ಉಪನ್ಯಾಸಕರ ನೇಮಕ: ಹಣಕಾಸು ಇಲಾಖೆಗೆ ಸರ್ಕಾರದ ಮಹತ್ವದ ಆದೇಶ!
ಬೆಂಗಳೂರು, ಡಿ. 11: ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ ನಂತರವೂ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಅನುದಾನಿತ ಪ್ರಾಧ್ಯಾಪಕರ ಒಕ್ಕೂಟದ ಪ್ರತಿನಿಧಿಗಳು, ಉನ್ನತ ಶಿಕ್ಷಣ ಹಾಗೂ ಹಣಕಾಸು ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಸಿಎಂ, ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅನುದಾನಿತ ಕಾಲೇಜುಗಳಿಗೆ ನೇಮಕ
ಒಟ್ಟು 907 ಮಂದಿ ಉಪನ್ಯಾಸಕರನ್ನು ಅನುದಾನಿತ ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಇದರಲ್ಲಿ 369 ಮಂದಿಗೆ ನೇಮಕಾತಿ ಅದೇಶ ನೀಡಿದ್ದು ಅವರೆಲ್ಲರೂ ತಮಗೆ ನಿಯೋಜನೆ ಆಗಿರುವ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯುಜಿಸಿ ನಿಯಮಗಳ ಅನುಸಾರವಾಗಿಯೇ ಅವರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಡಾ. ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

ಹಣಕಾಸು ಇಲಾಖೆಗೆ ಪ್ರಸ್ತಾವನೆ
350 ಅಭ್ಯರ್ಥಿಗಳ ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. ಇವೆರಲ್ಲರ ನೇಮಕಾತಿ ಕುರಿತಂತೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಪ್ರಸ್ತಾವನೆ ಕಳುಹಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಕ್ಷಣ ಕ್ರಮದ ಭರವಸೆ
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಅವರು ಕೂಡ ಉನ್ನತ ಶಿಕ್ಷಣ ಸಚಿವರ ಸೂಚನೆಗೆ ಸ್ಪಂಧಿಸಿದ್ದಾರೆ. ಇಲಾಖೆಯಿಂದ ಪ್ರಸ್ತಾವನೆ ಬಂದ ತಕ್ಷಣ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ. ಹಣಕಾಸು ಇಲಾಖೆಯಿಂದ ಒಪ್ಪಿಗೆ ಕೊಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಾಸಕ ಮಹೇಶ್ ನೇತೃತ್ವದಲ್ಲಿ ಭೇಟಿ
ಕೊಳ್ಳೆಗಾಲದ ಶಾಸಕ ಮಹೇಶ್ ಅವರ ನೇತೃತ್ವಲ್ಲಿ ಡಾ.ಅಶ್ವಥ್ ನಾರಾಯಣ ಅವರನ್ನು ಭೇಟಿಯಾದ ಅನುದಾನಿತ ಕಾಲೇಜುಗಳ ಉಪನ್ಯಾಸಕರು ತಮ್ಮೆಲ್ಲ ಸಮಸ್ಯೆಗಳನ್ನು ನಿವೇದನೆ ಮಾಡಿಕೊಂಡರು. 2015ರ ಡಿಸೆಂಬರ್ 31ರವರೆಗಿನ ಬೋಧಕರ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಆ ಪ್ರಕಾರ ಈ ನೇಮಕ ಮಾಡಬೇಕಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications