ವಯನಾಡು ಆನೆ ದಾಳಿ ಪ್ರಕರಣ: ಕರ್ನಾಟಕದ ಪರಿಹಾರ ಬೇಡ ಎಂದ ಮೃತನ ಕುಟುಂಬ, ಯಾಕೆ..?
ಬೆಂಗಳೂರು, ಫೆಬ್ರವರಿ 27: ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ಮೃತರ ಕುಟುಂಬಸ್ಥರು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 10ರಂದು ಪ್ರಜೇಶ್ ಎನ್ನುವವರು ವಯನಾಡಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು.
ವಯನಾಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಕ್ಷೇತ್ರವಾಗಿದ್ದು, ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನ್ನಪ್ಪಿರುವುದು ಭಾರೀ ಸುದ್ದಿಯಾಗಿತ್ತು. ಪ್ರಜೇಶ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವೇಳೆ ರಾಹುಲ್ ಗಾಂಧಿ ಭಾರತ ಜೋಡೋ ನ್ಯಾಯ ಯಾತ್ರೆ ನಡೆಸುತ್ತಿದ್ದರು. ತಮ್ಮ ಕ್ಷೇತ್ರದಲ್ಲಿ ಕಾಡಾನೆ ದಾಳಿ ವಿಷಯ ಮುಟ್ಟುತ್ತಿದ್ದಂತೆ ರಾಹುಲ್ ಗಾಂಧಿ ಭಾರತ ಜೋಡೋ ನ್ಯಾಯ ಯಾತ್ರೆ ಮೊಟಕುಗೊಳಿಸಿ ವಯನಾಡಿಗೆ ತೆರಳಿದ್ದರು.

ವಯನಾಡಿಗೆ ತೆರಳಿದ್ದ ರಾಹುಲ್ ಗಾಂಧಿ ಪ್ರಜೇಶ್ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿ ಪರಿಹಾರದ ಭರವಸೆ ನೀಡಿದ್ದರು. ಕಾಡಾನೆ ದಾಳಿ ಹಾಗೂ ಅದರ ಹಿನ್ನೆಲೆಯನ್ನು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ವಯನಾಡಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿತ್ತು. ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹದಿನೈದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಕೇರಳ ರಾಜ್ಯದಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ವಯನಾಡು ರಾಹುಲ್ ಗಾಂಧಿಯವರ ಲೋಕಸಭಾ ಕ್ಷೇತ್ರವಾಗಿದೆ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸುವುದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.
ರಾಜ್ಯದಲ್ಲಿ ಹತ್ತಾರು ಜನರು ಕಾಡಾನೆ ದಾಳಿಯಿಂದ ಸಾಯುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಬೆಳೆ ಈಗಾಗಲೇ ನಾಶವಾಗಿದೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ನೀಡುವಂತೆ ಚಿಕ್ಕಮಗಳೂರು, ಹಾಸನ ಹಾಗೂ ರಾಮನಗರ ಸೇರಿದಂತೆ ರಾಜ್ಯದ ವಿವಿಧ ಭಾಗದ ಜನರು ತೀವ್ರ ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇರಳ ರಾಜ್ಯದಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ ಕಾಂಗ್ರೆಸ್ ಸರ್ಕಾರ ಹದಿನೈದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.
ಪರಿಹಾರ ಘೋಷಣೆ ಬಗ್ಗೆ ಕಾಂಗ್ರೆಸ್ ಸರ್ಕಾರದ ಸ್ಪಷ್ಟನೆ ಏನು..?
ಕಳೆದ ವರ್ಷ ನವೆಂಬರ್ 30ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಗಂಡು ಆನೆಯನ್ನು ಸೆರೆಹಿಡಿಯಲಾಗಿತ್ತು. ಅದನ್ನು ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಆ ಆನೆಯು ಕೇರಳದ ವಯನಾಡ್ ಜಿಲ್ಲೆಗೆ ದಾರಿ ತಪ್ಪಿ ತೆರಳಿದ್ದು, ವಯನಾಡ್ನಲ್ಲಿ ದಾಳಿ ನಡೆಸಿದೆ ಎನ್ನಲಾಗಿತ್ತು. ಕರ್ನಾಟಕದಿಂದ ತೆರಳಿದ ಆನೆಯಿಂದ ಸಾವು ಸಂಭವಿಸಿದ್ದು, ಮೃತ ವ್ಯಕ್ತಿಗೆ ಪರಿಹಾರ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿ ಪರಿಹಾರ ಘೋಷಿಸಿದ್ದರು. ಆದರೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೃತ ಪ್ರಜೇಶ್ ಕುಟುಂಬಸ್ಥರು ಪರಿಹಾರ ತಿರಸ್ಕರಿಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications