ಉಚಿತ ಆರೋಗ್ಯ ವಿಮೆ ಮೂಲಕ ಮತದಾರರಿಗೆ ಡಿ.ಸಿ.ಗೌರಿಶಂಕರ್ ಆಮಿಷ
ಬೆಂಗಳೂರು,ಜು.4. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ.ಸಿ.ಗೌರಿಶಂಕರ್ ಕಮ್ಮಗೊಂಡನಹಳ್ಳಿ ಮಾರುತಿ ಸೇವಾ ಸಮಿತಿ ಅಡಿಯಲ್ಲಿ ವಿಧಾನಸಭಾ ಕ್ಷೇತ್ರದಾದ್ಯಂತ ಚುನಾವಣೆಗೂ ಮೊದಲು ಹದಿನೇಳು ಸಾವಿರ ಮಕ್ಕಳಿಗೆ ಗುಂಪು ಆರೋಗ್ಯ ವಿಮೆ ಮಾಡಿಸಿದ್ದರು ಎಂದು ಅವರ ಎದುರಾಳಿ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನಯ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಆಗ ವಿಚಾರಣೆ ವೇಳೆ ಸುರೇಶ್ ಗೌಡ ಪರ ವಕೀಲರು ನ್ಯಾಯಾಲಯಕ್ಕೆ ಈ ಅಂಶವನ್ನು ವಿವರಿಸಿದರು.
'ಗೌರಿಶಂಕರ್ ಚುನಾವಣೆಯಲ್ಲಿ ನಡೆಸಿರುವ ಈ ಅಕ್ರಮವನ್ನು ಗೌರಿಶಂಕರ್ ಅವರ ಅಧಿಕೃತ ಫೇಸ್ಬುಕ್ ಅಕೌಂಟ್, ವಿಡಿಯೊ ತುಣುಕುಗಳು ನಮ್ಮ ಎಲ್ಲ ಆರೋಪಗಳಿಗೆ ಪುಷ್ಟಿ ಒದಗಿಸುತ್ತವೆ. ಚುನಾವಣೆಯಲ್ಲಿ ಅವರು ಎಸಗಿರುವ ಭ್ರಷ್ಟಚಾರ, ಅಕ್ರಮ, ಅನ್ಯಾಯಗಳೇ ಅವರು ಏನೆಂದು ಹೇಳುತ್ತಿವೆ. ಇದಕ್ಕೆ ಪ್ರತ್ಯಕ್ಷ, ಅಪ್ರತ್ಯಕ್ಷ ಸಾಕ್ಷಿಗಳೆಲ್ಲಾ ಲಭ್ಯ ಇವೆ. ಲಂಚ ನೀಡಿದ್ದು, ನಕಲಿ ಆರೋಗ್ಯ ವಿಮೆ ಮಾಡಿಸಿದ್ದು ಮುಕ್ತ ನ್ಯಾಯಸಮ್ಮತ ಚುನಾವಣೆಯ ನಿಯಮಗಳಿಗೆ ಸಂಪೂರ್ಣ ವಿರುದ್ಧವಾಗಿವೆ ಎಂಬುದನ್ನು ಮೇಲ್ನೋಟಕ್ಕೇ ಸಾಬೀತುಪಡಿಸುತ್ತವೆ' ಎಂದು ವಿವರಿಸಿದರು.

ಗೌರಿಶಂಕರ್, ಅವರ ಪಕ್ಷದ ಕಾರ್ಯಕರ್ತರು ಮತ್ತು ಅವರ ಕುಟುಂಬದ ಸದಸ್ಯರು ಮತದಾರರಿಗೆ ವಿಮೆಯ ನಕಲಿ ಕಾರ್ಡ್ಗಳನ್ನು ಹಂಚಿದ್ದರು. ಈ ಮೂಲಕ ನಿರಕ್ಷರ ಮತ್ತು ಮುಗ್ಧ ರೈತರನ್ನು ವಂಚಿಸಿ, ಅವರಿಗೆ ಆಸೆ ತೋರಿಸಿ ಚುನಾವಣೆಯಲ್ಲಿ ಗೆಲುವು ಪಡೆದರು. ಹೀಗಾಗಿ, ಇದು ಪ್ರಜಾ ಪ್ರತಿನಿಧಿ ಕಾಯ್ದೆ-1951ರ 123ರ ಉಲ್ಲಂಘನೆ. ಆದ್ದರಿಂದ, ಕಲಂ 100 ಮತ್ತು ಅನ್ವಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು' ಎಂದು ಕೋರಿದರು.
ಅರ್ಜಿದಾರರ ಮನವಿ:
2018ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಆರಿಸಿ ಬಂದಿದ್ದಾರೆ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಸುರೇಶ್ಗೌಡ ಕೋರಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications