ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಪವರ್ ಗೇಮ್: ಸಿಎಂ ಕಚೇರಿ ಪಕ್ಕದಲ್ಲೇ ತಮಗೂ ಕಚೇರಿ ಬೇಕೆಂದ ಡಿಸಿಎಂ
ಬೆಂಗಳೂರು, ಜುಲೈ 08: ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ ಅವರು ಅನಿವಾರ್ಯವಾಗಿ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಕರ್ನಾಟಕದ ಚುನಾವಣೆ ಫಲಿತಾಂಶ ಬಂದ ನಂತರ ದೆಹಲಿಯಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೈಪೋಟಿ ನಡೆಸಿದ್ದರು.
ಅಂತಿಮವಾಗಿ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಘೋಷಿಸಿತು. ಇಬ್ಬರೂ ನಾಯಕರ ನಡುವೆ ಎಲ್ಲವೂ ಸರಿಯಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದರೂ, ಡಿಕೆಶಿ ಅವರು ತಮ್ಮದೇ ಆದ ವರ್ಚಸ್ಸನ್ನು ಬಳಸುವಲ್ಲಿ ನಿರತರಾಗಿದ್ದಾರೆ ಎಂಬುದು ರಾಜಕೀಯ ಅಂಗಳದಲ್ಲಿ ಕೇಳಿ ಬರುತ್ತಿರುವ ಮಾತು.

ಕರ್ನಾಟಕ ಸರ್ಕಾರದಲ್ಲಿ ಸಿಎಂರಷ್ಟೇ ನಾನು ಪವರ್ಫುಲ್ ಎಂಬುದನ್ನು ತೋರಿಸಿಕೊಳ್ಳುವುದು ಹಾಗೂ ಸಮರ್ಥಿಸಿಕೊಳ್ಳುವುದು ಡಿಕೆಶಿ ಅವರ ನಡೆಯಲ್ಲಿ ಕಂಡುಬರುತ್ತಿದೆ. ಈ ಕಾರಣಕ್ಕಾಗಿಯೇ ಅವರು ಕೆಲವು ಬೇಡಿಕೆಗಳನ್ನು ಇಡುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ.
ಇಂದಿನ ವರದಿಗಳ ಪ್ರಕಾರ, ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಇದೆ. ಅದರ ಪಕ್ಕದಲ್ಲೇ ತಮಗೂ ಕಚೇರಿಯನ್ನು ಕೊಡುವಂತೆ ಡಿಸಿಎಂ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಚೇರಿಗಳು ವಿಧಾನಸಭೆ ಕಲಾಪ ನಡೆಯುವ ಪ್ರಾಂಗಣದ ಪಕ್ಕದಲ್ಲೇ ಇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪ್ರವೇಶಿಸಿದರೆ ಬಲಭಾಗದಲ್ಲಿಯೇ ಕೊಠಡಿ ಇದೆ. ಅಧಿವೇಶನ ನಡೆಯುತ್ತಿರುವಾಗ ಈ ಕೊಠಡಿಯನ್ನು ಸಿಎಂ ಬಳಸುತ್ತಾರೆ.

ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಸಿಎಂ ಕಚೇರಿ ಪಕ್ಕದಲ್ಲೇ ತಮಗೊಂದು ಕೊಠಡಿ ಮಂಜೂರು ಮಾಡುವಂತೆ ಶಿವಕುಮಾರ್ ಕೇಳಿಕೊಂಡಿದ್ದಾರೆ.
ಮುಖ್ಯಮಂತ್ರಿಯವರ ಕೊಠಡಿಯು ಪ್ರಸ್ತುತ ಮೊದಲ ಮಹಡಿಯಲ್ಲಿ ಪಶ್ಚಿಮ ಪ್ರವೇಶದ ಬಲಭಾಗದಲ್ಲಿದೆ. ಈಗ ಉಪ ಮುಖ್ಯಮಂತ್ರಿ ಎಡಭಾಗದಲ್ಲಿ ಕೊಠಡಿ ಹುಡುಕುತ್ತಿದ್ದಾರೆ.
ಹಿಂದಿನ ಯಾವ ಉಪಮುಖ್ಯಮಂತ್ರಿಗಳಿಗೂ ಮೊದಲ ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ಇರಲಿಲ್ಲ ಎಂಬುದು ಗಮನಿಸಬೇಕಿದೆ.

ವರದಿಗಳ ಪ್ರಕಾರ, ಮುಖ್ಯಮಂತ್ರಿಗಳ ಕಚೇರಿ ಪಕ್ಕ ಒಂದು ಕೊಠಡಿ ಖಾಲಿ ಇದೆ. ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಅದನ್ನು ಉಪ ಮುಖ್ಯಮಂತ್ರಿಗೆ ಹಂಚಬಹುದು ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ನೀಡಲಾಗಿದ್ದ ಐದು ಗ್ಯಾರಂಟಿಗಳಿಗೆ ಸುಮಾರು 52 ಸಾವಿರ ಕೋಟಿ ಹಣವನ್ನು ಘೋಷಿಸಿದ್ದಾರೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆಗಳಿಗೆ ಮುಖ್ಯಮಂತ್ರಿ ಹೆಚ್ಚು ಒತ್ತು ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳನ್ನು ವಹಿಸಿಕೊಂಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಕನಸನ್ನು ನನಸಾಗಿಸಲು ಕೆಲಸ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಸಿಂಹಪಾಲು ಅನುಧಾನವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications