ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆಯಲ್ಲಿ ಧರಣಿ ಮುಂದುವರೆಸಲು ಕಾಂಗ್ರೆಸ್ ನಿರ್ಧಾರ

|
Google Oneindia Kannada News

ಬೆಂಗಳೂರು, ಮಾ. 03: ವಿಧಾನಸಭೆಯಲ್ಲಿ ಇವತ್ತೂ ಧರಣಿ ಮುಂದುವರೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪಕ್ಷದ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಪದಲ್ಲಿ ಹಾಜರು ಇರುವಂತೆ ನಿನ್ನೆಯೆ ವಿಪ್ ಜಾರಿಮಾಡಗಿತ್ತು.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಸದಸ್ಯ ಯತ್ನಾಳ್ ಕ್ಷಮೆ ಕೇಳುವವರೆಗೆ ಸದನದಲ್ಲಿ ಹೋರಾಟ ಮುಂದುವರೆಸಲು ಶಾಸಕರೊಂದಿಗೆ ಚರ್ಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ವಿಧಾನಸಭೆಯ ನಡಾವಳಿಯಡಿ ನೋಟಿಸ್ ಕೊಟ್ಟು ಚರ್ಚೆಗೆ ಅವಕಾಶ ಕೇಳಿದ್ದಾಗಿ ಶಾಸಕರಿಗೆ ತಿಳಿಸಿದ್ದಾರೆ. ಜೊತೆಗೆ ವಿಧಾನಸಭೆಯಲ್ಲಿ ಮಾಧ್ಯಮ ನಿರ್ಬಂಧ ಕುರಿತಂತೆಯೂ ಪ್ರಸ್ತಾಪ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಮಠಗಳಿಂದ ಹಿಂದೆ ಸರಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಮಠಗಳಿಂದ ಹಿಂದೆ ಸರಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಕಲಾಪದಲ್ಲಿ ಸದಸ್ಯರು ಹೇಗೆ ವರ್ತನೆ ಮಾಡಬೇಕು ಎಂಬುದರ ಬಗ್ಗೆಯೂ ಹಿರಿಯ ನಾಯಕರು ಸಭೆಯಲ್ಲಿ ಸಲಹೆ, ಸೂಚನೆ ಕೊಟ್ಟಿದ್ದಾರೆ. ಮಾಜಿ ಸಚಿವರಾದ ಡಾ. ಜಿ ಪರಮೇಶ್ವರ್, ಆರ್ ವಿ ದೇಶಪಾಂಡೆ, ಎಸ್. ಆರ್. ಪಾಟೀಲ್, ರಮೇಶ್ ಕುಮಾರ್, ಈಶ್ವರ್ ಖಂಡ್ರೆ ಸೇರಿದಂತೆ ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದರು.

Decision Taken at Clp Meeting to Continue the Protest in the Assembly Till Yatnal Apologizes

ಆದಿಚುಂಚನಗಿರಿ ಭೇಟಿ ರದ್ದು ಮಾಡಿದ ಡಿ ಕೆ ಶಿವಕುಮಾರ್: ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿಯಾದ ಹಿನ್ನೆಲೆಯಲ್ಲಿ ಆದಿಚುಂನಗಿರಿ ಭೇಟಿಯನ್ನು ಮಾಜಿ ಸಚಿವ ಡಿ ಕೆ ಶಿವಕುಮಾರ್ ರದ್ದು ಮಾಡಿದ್ದಾರೆ. ಆದಿಚುಂನಗಿರಿ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ಶಿವಕುಮಾರ್ ಅವರು ರದ್ದು ಮಾಡಿದ್ದು ವಿಧಾನಸಭೆ ಕಲಾಪದಲ್ಲಿ ಭಾಗಿಯಾಗಿದ್ದಾರೆ.

English summary
A decision has been taken at the CLP meeting to continue the protest in the assembly till BJP MLA Yatnal apologizes. Opposition parties have repeatedly demanded an apology from MLA Yatnal, who has made derogatory remarks about freedom fighter Doreswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X