ಏಕಾಏಕಿ ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದೆಕೆ? : ಕುತೂಹಲಕಾರಿ ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್ 22: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ದಿಢೀರ್ ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿದರು.
ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶೀವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.
ಇತ್ತ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಒಂದು ಕಡೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅತ್ತ ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಬಣದ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ. ಸಿಎಂ ಪಟ್ಟಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ತಿಳಿಸಿದ್ದರೂ, ಉಭಯ ಬಣಗಳು ತಮ್ಮದೇ ಆದ ರೀತಿಯಲ್ಲಿ ರಾಜಕೀಯದಲ್ಲಿ ತೊಡಗಿವೆ.
ಇನ್ನೂ ನವೆಂಬರ್ ಕ್ರಾಂತಿ ಎಂಬ ಚರ್ಚೆಯ ನಡುವೆ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವದ ಬದಲಾವಣೆ ಕುರಿತು ಚರ್ಚೆಯಾಗುತ್ತಿದ್ದು, ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದರೆ ಎರಡೂ ಬಣದಲ್ಲಿ ಎಷ್ಟು ಜನ ಶಾಸಕರಿದ್ದಾರೆ ಎಂಬ ವಿಚಾರ ಮುಖ್ಯವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಹೆಚ್ಚು ಶಾಸಕರಿದ್ದು, ಈ ಹಿನ್ನೆಲೆಯಲ್ಲಿ, ಜೈಲಿನಲ್ಲಿ ಇಬ್ಬರು ಶಾಸಕರ ಜೊತೆ ಡಿಸಿಎಂ ಡಿ ಕೆ ಶಿವಕುಮಾರ ಮಾತನಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications