Breaking: ಪಂಚಮಸಾಲಿಗೆ 2ಎ ಮೀಸಲಾತಿ: ಗಡುವು ಇಂದು ಅಂತ್ಯ, ಸಂಜೆ ಸಭೆ
ಬೆಂಗಳೂರು, ಡಿಸೆಂಬರ್ 29: ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಬೆಳಗಾವಿಯ 'ವಿರಾಟ್ ಪಂಚಶಕ್ತಿ ಸಮಾವೇಶ'ದಲ್ಲಿ ಸರ್ಕಾರಕ್ಕೆ ನೀಡಿದ್ದ ಗಡುವು ಇಂದಿಗೆ (ಡಿ.29) ಅಂತ್ಯಗೊಳ್ಳಲಿದೆ. 2ಎ ಮೀಸಲಾತಿ ಘೋಷಣೆಯ ನಿರೀಕ್ಷೆಯಲ್ಲಿರುವ ಲಕ್ಷಾಂತರ ಪಂಚಮಸಾಲಿಗಳು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುವುದನ್ನೆ ಕಾಯುತ್ತಿದ್ದಾರೆ.
ಹೌದು, ಬಹುಬೇಡಿಕೆಯ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸಲು ಮೊದಲು ಹಿಂದುಳಿದ ವರ್ಗಗಳ ಆಯೋಗದ ವರದಿ ಪರಿಶೀಸಲಿಸಲು, ಸಂಪೂರ್ಣವಾಗಿ ಅಧ್ಯಯನ ನಡೆಸಲು ಸಮಯ ಬೇಕು. ಪರಿಶೀಲಿಸಿ ಡಿಸೆಂಬರ್ 28ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುತ್ತೇನೆ. ನಂತರ ಡಿಸೆಂಬರ್ 29ರಂದು ಸದನದಲ್ಲಿ ಈ ವಿಚಾರವಿಟ್ಟು ಮೀಸಲಾತಿ ಘೋಷಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ಮುಖ್ಯಮಂತ್ರಿ ಭರವಸೆಯಂತೆ ಒಂದು ವಾರ ಶಾಂತಿಯುತವಾಗಿ ಕಾಯೋಣ, ನೀಡಿದ ಗಡುವು ಮುಗಿಯುವವರಿಗೂ ತಾಳ್ಮೆಯಿಂದಿರೋಣ ಎಂದು ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಅದರಂತೆ ಪಂಚಮಸಾಲಿಗಳು ಸಮಧಾನದಿಂದ ಕಾಯ್ದಿದ್ದಾರೆ.

ಗುರುವಾರ ಸಂಜೆ ಬೆಳಗಾವಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 2ಎ ಮೀಸಲಾತಿ ಘೋಷಣೆಯ ಬಗ್ಗೆ ತಜ್ಞರು ಜೊತೆಗೆ ಸಾಧಕ ಬಾಧಕ ಗಳ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಸರ್ಕಾರ ಲಿಂಗಾಯತ ಮೀಸಲಾತಿ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಸರ್ಕಾರ ಮೀಸಲಾತಿ ಸಂಬಂಧ ಏನು ಘೋಷಿಸಲಿದೆ ಎಂದು ಕೇವಲ ಪಂಚಮಸಾಲಿಗಳು ಮಾತ್ರವಲ್ಲದೇ ಮೀಸಲಾತಿಗೆ ಆಗ್ರಹಿಸಿ ಮನವಿ ನೀಡಿರುವ ಒಕ್ಕಲಿಗರು ಮತ್ತಿತರ ಸಮುದಾಯದವರು ಕಾತರದಿಂದ ಕಾಯುತ್ತಿದ್ದಾರೆ.
2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಅನೇಕ ಪ್ರತಿಭಟನೆ, ಸಭೆ, ಮನವಿ ಸಲ್ಲಿಕೆಗಳು ನಡೆದವು. ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ, ಬೆಳಗಾವಿಯಲ್ಲಿ ಲಕ್ಷಾಂತರ ಜನರಿಂದ ಬೃಹತ್ ಸಮಾವೇಶ ನಡೆದವು. ವಿಧಾನಸೌಧ, ಸುವರ್ಣಸೌಧ ಮುತ್ತಿಗೆ ಹಾಕಲು ಪಂಚಮಸಾಲಿಗಳು ಸಜ್ಜಾಗಿದ್ದವು. ಅಂತಿಮವಾಗಿ ಹೋರಾಟಕ್ಕೆ ಮಣಿದ ಸರ್ಕಾರ ಮೀಸಲಾತಿ ಘೋಷಿಸುವುದಾಗಿ ಹೇಳಿ ಕಾಲಾವಕಾಶ ಪಡೆದಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications