ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಪೂಜಾ ವಿಧಾನ; ಮೇಲ್ಮನವಿ ಅರ್ಜಿ ವಜಾ
ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರಿಂದ ಪೂಜಾವಿಧಿಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶ ಮುಂದುವರಿಕೆಗೆ ಹೈಕೋರ್ಟ್ ವಿಭಾಗೀಯಪೀಠ ಆದೇಶಿಸಿದೆ.
ಬೆಂಗಳೂರು, ಮಾರ್ಚ್ 07; ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಪೂಜಾ ವಿಧಾನ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.
ಏಕಸದಸ್ಯಪೀಠ 2018ರ ಮಾರ್ಚ್ 19ರಂದು ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಆ ಮೂಲಕ 2022ರಲ್ಲಿ ನ್ಯಾಯಾಲಯದ ನಿರ್ದೇಶನದಂತೆ ಹೊಸದಾಗಿ ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಮುಜಾವರ್ ಹಾಗೂ ಅರ್ಚಕರಿಂದ ಪೂಜಾವಿಧಿಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶ ಮುಂದುವರಿಕೆಗೆ ವಿಭಾಗೀಯಪೀಠ ಆದೇಶಿಸಿದೆ.

ಏಕಸದಸ್ಯಪೀಠ ತೆಗೆದುಕೊಂಡಿದ್ದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರ ನಡುವೆ ಯಾವುದೇ ವಿವಾದ ಇಲ್ಲದ ಕಾರಣಗಳು ಐದು ದಶಕಗಳ ಹಿಂದೆ ಹುಟ್ಟಿದ ವಿವಾದಕ್ಕೆ ಅಂತ್ಯ ಹಾಡುವುದೇ ಒಳ್ಳೆಯದು ಎಂದು ನ್ಯಾಯಾಲಯ ಹೇಳಿದೆ.
ಪ್ರಕರಣದ ಹಿನ್ನೆಲೆ: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಪ್ರಕರಣವನ್ನು ಸರಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿಯು 2022ರ ಆ.22ರಂದು ವಿಚಾರಣೆಗೆ ಬಂದ ವೇಳೆ, ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಿ 2022ರ ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ಪೂಜಾ ಕೈಂಕರ್ಯಗಳ ಮೇಲೆ ನಿಗಾ ವಹಿಸಲು ಎಲ್ಲ ಧರ್ಮದವರು ಒಳಗೊಂಡ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ ಎಂದು ಸರಕಾರ ಮಾಹಿತಿ ನೀಡಿತ್ತು.
ನ್ಯಾಯಾಲಯದ ತೀರ್ಪು ಏನು?; ಸಂವಿಧಾನದ ಕಲಂ 25ರಿಂದ 30ರವರೆಗೆ ಸಮಾನ ಸಮಾಜದ ಅಂಶಗಳನ್ನು ಅಡಕ ಮಾಡಲಾಗಿದೆ. ಕಲಂ 25(1)ರ ಸಾರ್ವಜನಿಕ ವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಯಾವುದೇ ವ್ಯಕ್ತಿ ತನಗಿಷ್ಟ ಬಂದ ಧರ್ಮವನ್ನು ಪಾಲಿಸಬಹುದು, ಆಚರಣೆ ಮಾಡಬಹುದು ಮತ್ತು ಅದನ್ನು ಪ್ರಚಾರ ಮಾಡಬಹುದು ಎಂದು ನ್ಯಾಯಪೀಠ ಹೇಳಿದೆ.
ಅಲ್ಲದೇ, ಕಲಂ 26ರ ಪ್ರಕಾರ ಧಾರ್ಮಿಕ ಕೇಂದ್ರಗಳನ್ನು ಸರಕಾರಗಳು ರಕ್ಷಿಸಬೇಕಾಗಿದೆ. ರಾಜ್ಯ ಸರಕಾರ ಈ ಸೂಕ್ಷಮತೆಯನ್ನು ಅರಿತು ಎರಡೂ ಧರ್ಮದವರ ಪ್ರತಿನಿಧಿಗಳ ಜತೆ ಸಮಾಲೋಚಿಸಿ ನಿರ್ವಹಣೆಗೆ ಕ್ರಮ ಕೈಗೊಂಡಿದೆ. ಸರಕಾರ ರಚಿಸಿರುವ ಸಮಿತಿ ಯಾವುದೇ ಧರ್ಮದವರಿಂದಲೂ ದೂರಿಲ್ಲದ ರೀತಿಯಲ್ಲಿ ಧಾರ್ಮಿಕ ಕೇಂದ್ರದ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ. ಕೋರ್ಟ್ ಆದೇಶದ ನಂತರದ ಕ್ರಮಗಳು ಏಕಪಕ್ಷೀಯ, ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಯಾವುದೇ ಸಮಾಜದವರು ಆಕ್ಷೇಪ ಎತ್ತಿಲ್ಲ ಎಂದೂ ನ್ಯಾಯಾಲಯ ಹೇಳಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ತಮ್ಮ ನಡವಳಿಕೆಯಿಂದ ನಿಜವಾದ ಜಾತ್ಯತೀತೆಯ ತಾಜಾ ಉದಾಹರಣೆಯಾಗಿದ್ದಾರೆ. ಅಲ್ಲದೆ, ಕೋರ್ಟ್ ಸಹ ಧಾರ್ಮಿಕ ಕೇಂದ್ರಗಳ ಸಂಪ್ರದಾಯ ಮತ್ತು ವಿಧಿ ವಿಧಾನಗಳ ಬಗ್ಗೆ ಜಾಗರೂಕವಾಗಿರುತ್ತದೆ. ವಿಶೇಷವಾಗಿ ಭಕ್ತಾಧಿಗಳ ನಡುವಿನ ಮೂಲಭೂತ ಹಕ್ಕುಗಳ ವಿಷಯದ ಕುರಿತು. ಹಾಗಾಗಿ ಈ ಕಾರಣಕ್ಕೆ ಕೋರ್ಟ್ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications