ಕೆಎಸ್ಆರ್ಟಿಸಿ ಪ್ರಯಾಣದರ ಎಷ್ಟು ಕಡಿಮೆಯಾಗಲಿದೆ?
ಹಾಸನ, ಡಿ. 24 : ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಇಳಿಕೆ ಮಾಡುವುದಾಗಿ ಸರ್ಕಾರ ಬೆಳಗಾವಿ ಅಧಿವೇಶದಲ್ಲಿ ಘೋಷಣೆ ಮಾಡಿತ್ತು. ಡಿಸೆಂಬರ್ ಅಂತ್ಯಕ್ಕೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳಲಿದ್ದು, ಜನವರಿ 1ರಿಂದ ನೂತನ ದರ ಜಾರಿಗೆ ಬರಲಿದೆ.
ಹಾಸನದಲ್ಲಿ ಬುಧವಾರ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಪ್ರಯಾಣ ದರ ಇಳಿಕೆ ಮಾಡುವ ವಿಚಾರ ಕೊನೆಯ ಹಂತಕ್ಕೆ ತಲುಪಿದ್ದು, ಜನವರಿ 1ರಿಂದ ನೂತನ ಬಸ್ ಪ್ರಯಾಣ ದರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.[ಸಾರಿಗೆ ಇಲಾಖೆಯ ನಷ್ಟದ ವಿವರ ಇಲ್ಲಿದೆ]

ಬಸ್ ಪ್ರಯಾಣ ಕಡಿಮೆ ಮಾಡುವ ಕುರಿತು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಾರಿಗೆ ಸಚಿವರಿಗೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿವೆ. ಕೆಎಸ್ಆರ್ಟಿಸಿ ದರ ಶೇ.3ರಿಂದ 4 ಮತ್ತು ಬಿಎಂಟಿಸಿ ಪ್ರಯಾಣ ದರ ಪ್ರತಿ ಸ್ಟೇಜ್ಗೆ 1 ರೂ. ಇಳಿಕೆ ಹಾಗೂ ದಿನದ ಬಸ್ ಪಾಸ್ ದರದಲ್ಲಿ 5 ರೂ. ಇಳಿಕೆಯಾಗುವ ಸಾಧ್ಯತೆ ಇದೆ. [ಪ್ರಯಾಣದರ ಇಳಿಕೆ, ಸಚಿವರ ಸುಳಿವು]
ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳ ಪ್ರವಾಸದಲ್ಲಿದ್ದು ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಅವರು ಸಿಎಂ ಅವರನ್ನು ಭೇಟಿ ಮಾಡಿ, ದರ ಇಳಿಕೆ ಬಗ್ಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. ಡಿಸೆಂಬರ್ 26ರಂದು ದರ ಇಳಿಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು-ನಾಲ್ಕು ತಿಂಗಳಲ್ಲಿ ಡೀಸೆಲ್ ದರ ಒಟ್ಟಾರೆ 8 ರೂ. ಇಳಿಕೆಯಾಗಿದ್ದರೂ ಸರ್ಕಾರ ಬಸ್ ಪ್ರಯಾಣ ದರ ಕಡಿಮೆ ಮಾಡಿರಲಿಲ್ಲ. ಇದು ಜನರು ಮತ್ತು ವಿವಿಧ ಸಂಘಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಷ್ಟದ ನೆಪ ಹೇಳಿದ್ದ ಇಲಾಖೆ ಕೊನೆಗೂ ಜನರ ಮತ್ತು ಸಂಘಸಂಸ್ಥೆಗಳ ಒತ್ತಾಯಕ್ಕೆ ಮಣಿದು ಬಸ್ ದರ ಇಳಿಸಲು ಮುಂದಾಗಿದೆ.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications