ಡಿಸಿಎಂ ಜೊತೆ ದಿಢೀರ್ ಸಭೆ ನಡೆಸಿದ ಸಚಿವ ಜಮೀರ್, ಕುತೂಹಲ ಕೆರಳಿಸಿದ ನಡೆ... Karnataka Government
ಕರ್ನಾಟಕ ರಾಜಕೀಯದಲ್ಲಿ ಇದೀಗ ದೊಡ್ಡ ಬಿರುಗಾಳಿ ಸೃಷ್ಟಿಯಾಗಿದ್ದು, ಯಾವುದೇ ಕ್ಷಣದಲ್ಲಿ ಸಿಎಂ ಬದಲಾವಣೆ ಗ್ಯಾರಂಟಿ ಅನ್ನೋ ಚರ್ಚೆ ಜೋರಾಗಿದೆ. ಇಷ್ಟೆಲ್ಲದರ ನಡುವೆ ದೆಹಲಿ ಮತ್ತು ಕರ್ನಾಟಕ ನಾಯಕರ ನಡುವೆ ಮಹತ್ವದ ಮಾತುಕತೆ ಆರಂಭವಾಗಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಗೊಂದಲ ಕೂಡ ಹೆಚ್ಚಾಗಿದೆ. ಒಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಣ ದೆಹಲಿಗೆ ಓಡಾಡುತ್ತಾ, ಸಿಎಂ ಸ್ಥಾನ ಬದಲಾಗಬೇಕು ಎಂದು ಹೇಳುತ್ತಿದ್ದಾರೆ. ಇನ್ನೊಂದು ಕಡೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಬಣ ಕೂಡ ಹಠ ಹಿಡಿದು ಕೂತಿದೆ. ಇಷ್ಟೆಲ್ಲದರ ನಡುವೆ ಡಿಸಿಎಂ ಜೊತೆ ದಿಢೀರ್ ಸಭೆ ನಡೆಸಿದ ಸಚಿವ ಜಮೀರ್ ಅವರು ಗಮನ ಸೆಳೆದಿದ್ದಾರೆ.
ಹೌದು, ಕರ್ನಾಟಕದಲ್ಲಿ ಸಾಕಷ್ಟು ರಾಜಕೀಯದಲ್ಲಿ ಬಿರುಗಾಳಿ ಎದ್ದಿದ್ದು ಸಿಎಂ ಸ್ಥಾನಕ್ಕಾಗಿ ಭಾರಿ ಫೈಟಿಂಗ್ ನಡೆಯುತ್ತಿದೆ. ಹೀಗಿದ್ದಾಗ ದಿಢೀರ್ ಕೇಂದ್ರ ನಾಯಕರ ಭೇಟಿಗೆ ಕಾಂಗ್ರೆಸ್ ಲೀಡರ್ಸ್ & ರಾಜ್ಯ ವರಿಷ್ಠರ ಪಡೆ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಇಷ್ಟೆಲ್ಲಾ ಒತ್ತಡದ ನಡುವೆ ಈಗ ದಿಢೀರ್ ರಾಜ್ಯದ ಘಟಾನುಘಟಿ ನಾಯಕರು ಮಹತ್ವದ ಸಭೆ ಒಂದನ್ನ ಬೆಂಗಳೂರಿನಲ್ಲಿ ನಡೆಸಿ, ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಅಷ್ಟಕ್ಕೂ ಈ ಸಭೆಯಲ್ಲಿ ಈಗ ಯಾರೆಲ್ಲಾ ಭಾಗಿಯಾಗಿದ್ರು? ಈ ಸಭೆ ಅಷ್ಟೊಂದು ಗಮನ ಸೆಳೆಯುತ್ತಿರುವುದು ಏಕೆ? ಬನ್ನಿ ತಿಳಿಯೋಣ.

ಯಾವೆಲ್ಲಾ ನಾಯಕರು ಸಭೆಯಲ್ಲಿ ಭಾಗಿ?
ಅಂದಹಾಗೆ ದಿಢೀರ್ ಬಿಡಿಸಿಸಿ ಬ್ಯಾಂಕ್ ಚುನಾವಣೆ ನೆಪದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಭಾಗಹಿಸಿದ್ದು ವಿಶೇಷವಾಗಿತ್ತು. ಏಕೆಂದರೆ ರಾಹುಲ್ ಗಾಂಧಿ ಭೇಟಿ ಬಳಿಕ ಅವರು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ, ಶಾಸಕ ಎಸ್.ಟಿ. ಸೋಮಶೇಖರ್ ಹಾಗೇ ಸಿ.ಪಿ. ಯೋಗೇಶ್ವರ್, ಆನೇಕಲ್ ಶಾಸಕ ಶಿವಣ್ಣ, ಶ್ರೀನಿವಾಸ್, ಶರತ್ ಬಚ್ಚೇಗೌಡ ಮತ್ತು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಸೇರಿದಂತೆ ಹಲವು ಘಟಾನುಘಟಿ ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದ್ದಾರೆ. ಇದೇ ವೇಳೆ ಮತ್ತೊಂದು ವಿಶೇಷ ಕೂಡ ನಡೆದು ಹೋಗಿತ್ತು.
ಡಿಸಿಎಂ ಜೊತೆ ಸಚಿವರ ಮಾತುಕತೆ
ಸಚಿವ ಜಮೀರ್ ಅಹ್ಮದ್ ಖಾನ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ, ಈ ವೇಳೆ ಹಲವು ವಿಚಾರಗಳ ಚರ್ಚೆಯಾಗಿದೆ ಎನ್ನಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾಗುತ್ತಾ? ಅನ್ನೋ ಚರ್ಚೆಯ ವೇಳೆ ಈ ಸಭೆ ಸಾಕಷ್ಟು ಮಹತ್ವ ಕೂಡ ಪಡೆದುಕೊಂಡಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ? ಎಂಬ ಕುತೂಹಲ ಕೂಡ ಡಬಲ್ ಆಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications