ದಿನದಿಂದ ದಿನಕ್ಕೆ ಅಮಿತ್ ಶಾಗೆ ಬಿಸಿ ತುಪ್ಪವಾಗುತ್ತಿರುವ ರಾಜ್ಯ ಬಿಜೆಪಿ ನಾಯಕರ ಡಿಮಾಂಡ್
ಉಪಮುಖ್ಯಮಂತ್ರಿ ಹುದ್ದೆ ಎನ್ನುವುದು ದೆಹಲಿ ಬಿಜೆಪಿ ವರಿಷ್ಠರಿಗೆ ಬಿಸಿತುಪ್ಪವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಸಮರ್ಥ ಸಿಎಂ ಇರಬೇಕಾದರೆ, ಡಿಸಿಎಂ ಹುದ್ದೆ ಯಾಕೆ ಎನ್ನುವ ಬಣ ಒಂದು ಕಡೆ. ಜಾತಿಯ ಹೆಸರನ್ನು ಹೇಳಿಕೊಂಡು, ಆ ಹುದ್ದೆಗೆ ಡಿಮಾಂಡ್ ಮಾಡುತ್ತಿರುವ ಬಣ ಇನ್ನೊಂದು ಕಡೆ.
ಸದ್ಯಕ್ಕೆ ಧನುರ್ಮಾಸದ ಕಾರಣದಿಂದಾಗಿ ಸುಮ್ಮನಾಗಿರುವ ನೂತನ ಶಾಸಕರು, ಸಂಕ್ರಾಂತಿ ಮುಗಿಯುತ್ತಿದ್ದಂತೇ ಮತ್ತೆ ಸಂಪುಟ ರಚನೆಯ ವಿಚಾರದಲ್ಲಿ ಆಖಾಡಕ್ಕೆ ಇಳಿಯುವುದು ಅತ್ಯಂತ ಸ್ಪಷ್ಠ.
ತಮ್ಮ ಹೆಸರನ್ನು ಡಿಸಿಎಂ ಹುದ್ದೆಗೆ ಪರಿಗಣಿಸಬೇಕೆಂದು ಈಗಾಗಲೇ ರಮೇಶ್ ಜಾರಕಿಹೊಳಿ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪಟ್ಟು ಹಿಡಿದು ಕೂತಿರುವುದು ಗೊತ್ತಿರುವ ವಿಚಾರ. ಅವರ ಸಮುದಾಯದ ಪೀಠಾಧಿಪತಿಗಳೂ, ಯಡಿಯೂರಪ್ಪನವರಿಗೆ ಒತ್ತಡವನ್ನು ಹಾಕುತ್ತಿರುವುದು ಗೌಪ್ಯವಾಗಿಯೇನೂ ಉಳಿದಿಲ್ಲ.
ಈ ವಿಚಾರದಲ್ಲಿ, ಒಂದು ಹೆಜ್ಜೆ ಮುಂದೆ ಹೋಗಿರುವ ಸಚಿವ ರಾಮುಲು, ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಬಹಿರಂಗವಾಗಿಯೇ ಆ ಸ್ಥಾನದ ಆಕಾಂಕ್ಷಿ ತಾನು ಎಂದು ರಾಮುಲು ಈಗಾಗಲೇ ಹೇಳಿಯಾಗಿದೆ.

ತಾನು ಪಕ್ಷದ ವಿರುದ್ದ ಕೆಲಸ ಮಾಡುವುದಿಲ್ಲ
"ತಾನು ಪಕ್ಷದ ವಿರುದ್ದ ಕೆಲಸ ಮಾಡುವುದಿಲ್ಲ. ನನಗೆ ಉಪಮುಖ್ಯಮಂತ್ರಿ ಹುದ್ದೆ ನೀಡದೇ ಇದ್ದಲ್ಲಿ ನನ್ನ ಜೊತೆಗೆ, ನನ್ನ ಸಮುದಾಯಕ್ಕೂ ಮುಜುಗರವಾಗುತ್ತದೆ. ಇದನ್ನೆಲ್ಲಾ ನಮ್ಮ ನಾಯಕರಿಗೆ ಮನವೊರಿಕೆ ಮಾಡಿದ್ದೇನೆ" ಎನ್ನುವ ಹೇಳಿಕೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ನೀಡಿದ್ದಾರೆ.

ರಾಮುಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ
ಧನುರ್ಮಾಸ ಇನ್ನೇನು ಮುಗಿಯುತ್ತಿರುವುದರಿಂದ, ಕೊನೆಯ ಹಂತದ ಕಸರತ್ತು ನಡೆಸಲು ರಾಮುಲು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲು ಠಿಕಾಣಿ ಹೂಡಿರುವ ರಾಮುಲುಗೆ ಇದುವರೆಗೆ, ಶಾ ಭೇಟಿ ಸಾಧ್ಯವಾಗಲಿಲ್ಲ.

ರಾಜಸ್ಥಾನ ಪ್ರವಾಸದಲ್ಲಿರುವ ಅಮಿತ್ ಶಾ
ರಾಜಸ್ಥಾನ ಪ್ರವಾಸದಲ್ಲಿರುವ ಅಮಿತ್ ಶಾ, ಶನಿವಾರ (ಜ 4) ದೆಹಲಿಗೆ ವಾಪಸ್ ಆಗುವ ಸಾಧ್ಯತೆಯಿದೆ. ಶಾ ಅವರ ಭೇಟಿ ಸಾಧ್ಯವಾದರೆ, ಪಕ್ಷಕ್ಕಾಗಿ ತಾನು ಮಾಡಿದ ಕೆಲಸ, ಸಮುದಾಯದ ಒತ್ತಡ ಎಲ್ಲವನ್ನೂ ಅಮಿತ್ ಶಾಗೆ, ರಾಮುಲು ವಿವರಿಸುವ ಸಾಧ್ಯತೆಯಿದೆ.

ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು
ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು, ಜಾರಕಿಹೊಳಿ ಮತ್ತು ಶ್ರೀರಾಮುಲು ನಮ್ಮ ಕಣ್ಣುಗಳು ಇದ್ದಂತೆ. ಇಬ್ಬರಲ್ಲಿ, ಯಾರಿಗೆ ಡಿಸಿಎಂ ಹುದ್ದೆ ಕೊಟ್ಟರೂ, ನಮಗೆ ಅಭ್ಯಂತರವಿಲ್ಲ. ಬಿಜೆಪಿ ಚುನಾವಣೆಗೆ ಮುನ್ನ ನೀಡಿದ ವಾಗ್ದಾನವನ್ನು ಪೂರೈಸಬೇಕೆಂದು ಯಡಿಯೂರಪ್ಪನವರಲ್ಲಿ ಒತ್ತಾಯಿಸಿದ್ದಾರೆ.

ಅಂತಿಮ ಕಸರತ್ತು: ಅಮಿತ್ ಶಾ ಭೇಟಿ ಮಾಡಲು ದೆಹಲಿಯಲ್ಲಿ ಶ್ರೀರಾಮುಲು ಠಿಕಾಣಿ
ಒಂದು ವೇಳೆ, ಡಿಸಿಎಂ ಹುದ್ದೆ ನೀಡದಿದ್ದಲ್ಲಿ ವಾಲ್ಮೀಕಿ ಸಮುದಾಯದ ಎಲ್ಲಾ ಶಾಸಕರು ರಾಜೀನಾಮೆ ನೀಡಲಿದ್ದಾರೆ" ಎನ್ನುವ ಎಚ್ಚರಿಕೆಯನ್ನೂ ಪ್ರಸನ್ನಾನಂದ ಸ್ವಾಮೀಜಿ ನೀಡಿದ್ದಾರೆ. ಒಟ್ಟಿನಲ್ಲಿ, ದಿನದಿಂದ ದಿನಕ್ಕೆ ಬಿಜೆಪಿ ವರಿಷ್ಠರಿಗೆ, ಉಪಮುಖ್ಯಮಂತ್ರಿ ಹುದ್ದೆ ಬಿಸಿತುಪ್ಪವಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications