ಕೆಎಸ್ಆರ್ಟಿಸಿ ಪ್ರಯಾಣದರ ಎಷ್ಟು ಕಡಿಮೆಯಾಗಲಿದೆ?
ಹಾಸನ, ಡಿ. 24 : ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಇಳಿಕೆ ಮಾಡುವುದಾಗಿ ಸರ್ಕಾರ ಬೆಳಗಾವಿ ಅಧಿವೇಶದಲ್ಲಿ ಘೋಷಣೆ ಮಾಡಿತ್ತು. ಡಿಸೆಂಬರ್ ಅಂತ್ಯಕ್ಕೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳಲಿದ್ದು, ಜನವರಿ 1ರಿಂದ ನೂತನ ದರ ಜಾರಿಗೆ ಬರಲಿದೆ.
ಹಾಸನದಲ್ಲಿ ಬುಧವಾರ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಪ್ರಯಾಣ ದರ ಇಳಿಕೆ ಮಾಡುವ ವಿಚಾರ ಕೊನೆಯ ಹಂತಕ್ಕೆ ತಲುಪಿದ್ದು, ಜನವರಿ 1ರಿಂದ ನೂತನ ಬಸ್ ಪ್ರಯಾಣ ದರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.[ಸಾರಿಗೆ ಇಲಾಖೆಯ ನಷ್ಟದ ವಿವರ ಇಲ್ಲಿದೆ]

ಬಸ್ ಪ್ರಯಾಣ ಕಡಿಮೆ ಮಾಡುವ ಕುರಿತು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಾರಿಗೆ ಸಚಿವರಿಗೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿವೆ. ಕೆಎಸ್ಆರ್ಟಿಸಿ ದರ ಶೇ.3ರಿಂದ 4 ಮತ್ತು ಬಿಎಂಟಿಸಿ ಪ್ರಯಾಣ ದರ ಪ್ರತಿ ಸ್ಟೇಜ್ಗೆ 1 ರೂ. ಇಳಿಕೆ ಹಾಗೂ ದಿನದ ಬಸ್ ಪಾಸ್ ದರದಲ್ಲಿ 5 ರೂ. ಇಳಿಕೆಯಾಗುವ ಸಾಧ್ಯತೆ ಇದೆ. [ಪ್ರಯಾಣದರ ಇಳಿಕೆ, ಸಚಿವರ ಸುಳಿವು]
ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳ ಪ್ರವಾಸದಲ್ಲಿದ್ದು ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಅವರು ಸಿಎಂ ಅವರನ್ನು ಭೇಟಿ ಮಾಡಿ, ದರ ಇಳಿಕೆ ಬಗ್ಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. ಡಿಸೆಂಬರ್ 26ರಂದು ದರ ಇಳಿಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು-ನಾಲ್ಕು ತಿಂಗಳಲ್ಲಿ ಡೀಸೆಲ್ ದರ ಒಟ್ಟಾರೆ 8 ರೂ. ಇಳಿಕೆಯಾಗಿದ್ದರೂ ಸರ್ಕಾರ ಬಸ್ ಪ್ರಯಾಣ ದರ ಕಡಿಮೆ ಮಾಡಿರಲಿಲ್ಲ. ಇದು ಜನರು ಮತ್ತು ವಿವಿಧ ಸಂಘಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ನಷ್ಟದ ನೆಪ ಹೇಳಿದ್ದ ಇಲಾಖೆ ಕೊನೆಗೂ ಜನರ ಮತ್ತು ಸಂಘಸಂಸ್ಥೆಗಳ ಒತ್ತಾಯಕ್ಕೆ ಮಣಿದು ಬಸ್ ದರ ಇಳಿಸಲು ಮುಂದಾಗಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ











Click it and Unblock the Notifications