ಕೇರಳಿಗರ ಪರ ಬ್ಯಾಟ್ ಬೀಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕನ್ನಡಿಗರು ಗರಂ!
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಅನ್ಯ ರಾಜ್ಯದ ಚುನಾವಣೆಗೆ ಸಹಕರಿಸುತ್ತಿರುವುದು ಹಾಗೂ ಮತದಾರರ ಓಲೈಕೆಗೆ ಮಾಡುತ್ತಿರುವ ಸರ್ಕಸ್ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರದ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಅವರು ಮಾಡಿದ್ದ ಆದೇಶವು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರು ಕೇರಳದ ಸ್ಥಳೀಯ ಚುನಾವಣೆಗೂ ಇದೇ ಮಾದರಿಯನ್ನು ಅನುಸರಿಸಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಜನ ಡಿ.ಕೆ ಶಿವಕುಮಾರ್ ಅವರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ವಿವಿಧ ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ಹಾಗೂ ಉಸ್ತುವಾರಿಯಾಗಿ ನೇಮಕವಾಗುತ್ತಿರುತ್ತಾರೆ. ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದ ಮೇರೆಗೆ ಅವರು ಕೆಲವೊಂದು ಪ್ರಮುಖ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದು ಇದೆ. ದೆಹಲಿ ವಿಧಾನಸಭೆ ಚುನಾವಣೆ ಹಾಗೂ ತೆಲಂಗಾಣದ ವಿಧಾನಸಭೆ ಚುನಾವಣೆಗಳಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿರುವುದು ಇದೆ. ಆದರೆ ಬಿಹಾರದ ವಿಧಾನಸಭೆ ಚುನಾವಣೆಯಿಂದ ಅವರು ಮಾಡುತ್ತಿರುವ ಮನವಿಯು ಹೊಸ ಚರ್ಚೆಗೆ ಕಾರಣವಾಗಿದೆ.

ಈಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಹಾಗೂ ಕರ್ನಾಟಕದಲ್ಲಿರುವ ಬಿಹಾರಿಗಳು, ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸುವುದಕ್ಕೆ ಅನುಕೂಲವಾಗುವಂತೆ ಮೂರು ದಿನಗಳ ರಜೆ ಘೋಷಿಸಬೇಕು. ವೇತನ ಸಹಿತ ರಜೆ ನೀಡಬೇಕು ಎಂದು ಅವರು ಮನವಿ ಮಾಡಿದ್ದರು. ಆದರೆ, ಇದೀಗ ಅವರು ಕೇರಳದ ಸ್ಥಳೀಯ ಚುನಾವಣೆಗೆ ಸಂಬಂಧಿಸಿದಂತೆಯೂ ಪತ್ರ ಬರೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪತ್ರದಲ್ಲಿ ಏನಿದೆ ?
ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ-2025 ಡಿಸೆಂಬರ್ ರಂದು ನಡೆಯಲಿದೆ. ಕೇರಳ ರಾಜ್ಯದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್ಗಳು, ಗುತ್ತಿಗೆದಾರರು, ಬಿಲ್ಡರ್ಗಳು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಉದ್ಯಮದಾರರು ಕೇರಳ ರಾಜ್ಯದ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಕೇರಳ ರಾಜ್ಯದ ಮತದಾರರಾದವರಿಗೆ ಕನಿಷ್ಟ ಮೂರು ದಿನಗಳ "ವೇತನ ಸಹಿತ ರಜೆ" ಯನ್ನು ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಲು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈಚೆಗೆ ನಡೆದ ಬಿಹಾರದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೂ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇದೇ ಮಾದರಿಯ ಪತ್ರವನ್ನು ಬರೆದಿದ್ದರು. ಇದೀಗ ಕೇರಳ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪತ್ರ ಬರೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ ಅಲ್ಲದೇ ಕನ್ನಡಿಗರು ಈ ಮಾದರಿಯ ಪ್ರಯೋಗಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications