ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಗೋವಿಂದ ಕಾರಜೋಳ!
ಬೆಂಗಳೂರು. ಡಿ.10: ಆಸೆಯೆ ದುಃಖಕ್ಕೆ ಮೂಲ ಎಂದು ಹೇಳ್ತಾರೆ. ಆದರೂ ಮನುಷ್ಯ ಆಸೆಯನ್ನು ತೊರೆಯುವುದು ಅಸಾಧ್ಯ. ಅದರಲ್ಲೂ ರಾಜಕಾರಣಿಗಳಿಗೆ ಆಸೆ ಹೆಚ್ಚು ಎಂದೇ ಪ್ರತೀತಿ. ಆದರೆ ಅದಕ್ಕೆ ಅಪವಾದವಾಗಿದ್ದಾರೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ್ ಅವರು. ಹೌದು, ತಮಗೆ ಉಡುಗೊರೆಯಾಗಿ ಕೊಟ್ಟಿದ್ದ ಬಂಗಾರದ ಕಿರೀಟವನ್ನೇ ಡಿಸಿಎಂ ಗೋವಿಂದ್ ಕಾರಜೋಳ್ ಅವರು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಆ ಮೂಲಕ ಉಳಿದ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.
ಹೌದು, ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳದ ಗ್ರಾಮದಸ್ಥರು ಡಿಸಿಎಂ ಗೋವಿಂದ್ ಕಾರಜೋಳ ಅವರಿಗೆ ಕೊಟ್ಟಿದ್ದ ಬಂಗಾರದ ಕಿರೀಟವನ್ನು ಡಿಸಿಎಂ ಕಾರಜೋಳ ಅವರು ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ನಂತರ ಮಾತನಾಡಿದ ಅವರು, ತಮ್ಮ ಹುಟ್ಟೂರು ಕಾರಜೋಳ ಗ್ರಾಮದ ಎಲ್ಲ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ (14 ತೊಲೆ) ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ತಾವು ಸ್ವಗ್ರಾಮದ ಅಭಿವೃದ್ಧಿಗಾಗಿ ಸಲ್ಲಿಸಿದ ಸೇವೆ ಹಾಗೂ ಗ್ರಾಮದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ತಂದಿದ್ದರ ಹಿನ್ನೆಲೆಯಲ್ಲಿ ತಮ್ಮೂರಿನ ಮನೆಯ ಮಗ ಡಿಸಿಎಂ ಆಗಿದ್ದಕ್ಕಾಗಿ ಪ್ರೀತಿ-ಗೌರವದಿಂದ ಈ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು ಎಂದು ಹೇಳಿದ್ದಾರೆ.

Recommended Video
ಕಳೆದ 6 ವರ್ಷಗಳಿಂದ ಸನ್ಮಾನ ಮಾಡಿ, ಸಮರ್ಪಿಸಲು ಪ್ರಯತ್ನಿಸಿದ್ದರು. ನವೆಂಬರ್ 23 ರಂದು ಈ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ದಿ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಸನ್ಮಾನಿಸಿ ಈ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದರು. ತಾವು ಶಾಸಕ, ಮಂತ್ರಿಯಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿದ್ದು, ಈ ಗೌರವ ಸರ್ಕಾರಕ್ಕೆ ಸಲ್ಲಬೇಕು. ಹೀಗಾಗಿ ಬಂಗಾರದ ಕಿರೀಟವನ್ನು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ಗೋವಿಂದ್ ಕಾರಜೋಳ್ ಹೇಳಿದ್ದಾರೆ. ಡಿಸಿಎಂ ಕಾರಜೋಳ್ ಅವರ ಈ ನಡೆ ಗ್ರಾಮಸ್ಥರು ಹಾಗೂ ನಾಡಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
-
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications