D.K.Shivakumar: ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆದಿದ್ದ ಡಿನ್ನರ್ ಮೀಟಿಂಗ್ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದಕ್ಕೆ ಕಾರಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿದ್ದಾಗ ಖುದ್ದು ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಒಂದೆಡೆ ಸೇರಿದ್ದು ಹಾಗೂ ಎಲ್ಲರೂ ಸಿದ್ದರಾಮಯ್ಯ ಬಣದ ನಾಯಕರೇ ಡಿನ್ನರ್ನಲ್ಲಿ ಭಾಗಿಯಾಗಿದ್ದು.
ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಅವರು ಈ ಡಿನ್ನರ್ ಮೀಟಿಂಗ್ನಲ್ಲಿ ಭಾಗಿಯಾಗಿದ್ದು ಹಲವು ಕುತೂಹಲಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಬಿಜೆಪಿ ಕೂಡ ಡಿ.ಕೆ.ಶಿವಕುಮಾರ್ ಅವರನ್ನು ಲೇವಡಿ ಮಾಡಿತ್ತು. ಸದ್ಯ ವಿದೇಶದಿಂದ ಮರಳಿರುವ ಡಿ.ಕೆ.ಶಿವಕುಮಾರ್ ಅವರು ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದಿದ್ದಾರೆ.

ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ? ಔತಣಕೂಟಕ್ಕೆ ಸೇರಿದರೆ ಅದಕ್ಕೆ ರಾಜಕೀಯ ಏಕೆ ಸೇರಿಸುತ್ತೀರಿ? ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಾನು ಹಲವು ವರ್ಷಗಳಿಂದ ಎಲ್ಲೂ ಹೊರಗಡೆ ಹೋಗಿರಲಿಲ್ಲ. ಈ ಹಿನ್ನೆಲೆ ಕುಟುಂಬದೊಂದಿಗೆ ಹೊಸ ವರುಷಕ್ಕೆ ವಿದೇಶಕ್ಕೆ ಹೋಗಿದ್ದೆ ಎಂದಿದ್ದಾರೆ.
ನಾನು ಹಲವು ಬಾರಿ ಊಟಕ್ಕೆ ಕರೆದಿದ್ದೇನೆ. ಎಲ್ಲರೂ ಊಟಕ್ಕೆ ಸೇರಿದರೆ ತಪ್ಪೇನಿದೆ? ಊಟಕ್ಕೆ ಸೇರಿದ್ದನ್ನು ರಾಜಕೀಯ ಮಾಡುವುದೇನಿದೆ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ನಿಮ್ಮನ್ನು ಸದಾ ಬ್ಯುಸಿಯಾಗಿಡುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕ್ಯಾಬಿನೆಟ್ ಪುನರ್ ರಚನೆ ಅಂತೆಲ್ಲ ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ಡಿನ್ನರ್ ಪಾರ್ಟಿ ನಡೆದಿತ್ತು. ಇದರಲ್ಲಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿದಂತೆ 35 ಕಾಂಗ್ರೆಸ್ ಶಾಸಕರು ಕೂಡ ಭಾಗಿಯಾಗಿದ್ದರು. ಇನ್ನು ಈ ಡಿನ್ನರ್ ಮೀಟಿಂಗ್ನಲ್ಲಿ ಬಹುತೇಕರು ಸಿದ್ದರಾಮಯ್ಯ ಬಣದ ನಾಯಕರು ಮಾತ್ರವೇ ಸೇರಿದ್ದರಿಂದ ಹಲವು ಸುದ್ದಿಗಳಿಗೆ ರೆಕ್ಕೆಪುಕ್ಕ ಬಂದಿತ್ತು.

ಈ ಸಭೆಯಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಭಾರಿ ಚರ್ಚಗಳು ನಡೆದಿವೆ ಎಂದು ಹೇಳಲಾಗಿತ್ತು. ಅಲ್ಲದೆ ಡಿ.ಕೆ.ಶಿವಕುಮಾರ್ ಅವರನ್ನು ಕಟ್ಟಿಹಾಕಲು ಈ ಸಭೆಯಲ್ಲಿ ರಣತಂತ್ರ ರೂಪಿಸಲಾಗಿತ್ತು ಎಂತಲೂ ಹೇಳಲಾಗಿತ್ತು. ಆದರೆ ಸಭೆ ಮುಗಿಸಿ ಹೊರಬಂದ ನಾಯಕರು ಅನೌಪಚಾರಿಕವಾಗಿ ಭೋಜನಕೂಟಕ್ಕೆ ಸೇರಿದ್ದೆವು ಎಂದಿದ್ದರು.
ಸಿಎಂ ಸಿದ್ದರಾಮಯ್ಯ ಕೂಡ ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. ಆದಾಗಿಯೂ ಡಿ.ಕೆ.ಶಿವಕುಮಾರ್ ಅವರು ಇಲ್ಲದಾಗ ನಡೆದಿದ್ದ ಈ ಡಿನ್ನರ್ ಪಾರ್ಟಿಯು ಮಹತ್ವ ಪಡೆದುಕೊಂಡಿತ್ತು. ಇದೀಗ ಡಿ.ಕೆ.ಶಿವಕುಮಾರ್ ಅವರೂ ಈ ಬಗ್ಗೆ ಡೋಂಟ್ ಕೇರ್ ಎನ್ನುವಂತೆ ಮಾತನಾಡಿದ್ದಾರೆ. ಸದ್ಯ ಡಿನ್ನರ್ ಪಾರ್ಟಿ ಬಗ್ಗೆ ಮೂಡಿದ್ದ ಗೊಂದಲಗಳಿಗೆ ಫುಲ್ಸ್ಟಾಪ್ ಇಟ್ಟಿದ್ದಾರೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕತೆಗೆ ಅಪಾಯ -
ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ -
ಮುಖ್ಯಮಂತ್ರಿಗಳಿಂದ ದಿಕ್ಕು-ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್ ಮಂಡನೆ: ಬಸವರಾಜ ಬೊಮ್ಮಾಯಿ -
ಕರ್ನಾಟಕ ಬಜೆಟ್ 2026: ನಮಗೆ ಹಣ ಬೇಡ, ಗುಣಮಟ್ಟದ ಶಾಲೆ, ಆಸ್ಪತ್ರೆ ಕೊಡಿ: ಸಾರ್ವಜನಿಕರ ಆಗ್ರಹ -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ












Click it and Unblock the Notifications