KSRTC Tour Package: ದಸರಾ 2025 ಪ್ರಯುಕ್ತ ಪ್ರವಾಸ ಪ್ಯಾಕೇಜ್ ಘೋಷಣೆ! ಮಾರ್ಗಗಳು, ದರ-ವಿವರ
ಮಂಗಳೂರು, ಸೆಪ್ಟಂಬರ್ 22: ಈ ವರ್ಷದ ದಸರಾ ಹಬ್ಬದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಮಂಗಳೂರು ವಿಭಾಗವು ಪ್ರವಾಸಿಗರಿಗಾಗಿ ಮೂರು ವಿಭಿನ್ನ ಮತ್ತು ಆಕರ್ಷಕ ಪ್ಯಾಕೇಜ್ಗಳನ್ನು ಪ್ರಕಟಿಸಿದೆ. ಈ ಪ್ಯಾಕೇಜ್ಗಳು ಸೆಪ್ಟೆಂಬರ್ 22, 2025 ರಿಂದ ಅಕ್ಟೋಬರ್ 02, 2025 ರವರೆಗೆ ಲಭ್ಯವಿದೆ. ಭಕ್ತರು ಮತ್ತು ಪ್ರವಾಸಿಗರಿಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ತಾಣಗಳನ್ನು ಸುಲಭವಾಗಿ ತಲುಪಲು ಇದೊಂದು ಉತ್ತಮ ಅವಕಾಶವಾಗಿದೆ.
KSRTC ಕೊಲ್ಲೂರು ಟೂರ್ ಪ್ಯಾಕೇಜ್
ಕೊಲ್ಲೂರು ಟೂರ್ ಪ್ಯಾಕೇಜ್ ಈ ಒಂದು ದಿನದ ಪ್ರವಾಸವು ಇದಾಗಿದ್ದು, ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಬಸ್ ಸಂಚಾರ ಆರಂಭವಾಗುತ್ತದೆ. ಇದು ಉಚ್ಚಿಲ ಮಹಾಲಕ್ಷ್ಮೀ, ಕಾಪು ಶ್ರೀ ಮರಿಯಮ್ಮ, ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ಮತ್ತು ಮರಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯಗಳ ದರ್ಶನವನ್ನು ಒಳಗೊಂಡಿದೆ. ರಾತ್ರಿ 8 ಗಂಟೆಗೆ ಬಸ್ಸು ಮಂಗಳೂರಿಗೆ ಮರಳುತ್ತದೆ. ಪ್ರಯಾಣ ದರ ವಯಸ್ಕರಿಗೆ ₹600 ಮತ್ತು 6 ರಿಂದ 12 ವರ್ಷದ ಮಕ್ಕಳಿಗೆ ₹500 ಆಗಿದೆ.

KSRTC ಮಡಿಕೇರಿ ಟೂರ್ ಪ್ಯಾಕೇಜ್
ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಇಚ್ಛಿಸುವವರಿಗಾಗಿ ಈ ಪ್ರವಾಸವನ್ನು ಆಯೋಜಿಸಲಾಗಿದೆ. ಇದು ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಪ್ರಯಾಣ ಪ್ರಾರಂಭಿಸುತ್ತದೆ. ಮಡಿಕೇರಿಯ ರಾಜಾಸೀಟ್, ಅಬ್ಬಿಫಾಲ್ಸ್, ನಿಸರ್ಗಧಾಮ ಮತ್ತು ಗೋಲ್ಡನ್ ಟೆಂಪಲ್ (ಬೈಲಕುಪ್ಪೆ) ತಾಣಗಳಿಗೆ ಮಾರ್ಗವಾಗಿ ಸಾಗುತ್ತದೆ. ಬಸ್ ರಾತ್ರಿ 9:30 ಕ್ಕೆ ಮಂಗಳೂರಿಗೆ ತಲುಪುತ್ತದೆ. ಈ ಪ್ಯಾಕೇಜ್ಗೆ ವಯಸ್ಕರಿಗೆ ₹600 ಹಾಗೂ ಮಕ್ಕಳಿಗೆ ₹500 ಟಿಕೆಟ್ ದರ ನಿಗದಿಪಡಿಸಲಾಗಿದೆ.
KSRTC ಸಿಗಂದೂರು ಟೂರ್ ಪ್ಯಾಕೇಜ್
ಈ ಹೊಸ ಪ್ರವಾಸ ಪ್ಯಾಕೇಜ್ ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಹೊರಟು, ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಭೇಟಿ ನೀಡುತ್ತದೆ. ರಾತ್ರಿ 7:30 ಕ್ಕೆ ಮರಳಿ ಮಂಗಳೂರಿಗೆ ನಿಲ್ದಾಣಕ್ಕೆ ಬರುತ್ತದೆ. ಈ ಪ್ರವಾಸದ ದರ ವಯಸ್ಕರಿಗೆ ₹700 ಮತ್ತು ಮಕ್ಕಳಿಗೆ ₹600 ನಿಗದಿಪಡಿಸಲಾಗಿದೆ.
KSRTC: ನವದುರ್ಗ ದರ್ಶನ ಪ್ಯಾಕೇಜ್
ಮಂಗಳೂರು ಸುತ್ತಮುತ್ತಲಿನ ಒಂಬತ್ತು ದೇವಾಲಯಗಳಿಗೆ ಭೇಟಿ ನೀಡುವ ಈ ಪ್ರವಾಸವು ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8:30 ಕ್ಕೆ ಮರಳಿ ಮಂಗಳೂರಿಗೆ ಬರುತ್ತದೆ. ಮಂಗಳಾದೇವಿ, ಬಪ್ಪನಾಡು, ಕಟೀಲು, ಸಸಿಹಿತ್ಲು, ಕುದ್ರೋಳಿ ಸೇರಿದಂತೆ ನವದುರ್ಗೆಯರ ದರ್ಶನಕ್ಕೆ ಅವಕಾಶವಿದೆ. ಈ ಪ್ಯಾಕೇಜ್ಗೆ ವಯಸ್ಕರಿಗೆ ₹500 ಮತ್ತು ಮಕ್ಕಳಿಗೆ ₹400 ದರ ನಿಗದಿಪಡಿಸಲಾಗಿದೆ.
ಮೈಸೂರು ದಸರಾಗೆಂದು ನೌಕರಿಗೆ ರಜೆ ಹಾಕಿರುವವರು, ಶಾಲಾ ರಜೆಯನ್ನು ಮಕ್ಕಳೊಂದಿಗೆ ಖುಷಿಯಿಂದ ಕಳೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಜೊತೆಗೆ ವಿವಿಧ ಧಾರ್ಮಿಕ ಸ್ಥಳವನ್ನು ಹಬ್ಬದ ಇದನಗಳಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ. ಈ ಎಲ್ಲಾ ಪ್ಯಾಕೇಜ್ಗಳಿಗೂ ಆನ್ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು. ಅದಕ್ಕಾಗಿ ನೀವು ಅಧಿಕೃತ ವೆಬ್ಸೈಟ್ www.ksrtc.in ಭೇಟಿ ನೀಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣಗಳಲ್ಲಿ ಮುಂಗಡ ಕೌಂಟರ್ಗಳ ವ್ಯವಸ್ಥೆಯನ್ನೂ ತೆರೆಯಲಾಗಿದೆ ಎಂದು ಮಂಗಳೂರು KSRTC ಘಟಕದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications