DK Shivakumar: 2 ಬಾರಿ ಸತೀಶ್ ಜಾರಕಿಹೊಳಿ ಭೇಟಿ : ಅಸಲಿ ವಿಚಾರ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್
ಬೆಂಗಳೂರು, ಡಿಸೆಂಬರ್ 05: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆ ಹಾಗೂ 'ಬ್ರೇಕ್ಫಾಸ್ಟ್ ಮೀಟಿಂಗ್ಗಳು ನಡೆಯುತ್ತಿದ್ದು, ಈ ನಡುವೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಸತೀಶ್ ಜಾರಕಿಹೊಳಿ ಭೇಟಿ ಕುರಿತು ಡಿ ಕೆ ಶಿವಕುಮಾರ್ ಮಾತನಾಡಿ, ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಸತೀಶ್ ಜಾರಕಿಹೋಳಿ ಅವರ ಭೇಟಿ ಮಾತನಾಡಿ, ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ ಎಂದರು. ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ ಮಟ್ಟದಲ್ಲಿ ನಾವು ಹೇಗೆ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಈ ರೀತಿ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ಕೆಕೆಆರ್ ಡಿಬಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ಉದ್ಯಮ ಮಾಡುವವರನ್ನು ಗೌರವಿಸಬೇಕು, ಅವರ ವ್ಯವಹಾರ, ಅಧಿಕಾರಿಗಳ ಭೇಟಿಗೆ ಅನುಕೂಲ, ಅವರ ಕಡತಗಳ ತ್ವರಿತ ವಿಲೇವಾರಿ ಉದ್ದೇಶಕ್ಕೆ ರಾಜ್ಯ ಸರ್ಕಾರವು ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕೆಕೆಆರ್ ಡಿಬಿ ನೂತನ ಕಚೇರಿ ನಿರ್ಮಿಸಿದೆ. ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿ ಇದ್ದರು, ಈಗ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಕಚೇರಿಯಿಂದ ವಿಧಾನಸೌಧಕ್ಕೆ, ಬಸ್ ಹಾಗೂ ರೈಲ್ವೇ ನಿಲ್ದಾಣಕ್ಕೆ ಸಮೀಪವಾಗಿದ್ದು, ಇಲ್ಲಿ ಕಚೇರಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.
63% ಭ್ರಷ್ಟಾಚಾರ ರಾಜ್ಯದಲ್ಲಿದೆ ಎಂಬ ಉಪಲೋಕಾಯುಕ್ತ ಅವರ ವರದಿ ಬಗ್ಗೆ ಆರ್.ಅಶೋಕ್ ಅವರು ಮಾತನಾಡಿರುವ ಕುರಿತು ಮಾತನಾಡಿ, ಪಾಪ, ಆರ್.ಅಶೋಕ್ ಅವರಿಗೆ ಅದು ಯಾರ ಕಾಲದ ವರದಿ ಎಂದು ಗೊತ್ತಿಲ್ಲ. ಅವರು ಮೊದಲು ಈ ವರದಿ ಯಾರ ಕಾಲದ್ದು ಎಂದು ಓದಿಕೊಳ್ಳಲಿ. ಅವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಿ, ಅಲ್ಲಿಯೇ ಉತ್ತರ ನೀಡುತ್ತೇವೆ ಎಂದು ತಿರುಗೇಟು ನೀಡಿದರು.
ದೆಹಲಿಗೆ ಸರ್ವಪಕ್ಷ ನಿಯೋಗ ಹೋಗುವ ದಿನಾಂಕ ನಿಗದಿಯಾಯಿತೇ ಎಂಬ ಬಗ್ಗೆ ಮಾತನಾಡಿ, ಈ ಬಗ್ಗೆ ಇನ್ನು ಚರ್ಚೆ ಮಾಡಬೇಕಿದೆ. ಕೇಂದ್ರ ಸಚಿವರು ಸಂಸತ್ ಅಧಿವೇಶನದಲ್ಲಿ ಕಾರ್ಯನಿರತರಾಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಡಿ. 8ರಂದು ನಡೆಸಲು ತೀರ್ಮಾನಿಸಲಾಗಿದ್ದ ಸಭೆ ಮುಂದೂಡಿದ್ದೇವೆ. ಅವರು ಈ ಬಗ್ಗೆ ಪತ್ರವನ್ನು ಬರೆದಿದ್ದರು. ಪ್ರಧಾನಮಂತ್ರಿಗಳು ಪ್ರಹ್ಲಾದ್ ಜೋಷಿ ಅವರೊಂದಿಗೆ ಸಭೆ ಇಟ್ಟುಕೊಂಡಿದ್ದಾರೆ. ಅಂದು ನಿರ್ಮಲಾ ಸೀತಾರಾಮನ್ ಅವರು ಮಸೂದೆ ಮಂಡನೆ ಮಾಡಬೇಕಿದೆ. ಸೋಮಣ್ಣ ಅವರು ಕೂಡ ಅಂದು ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರಿಗೆ ಹಾಗೂ ನಮಗೆ ಅನುಕೂಲವಾಗುವ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ತಿಳಿಸಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications