ಉತ್ತರ ಕರ್ನಾಟಕ ಜನರ ಋಣ ತೀರಿಸುವ ಹೊಣೆ ನನ್ನ ಮೇಲಿದೆ: ಸಿಎಂ
ಬಸವನ ಬಾಗೇವಾಡಿ, ಡಿಸೆಂಬರ್, 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಜನರು ನನ್ನ ಬಗ್ಗೆ ಅಪಾರ ವಿಶ್ವಾಸವಿಟ್ಟಿದ್ದಾರೆ. ಉತ್ತರ ಕರ್ನಾಟಕ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಹೆಗಲ ಮೇಲಿದೆ ಎಂದು ಬಸವನ ಬಾಗೇವಾಡಿಯಲ್ಲಿ ಹೇಳಿದರು.
ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಬೇಕೆಂಬ ಸಿದ್ಧಾಂತ ನಮ್ಮದು. ಪ್ರಧಾನಿಗಳೇ ಕಪ್ಪು ಹಣ ಇದ್ದವರನ್ನ ಹೊರಗೆಳೆಯಿರಿ. ಅವರ ನಿದ್ದೆಗೆಡಿಸಿ. ಆದರೆ ಬಡವರ ನಿದ್ದೆಗೆಡಿಸಬೇಡಿ. ಬ್ಯಾಂಕ್ ಗಳ ಮುಂದೆ ಶ್ರೀಮಂತರು ಕ್ಯೂ ನಿಂತಿಲ್ಲ. ಸಾಲುಗಟ್ಟಿ ನಿಂತವರೆಲ್ಲ ಬಡವರು ಮತ್ತು ಮಧ್ಯಮ ವರ್ಗದವರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳು ಎಂದು ಮುಖ್ಯಮಂತ್ರಿಗಳು ನುಡಿದರು.[ವೈಮಾನಿಕ ಸಮೀಕ್ಷೆ : ಕಲಬುರಗಿ-ಬೀದರ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ]

ನೋಟು ಅಮಾನ್ಯದ ಬಳಿಕ ರೈತರಿಗೆ ಆಗಿರುವ ತೊಂದರೆ ಬಗ್ಗೆ ಕೇಂದ್ರಕ್ಕೆ ಮೂರು ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ. ರೈತರ ಹಿತದೃಷ್ಟಿಯಿಂದ ಮತ್ತೆ ಪತ್ರ ಬರೆಯುವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಬರ ಅನುದಾನ ನಿರೀಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಲ್ಲಿ ಈ ವರ್ಷ ಭೀಕರ ಬರ ಪರಿಸ್ಥಿತಿ ತಲೆದೋರಿದೆ, ಇನ್ನೊಂದೆಡೆ ಅನಾವೃಷ್ಟಿ ಸಂಭವಿಸಿದೆ ಎಂದರು. [ಮಳೆಗೆ ಉತ್ತರ ಕರ್ನಾಟಕ ತತ್ತರ : ಅಪಾರ ಆಸ್ತಿಪಾಸ್ತಿ ನಷ್ಟ]
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಬರ ಪರಿಹಾರಕ್ಕಾಗಿ 4702 ಕೋಟಿ ರೂ. ಹಾಗೂ ಅನಾವೃಷ್ಟಿಯ ಪರಿಹಾರಕ್ಕಾಗಿ 376 ಕೋಟಿ ರೂ. ಗಳ ಅನುದಾನವನ್ನು ರಾಜ್ಯಕ್ಕೆ ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೆ ಮನವಿ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿಯವರು ಹೇಳಿದರು.

ದೆಹಲಿಗೆ ತೆರಳಿ, ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿಯನ್ನು ಮಾಡಿದ್ದೇವೆ. ಲೋಕಸಭೆ ಅಧಿವೇಶನ ನಂತರ ಈ ಕುರಿತು ಸಭೆ ಕೈಗೊಂಡು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.
ಆದರೆ ಇದುವರೆಗೂ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಕುರಿತು ಯಾವುದೇ ಕ್ರಮ ಆಗಿಲ್ಲ ಎಂದು ನುಡಿದ ಮುಖ್ಯಮಂತ್ರಿಯವರು, ಈ ಹಿನ್ನೆಲೆಯಲ್ಲಿ ರಾಜ್ಯ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪನವರು ಹಾಗೂ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಸಲ್ಲಿಸಲಿದ್ದಾರೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications