ಬಿಜೆಪಿ ವರಿಷ್ಠರು ಡಿಕೆಶಿ CM ಮಾಡಿದ್ರೆ ಬಾಹ್ಯ ಬೆಂಬಲ ಕೊಡ್ತೇವೆ ಎಂದ ಸದಾನಂದ ಗೌಡ: ಡಿ ಕೆ ಶಿವಕುಮಾರ್ ರಿಯಾಕ್ಷನ್
ಬೆಂಗಳೂರು, ನವೆಂಬರ್ 25: ಡಿ.ಕೆ. ಶಿವಕುಮಾರ್ ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ ಅವರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಅಲ್ಲದೇ ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ನಾವೇ ಡಿ.ಕೆ. ಶಿವಕುಮಾರ್ಗೆ ಬಾಹ್ಯ ಬೆಂಬಲ ಕೊಡುತ್ತೇವೆ ಎಂದರೆ ನಾವು ಒಪ್ಪುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಸದ್ಯ ಸದಾನಂದ ಗೌಡ ಅವರ ಹೇಳಿಕೆ ರಾಜಕೀಯ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಅವರ ವಕ್ತಾರನಲ್ಲ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು" ಎಂದು ತಿಳಿಸಿದರು.

ನೀವು ಸಿಎಂ ಆಗಬೇಕು ಎಂದು ಜನರು ಪೂಜೆ ಮಾಡುತ್ತಿದ್ದಾರಲ್ಲಾ ಎಂದಾಗ, ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ" ಎಂದು ತಿಳಿಸಿದರು.
ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕು ಎಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಅಲ್ಲವೇ ಎಂದು ಕೇಳಿದಾಗ, "ನಾನು ಚುನಾವಣೆ ಸಂದರ್ಭದಲ್ಲಿ ಮಹದೇವಪ್ಪ ಅವರ ಕ್ಷೇತ್ರ, ಮಂಡ್ಯ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದೂ ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ ಎಂದು ತಿಳಿಸಿದರು.
ಅನೇಕ ಕೆಲಸಗಳ ಮಧ್ಯೆ ಕಾರ್ಯಕರ್ತರ ಚುನಾವಣೆಗೆ ಬಂದಿದ್ದೀರಿ ಎಂದು ಕೇಳಿದಾಗ, ಕಾರ್ಯಕರ್ತರು ಎಂದರೆ ನಾವು. ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ ಇದೇ ಚುನಾವಣೆಗೆ ನಾನು ಹಾಗೂ ಶ್ರೀಕಂಠಯ್ಯ ಅವರು ಚುನಾವಣೆಗೆ ಸ್ಪರ್ಧಿಸಿದ್ದೆವು. ಉಳಿದಂತೆ ಜನತಾದಳದಿಂದ ಸ್ಪರ್ಧಿಸಿದ್ದರು. ನನ್ನ ರಾಜಕೀಯ ಬದುಕಿನ ಮೊದಲ ಚುನಾವಣೆ ಅದಾಗಿತ್ತು. ಕನಕಪುರದಲ್ಲಿ ಈ ಚುನಾವಣೆ ಗೆದ್ದು ನಿರ್ದೇಶಕನಾಗಿ ಆಯ್ಕೆಯಾಗಿದ್ದೆ. ಆಗ ಆಸ್ಕರ್ ಫರ್ನಾಂಡೀಸ್ ಅವರು ಇದೇ ಕಟ್ಟಡದ ಕೋಣೆಯಲ್ಲಿ ಒಂದು ತಿಂಗಳು ಇದ್ದು, ಚುನಾವಣೆ ಮಾಡಿದ್ದರು. ಇದು ಕಾರ್ಯಕರ್ತರ ಚುನಾವಣೆ. ಕಾರ್ಯಕರ್ತರು ನನ್ನ ಚುನಾವಣೆ ಮಾಡುವಾಗ, ನಾನು ಅವರ ಚುನಾವಣೆಗೆ ಬಂದು ಮತ ಹಾಕದಿದ್ದರೆ ನನ್ನಿಂದ ಕರ್ತವ್ಯ ಲೋಪವಾಗುತ್ತದೆ.
ಕಾರ್ಯಕರ್ತರು ಬಲಿಷ್ಠವಾಗಿದ್ದರೆ ಮಾತ್ರ ನಾವು ಬಲಿಷ್ಠವಾಗುತ್ತೇವೆ. ಚುನಾವಣೆಯಲ್ಲಿ ರಾಜಿ ಮಾಡಿಕೊಳ್ಳಿ ಎಂದು ಕೇಳಿದರು. ನಾವೇ ಚುನಾವಣೆ ಆಗಲಿ, ಕಾರ್ಯಕರ್ತರಿಗೆ ಚುನಾವಣೆ ಅನುಭವವಾಗಲಿ ಎಂದು ಹೇಳಿದ್ದೇವೆ. ನಾವು ಸಂಸತ್ ಚುನಾವಣೆ ವೇಳೆ ಯಾಮಾರಿದೆವು, ಎಷ್ಟೋ ಬೂತ್ ಗಳಿಗೆ ಏಜೆಂಟ್ ಗಳು ಇರಲಿಲ್ಲ. ಒಳೇಟು ಯಾವ ರೀತಿ ಬಿತ್ತು ಎಂದು ತಿಳಿಯಲಿಲ್ಲ. ನಾವು ನಮ್ಮ ತಪ್ಪನ್ನು ತಿದ್ದುಕೊಳ್ಳುತ್ತೇವೆ. ರಾಜಕಾರಣದಲ್ಲಿ ನಮ್ಮ ವೈರಿ ಯಾರು ಎಂದು ತಿಳಿಯಬೇಕು. ಈ ಚುನಾವಣೆಯಲ್ಲಿ ನಮ್ಮ ಪರ ಯಾರು ನಿಂತಿದ್ದಾರೆ, ವಿರುದ್ಧ ಯಾರು ನಿಂತಿದ್ದಾರೆ ಎಂದು ತಿಳಿಯುತ್ತದೆ. ಹೀಗಾಗಿ ಚುನಾವಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಪಕ್ಷ ಸಂಘಟನೆಗೆ ಇಂತಹ ಚುನಾವಣೆಗಳು ಮುಖ್ಯವೇ ಎಂದು ಕೇಳಿದಾಗ, ಪಕ್ಷಕ್ಕೆ ಮೂಲ ಸ್ವರೂಪ ಇಲ್ಲವಾದರೆ ಯಾವ ಪಕ್ಷವೂ ಇರಲು ಸಾಧ್ಯವಿಲ್ಲ. ಇದು ನಮ್ಮ ಮೂಲ. ಸೊಸೈಟಿ, ಹಾಲಿನ ಒಕ್ಕೂಟ, ಪಿಎಲ್ ಡಿ, ಮುನ್ಸಿಪಾಲಿಟಿ, ಪಂಚಾಯ್ತಿಗಳು ನಮ್ಮ ಆಸ್ತಿಗಳಿದ್ದಂತೆ. ಇಲ್ಲಿರುವುದು 300 ಚಿಲ್ಲರೆ ಮತಗಳು, ಆದರೂ 300 ನಾಯಕರು ಕಾರ್ಯಕರ್ತರ ಗೆಲುವಿಗೆ ಬಂದಿದ್ದಾರೆ. ಹೀಗಾಗಿ ಎಷ್ಟೇ ಕೆಲಸದ ಒತ್ತಡ ಇದ್ದರೂ ಬಂದು ಮತ ಹಾಕುತ್ತಿದ್ದೇನೆ. ನಾವು ಬರಲಿಲ್ಲ ಅಂದರೆ, ನಾಯಕರೇ ಬಂದು ಮತ ಹಾಕಿಲ್ಲ, ನಾವು ಯಾಕೆ ಹಾಕಬೇಕು ಎಂದು ಹಳ್ಳಿಗಳಲ್ಲಿ ಮರ್ಯಾದೆ ತೆಗೆಯುತ್ತಾರೆ ಎಂದರು.
-
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕತೆಗೆ ಅಪಾಯ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಮುಖ್ಯಮಂತ್ರಿಗಳಿಂದ ದಿಕ್ಕು-ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್ ಮಂಡನೆ: ಬಸವರಾಜ ಬೊಮ್ಮಾಯಿ -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
Karnataka Budget: ಹೆಚ್ಚು ಹಾಲು ಕೊಡುವ ಹಸುವಿಗೆ ಹೆಚ್ಚಿನ ಆರೈಕೆ ಬೇಕು: ಬಜೆಟ್ ಭಾಷಣವಿಡೀ ಕೇಂದ್ರಕ್ಕೆ ಕುಟುಕಿದ ಸಿದ್ದರಾಮಯ್ಯ -
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ -
ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026












Click it and Unblock the Notifications