ದಸರಾ ಅಂಗವಾಗಿ ಮಂಗಳೂರು, ಬೆಂಗಳೂರು ವಿಶೇಷ ರೈಲು
Recommended Video
ಬೆಂಗಳೂರು, ಸೆಪ್ಟೆಂಬರ್ 26 : ದಸರಾ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ. ಅಕ್ಟೋಬರ್ 4 ಮತ್ತು 8ರಂದು ವಿಶೇಷ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ.
ದಸರಾ ಸಂದರ್ಭದಲ್ಲಿ ಸಾಕಷ್ಟು ಜನರು ಉಭಯ ನಗರಗಳ ನಡುವೆ ಸಂಚಾರ ನಡೆಸಲಿದ್ದಾರೆ. ಆದ್ದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ವಿಶೇಷ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ರೈಲು ರದ್ದು
ಸುವಿಧಾ ಸ್ಪೆಷಲ್ ಎಂಬ ಹೆಸರಿನಲ್ಲಿ ರೈಲು ಸಂಖ್ಯೆ 82655, ರೈಲು ಸಂಖ್ಯೆ 82656 ಬೆಂಗಳೂರು-ಮಂಗಳೂರು ನಡುವೆ ಸಂಚಾರ ನಡೆಸಲಿವೆ. ರೈಲು ಸಂಚಾರದ ವೇಳಾಪಟ್ಟಿಯನ್ನು ನೈಋತ್ಯ ರೈಲ್ವೆ ಬಿಡುಗಡೆ ಮಾಡಿದೆ.
ದಕ್ಷಿಣ ಕೋಸ್ಟಲ್ ರೈಲ್ವೆ ವಲಯಕ್ಕೆ ರಾಯಚೂರು ಸೇರಿಸಲು ವಿರೋಧ
ರೈಲಿನ ವೇಳಾಪಟ್ಟಿ : ಅಕ್ಟೋಬರ್ 4ರಂದು ರಾತ್ರಿ 10.20ಕ್ಕೆ ಯಶವಂತಪುರ ಜಂಕ್ಷನ್ನಿಂದ ಹೊರಡುವ ರೈಲು ಅಕ್ಟೋಬರ್ 5ರಂದು ಬೆಳಗ್ಗೆ 8.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಹುಬ್ಬಳ್ಳಿ-ಚೆನ್ನೈ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ, ವೇಳಾಪಟ್ಟಿ
ಅಕ್ಟೋಬರ್ 8ರಂದು ರಾತ್ರಿ 10.15ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಡುವ ಸುವಿಧಾ ವಿಶೇಷ ರೈಲು ಅಕ್ಟೋಬರ್ 9ರಂದು ಬೆಳಗ್ಗೆ 8 ಗಂಟೆಗೆ ಯಲಹಂಕ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ.