ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಎಸ್ಎಸ್ ಮಲ್ಲಿಕಾರ್ಜುನ
ದಾವಣಗೆರೆ, ಮಾ. 24 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ತನ್ನ ಶಕ್ತಿ ಪ್ರದರ್ಶಿಸಿರುವ ಕಾಂಗ್ರೆಸ್ ಈ ಬಾರಿಯ ಲೋಕಸಭೆ ಚುನಾವಣೆಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಕಣಕ್ಕೆ ಇಳಿಸಿದೆ. 2009ರ ಚುನಾವಣೆಯಲ್ಲಿ ಸೋಲುಂಡಿದ್ದ ಮಲ್ಲಿಕಾರ್ಜುನ ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಅವರ ಶಾಮನೂರು ಮಲ್ಲಿಕಾರ್ಜುನ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ 87,521 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಅವರನ್ನು ಲೋಕಸಭೆ ಚುನಾವಣೆ ಕಣಕ್ಕೂ ಪಕ್ಷ ಇಳಿಸಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

1987ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ ಎಸ್.ಎಸ್.ಮಲ್ಲಿಕಾರ್ಜುನ 2013ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1998ರಲ್ಲಿ ಮೊದಲ ಬಾರಿ ಶಾಸಕರಾಗಿ ವಿಧಾನಸೌಭೆ ಪ್ರವೇಶಿಸಿದ ಅವರು, 199ರಲ್ಲಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಲ್ಲಿಕಾರ್ಜುನ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.
* 1987ರಲ್ಲಿ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಪಕ್ಷ ಸೇರಿದರು
* 1998 ಮತ್ತು 2013ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ
* 1999ರಲ್ಲಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ
* ಬಿ.ಕಾಂ ಪದವೀಧರರು
* ಕರ್ನಾಟಕ ರಾಜ್ಯ ಒಲಂಪಿಕ್ ಅಸೋಸಿಯೇಶನ್ ನ ಉಪಾಧ್ಯಕ್ಷರು
* ಬಾಪುಜಿ ಎಜುಕೇಶನಲ್ ಇನ್ಸಿಟಿಟ್ಯೂಟ್ ನ ಜಂಟಿ ಕಾರ್ಯದರ್ಶಿ
* ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು
* ರಾಜೀವ್ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ
* ದಾವಣಗೆರೆ ಷುಗರ್ ಕಂಪನಿಯ ಕಾರ್ಯಕಾರಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ
* ಶಾಮನೂರು ಷುಗರ್ಸ್ ಕಂಪನಿಯ ನಿರ್ದೇಶಕರು
ಹಿನ್ನೋಟ : 2009ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ 423,447 ಮತಗಳನ್ನು ಪಡೆದು ದಾವಣಗೆರೆಯಲ್ಲಿ ಜಯಗಳಿಸಿದ್ದರು. ಎಸ್.ಎಸ್. ಮಲ್ಲಿಕಾರ್ಜುನ್ 421,423 ಮತಗಳನ್ನು ಪಡೆದು ಎರಡನೇ ಸ್ಥಾನ ಗಳಿಸಿದ್ದರು. [ಮಾಹಿತಿ ಇಂಡಿಯಾ ವೋಟ್ಸ್.ಕಾಮ್]
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications