೆ ವಯಸ್ಕರಿಗೆ ₹500 ಮತ್ತು ಮಕ್ಕಳಿಗೆ ₹400 ದರ ನಿಗದಿಪಡಿಸಲಾಗಿದೆ.
ಮೈಸೂರು ದಸರಾಗೆಂದು ನೌಕರಿಗೆ ರಜೆ ಹಾಕಿರುವವರು, ಶಾಲಾ ರಜೆಯನ್ನು ಮಕ್ಕಳೊಂದಿಗೆ ಖುಷಿಯಿಂದ ಕಳೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಜೊತೆಗೆ ವಿವಿಧ ಧಾರ್ಮಿಕ ಸ್ಥಳವನ್ನು ಹಬ್ಬದ ಇದನಗಳಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ. ಈ ಎಲ್ಲಾ ಪ್ಯಾಕೇಜ್ಗಳಿಗೂ ಆನ್ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು. ಅದಕ್ಕಾಗಿ ನೀವು ಅಧಿಕೃತ ವೆಬ್ಸೈಟ್ www.ksrtc.in ಭೇಟಿ ನೀಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣಗಳಲ್ಲಿ ಮುಂಗಡ ಕೌಂಟರ್ಗಳ ವ್ಯವಸ್ಥೆಯನ್ನೂ ತೆರೆಯಲಾಗಿದೆ ಎಂದು ಮಂಗಳೂರು KSRTC ಘಟಕದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications