ಕರ್ನಾಟಕದ 15 ಕಡೆ ಬರಲಿವೆ ರೋಪ್ ವೇಗಳು: ರಾಜ್ಯದ ಪ್ರವಾಸೋದ್ಯಮಕ್ಕೆ ಭಾರೀ ಮೆರಗು
ಬೆಳಗಾವಿ, ಡಿಸೆಂಬರ್ 17: ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಕಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಸುವರ್ಣ ಸೌಧದಲ್ಲಿ ಸೋಮವಾರ ವಿಧಾನ ಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಎಚ್ ಕೆ ಪಾಟೀಲ್ ಅವರು ಮಂಡಿಸಿದರು. ರೋಪ್ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.

ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು. ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊಂದಿಗೆ ಅಂಗೀಕಾರ ನೀಡಿತು.
ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ ಸಚಿವ ಎಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.
ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ ಹೆಚ್ಚಿನ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಠಿಯಿಂದ ಪ್ರತ್ಯೇಕ ಪ್ರಾಧಿಕಾರ ರಚನೆ ಸರ್ಕಾರ ವಿಧೇಯಕ ಮಂಡಿಸಿದೆ. ಇದಕ್ಕೆ ಸದಸ್ಯರು ಪರ್ಯಾಲೋಚಿಸಿ ಅನುಮತಿ ನೀಡಬೇಕು ಎಂದು ಕೋರಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧೇಯಕವನ್ನು ಸ್ವಾಗತಿಸಿ, ಬಸವನಬಾಗೇವಾಡಿ ವ್ಯಾಪ್ತಿ ಲೋಕಸಭಾ ಸದ್ಯಸರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಬೇಕು. ಇದರಿಂದ ಕೇಂದ್ರ ಸರ್ಕಾರದ ಅನುದಾನ ಪಡೆಯುವಲ್ಲಿ ಸಹಾಯವಾಗುತ್ತದೆ ಎಂದು ತಿಳಿಸಿದರು.
ಲೋಕಸಭಾ ಸದಸ್ಯರು ಹಾಗೂ ಮುದ್ದೇಬಿಹಾಳ ಶಾಸಕರನ್ನು ಸಹ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿಸುವ ತಿದ್ದುಪಡಿಯೊಂದಿಗಿನ ವಿಧೇಯಕಕ್ಕೆ ಸದನದ ಅಂಗೀಕಾರವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತೊಮ್ಮೆ ಸದನದಲ್ಲಿ ಕೋರಿದರು.
ಸಭಾಧ್ಯಕ್ಷ ಯ.ಟಿ.ಖಾದರ್ ತಿದ್ದುಪಡಿಗಳೊಂದಿಗಿನ ವಿಧೇಯಕವನ್ನು ಅಂಗೀಕಾರಕ್ಕಾಗಿ ಸದನದ ಮುಂದೆ ಮಂಡಿಸಿದರು. ವಿಧಾನ ಸಭೆಯ ಸರ್ವಾನುಮತದಿಂದ ವಿಧೇಯಕವನ್ನು ಅಂಗೀಕರಿಸಿತು. ವಿಧಾನ ಪರಿಷತ್ನ ಅಂಗೀಕಾರಕ್ಕಾಗಿ ವಿಧೇಯಕ ಕಳುಹಿಸಿಕೊಡಲಾಗುವುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications