Karnataka hikes DA : ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ: ಬೊಮ್ಮಾಯಿ ಘೋಷಣೆ
ಬೆಂಗಳೂರು, ಏಪ್ರಿಲ್ 5: ಕರ್ನಾಟಕ ರಾಜ್ಯ ನೌಕರರ ಪ್ರಮುಖ ಬೇಡಿಕೆ ಈಡೇರಿಸುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು. ರಾಜ್ಯ ಸರ್ಕಾರಿ ನೌಕರ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಬಗ್ಗೆ ತಿಳಿಸಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
"ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು" ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ವೇತನ ಪರಿಷ್ಕರಣೆ ಕುರಿತಂತೆ ಆಯೋಗ ರಚನೆಗಾಗಿ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು. ಕಳೆದ ಹಲವು ವರ್ಷಗಳಿಂದ ರಾಜ್ಯ ನೌಕರರ ಸಂಘದ ವತಿಯಿಂದ ಸರ್ಕಾರ ಸಲ್ಲಿಸಿದ ಬೇಡಿಕೆಯಲ್ಲಿ ಈ ಅಂಶ ಪ್ರಮುಖವಾಗಿತ್ತು.
7ನೇ ವೇತನ ಆಯೋಗದಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಮಿತಿ ರಚನೆಗೆ ಚಾಲನೆ ನೀಡಲಾಗುತ್ತದೆ ಎಂದು ಸದನದಲ್ಲಿ ಸಿಎಂ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ತುಟ್ಟಿಭತ್ಯೆ ಹೆಚ್ಚಳವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸ್ವಾಗತಿಸಿದ್ದಾರೆ.

ತುಟ್ಟಿಭತ್ಯೆ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು
ಕೊವಿಡ್ 19 ಸಾಂಕ್ರಾಮಿಕದ ಕಾಲದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಕಳೆದ ವರ್ಷದಿಂದ ತುಟ್ಟಿಭತ್ಯೆ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಮೂರು ಅವಧಿಯ ತುಟ್ಟಿಭತ್ಯೆ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು.
ಈಗ ಹೊಸ ವೇತನ ಆಯೋಗ ರಚನೆ ಬಗ್ಗೆ ಘೋಷಣೆಯಾಗಿದ್ದು, ಬಹುತೇಕ ಜುಲೈ 2022ರ ವೇಳೆಗೆ ಹೊಸ ಆಯೋಗ ಅನುಷ್ಠಾನಕ್ಕೆ ಬರಲಿದ್ದು, ಆಯೋಗದ ಶಿಫಾರಸ್ಸಿನ ಅನ್ವಯ ಮೂಲ ವೇತನ, ಸಂಬಳ ಏರಿಕೆ, ತುಟ್ಟಿಭತ್ಯೆ ಹೆಚ್ಚಳವಾಗಲಿದೆ.

ಮೂಲ ವೇತನದ 5ರಷ್ಟು ಹೆಚ್ಚಳಕ್ಕೆ ಮನವಿ
ಕೇಂದ್ರ ಸರ್ಕಾರಿ ನೌಕರರಿಗೆ ನೀಡಿದಂತೆ ಮೂಲ ವೇತನದ 5ರಷ್ಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ 4.25ರಷ್ಟು ಹೆಚ್ಚಳಕ್ಕೆ ಮನವಿ ಬಂದಿತ್ತು. ಆದರೆ, ಈ ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವು ಜನವರಿ 01, 2018ರಿಂದ ಪೂರ್ವಾನ್ವಯವಾಗುವಂತೆ ಶೇ 1.75ರಷ್ಟು ಹೆಚ್ಚಳ ಮಾಡಲಾಗಿತ್ತು. ನಂತರ ಶೇ 2ರಷ್ಟು ಹೆಚ್ಚಳವಾಗಿತ್ತು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರವು ಕಳೆದ ದೀಪಾವಳಿ ಹಬ್ಬದ ವೇಳೆಗೆ ಶೇ2ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಿಸಿತ್ತು. ನಂತರ 2019ರ ದೀಪಾವಳಿ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸರ್ಕಾರಿ ನೌಕರರಿಗೆ ಶೇ.4.75 ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದರು. ಈ ಮೂರು ಅವಧಿಯದ್ದು ಸೇರಿಸಿ 11% ಡಿಎ ಹೆಚ್ಚಳವಾಗಿದೆ. ಸರ್ಕಾರಿ ನೌಕರರ ಮೂಲ ವೇತನ 17, 000ರು ನಿಂದ 67,550ರು ತನಕ ಇದೆ.

ಸಂಬಳ, ಪಿಂಚಣಿ ಮೊತ್ತ ಹೆಚ್ಚಳ ಅನ್ವಯ
ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ವೇತನ ಆಯೋಗದ ಶಿಫಾರಸ್ಸಿನಂತೆ ಸಂಬಳ, ಪಿಂಚಣಿ ಮೊತ್ತ ಹೆಚ್ಚಳ ಅನ್ವಯವಾಗಲಿದೆ.

ತುಟ್ಟಿ ಭತ್ಯೆ ಎಂದರೇನು?
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.

ಕೇಂದ್ರ ಸರ್ಕಾರಿ ನೌಕರ ಡಿಎ ಎಷ್ಟಿದೆ?
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ತುಟ್ಟಿಭತ್ಯೆ ಪರಿಹಾರ ಶೇ 3ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಡಿಎ ಶೇ 28ರಿಂದ ಶೇ 31ಕ್ಕೇರಿಕೆಯಾಗಲಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ
Download











Click it and Unblock the Notifications