ಕರ್ನಾಟಕದಲ್ಲಿ ಮತ್ತೊಂದು ಚುನಾವಣೆಗೆ ಮುಹೂರ್ತ ನಿಗದಿ
ಬೆಂಗಳೂರು, ಮೇ.13: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಬಳಿಕ ಮತ್ತೊಂದು ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯದ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ನಡೆಯಬೇಕಿರುವ ಚುನಾವಣೆಗೆ ಆಯೋಗವು ಅಧಿಸೂಚನೆ ಹೊರಡಿಸಿದೆ.
ಜೂನ್ 21ರಂದು ಕರ್ನಾಟಕದ ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರದ ತಲಾ 3 ಸದಸ್ಯರ ಅವಧಿ ಮುಕ್ತಾಯವಾಗಲಿದ್ದು, ಈ ಕ್ಷೇತ್ರಗಳಿಗೆ ಜೂನ್ 8ಕ್ಕೆ ಚುನಾವಣೆ ನಡೆಯಲಿದೆ.
ಡಿ.ಎಚ್. ಶಂಕರಮೂರ್ತಿ, ರಮೇಶ್ ಬಾಬು, ಮರಿತಿಬ್ಬೇಗೌಡ, ಗಣೇಶ್ ಕಾರ್ಣಿಕ್, ರಾಮಚಂದ್ರಗೌಡ, ಅಮರನಾಥ್ ಪಾಟೀಲ್ ಸೇರಿ 6 ಸದಸ್ಯರ ಅಧಿಕಾರಾವಧಿ ಜೂನ್ 21ಕ್ಕೆ ಮುಕ್ತಾಯವಾಗುತ್ತಿದೆ. ಈ 6 ಮಂದಿ ಪ್ರತಿನಿಧಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಈಶಾನ್ಯ ಪದವೀಧರರ ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಮೇ 15 ರಿಂದ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 22 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 23ರಂದು ಪರಿಷತ್ ಚುನಾವಣೆಯ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 25 ಕೊನೆಯ ದಿನವಾಗಿದೆ.
ಜೂನ್ 8ರಂದು 6 ಕ್ಷೇತ್ರಗಳಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 12ರಂದು 6 ಪರಿಷತ್ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications