ದೀಪಕ್ ಹತ್ಯೆ NIA ತನಿಖೆಗೆ ವಹಿಸುವಂತೆ ರಾಜನಾಥ್ ಸಿಂಗ್ ಗೆ ಮನವಿ
ನವದೆಹಲಿ, ಜನವರಿ 04 : ಮಂಗಳೂರಿನ ಕಾಟಿಪಳ್ಳದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರ ಕೊಲೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸುವಂತೆ ಗುರುವಾರ ರಾಜ್ಯ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
In Pics : ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ
ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ಸಂಸದರು, ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ದೀಪಕ್ ರಾವ್ ಹತ್ಯೆ ಪ್ರಕರಣವನ್ನು ಎನ್ ಐಎಗೆ ತನಿಖೆಗೆ ವಹಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ನಳಿನ್ ಕಮಾರ್ ಕಟೀಲ್ ಸೇರಿದಂತೆ ಇತರೆ ರಾಜ್ಯ ಬಿಜೆಪಿ ಸಂಸದರು ಇದ್ದರು. ಜನವರಿ 3ರಂದು ಮಂಗಳೂರಿನ ಹೊರವಲಯದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?
We met Union Home Minister @rajnathsingh ji n demanded NIA inquiry regarding the series of political murders that are taking place in Karnataka, including Deepak Rao. pic.twitter.com/wbqFeIVwZc
— Pratap Simha (@mepratap) January 4, 2018
ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಮಿಂಚಿನ ಕಾರ್ಯಚರಣೆ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು (ಗುರುವಾರ) ಜನತಾ ಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿ ದೀಪಕ್ ರಾವ್ ಅಂತ್ಯಕ್ರಿಯೆ ನಡೆಯಿತು.