ತೆಲಂಗಾಣದ ಮುಖ್ಯಮಂತ್ರಿ ಆಯ್ಕೆಯ ಕುರಿತು ಮಹತ್ವದ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್
ಹೈದರಾಬಾದ್, ಡಿಸೆಂಬರ್ 04: ತೆಲಂಗಾಣದ ನೂತನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ತೆಲಂಗಾಣದಲ್ಲಿ ಸಿಎಲ್ ಪಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು. ಇದರ ಜೊತೆಗೆ ಎಲ್ಲಾ 64 ಶಾಸಕರ ಜೊತೆಗೆ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ.

ನಮಗೆ ಬೇರೆ ಪಕ್ಷಗಳ ಶಾಸಕರ ಬೆಂಬಲದ ಅಗತ್ಯವಿಲ್ಲ. ತೆಲಂಗಾಣದ ಜನ ನಮಗೆ ಸಂಪೂರ್ಣ ಬಹುಮತ ನೀಡಿದ್ದು, ನಮ್ಮ ಆಶ್ವಾಸನೆಗಳನ್ನು ಆದಷ್ಟು ಬೇಗ ಜಾರಿಗೊಳಿಸುವ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ.
ನಿಮ್ಮನ್ನು ಗೇಮ್ ಚೇಂಜರ್ ಎಂದು ಪರಿಗಣಿಸಲಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಪಾಲಿಗೆ ಗೇಮ್ ಚೇಂಜರ್ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಗೇಮ್ ಚೇಂಜರ್ ಅಲ್ಲ. ತೆಲಂಗಾಣ ರಾಜ್ಯದ ಜನ ನಿಜವಾದ ಗೇಮ್ ಚೇಂಜರ್ ಗಳು. ಬದಲಾವಣೆ ಬಯಸಿದ ಮತದಾರರು ಹಾಗೂ ನಾಯಕರು ತೆಲಂಗಾಣದಲ್ಲಿ ಈ ಬದಲಾವಣೆ ತಂದಿದ್ದಾರೆ ಎಂದು ತಿಳಿಸಿದರು.
ತೆಲಂಗಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಣಿಕ್ ರಾವ್ ಥಾಕೂರ್, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ರಾತ್ರಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ, ತೆಲಂಗಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಶಾಸಕರ ಜತೆಗಿನ ಪ್ರತ್ಯೇಕ ಮಾತುಕತೆ ಬಗ್ಗೆ ವಿವರಗಳನ್ನು ಸಲ್ಲಿಸಲಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications