ದೀಪಾವಳಿ; ಅಗ್ನಿ ಅನಾಹುತಗಳನ್ನು ತಪ್ಪಿಸಲು ಮಾರ್ಗಸೂಚಿಗಳು
ಬೆಂಗಳೂರು, ಅಕ್ಟೋಬರ್ 18; ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಜನರು ಸಿದ್ಧರಾಗುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರ ಕಚೇರಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಈ ಕುರಿತು ಸುತ್ತೋಲೆ ಹೊರಡಿಸಿದೆ. ಯಾವ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಮಾಹಿತಿ ನೀಡಿದೆ. 24/10/2022 ರಿಂದ 26/10/2022ರ ತನಕ ನಡೆಯಲಿರುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಸೂಚನೆಗಳನ್ನು ನೀಡಲಾಗಿದೆ.
ಸರ್ಕಾರಿ ಆದೇಶ ಸಂಖ್ಯೆ ಹೆಚ್ಡಿ 1069 ಪಿಸಿಸಿ 79 ದಿನಾಂಕ 11-04-1980ರಲ್ಲಿ ನೀಡಿದ ಸೂಚನೆಯಂತೆ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಿರಿದಾದ, ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ನೀಡಬಾರದು.
ಪಟಾಕಿಗಳನ್ನು ಸರ್ಕಾರದ ಅಧಿಕಾರಿಗಳು ನಿಗದಿಪಡಿಸಿದ ತೆರೆದ ಪ್ರದೇಶಗಳಲ್ಲಿ, ಸ್ಥಳೀಯ ಆಡಳಿತ ಅನುಮತಿ ನೀಡಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಬಹುದು. ಈ ಸುತ್ತೋಲೆಯಲ್ಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಟಾಕಿ ಅಂಗಡಿಗಳಿಗೆ ಶುಲ್ಕ ಎಷ್ಟು?
ಜಿಲ್ಲಾ ದಂಡಾಧಿಕಾರಿ ಅಥವಾ ಪೊಲೀಸ್ ಆಯುಕ್ತರು ಸೂಚಿಸುವ ತೆರದ ಪ್ರದೇಶಗಳನ್ನು ಪರೀಕ್ಷಿಸಿ ಸೂಕ್ತ ಸುರಕ್ಷತಾ ಕ್ರಮಗಳ ಬಗ್ಗೆ ವಿವರ ನೀಡಲು ಕೋರಿಕೆ ಬಂದಲ್ಲಿ ಇಲಾಖಾ ನಿಯಮದಂತೆ ಹಾಗೂ ಈ ಮೊದಲು ನೀಡಿದ ಸುತ್ತೋಲೆಗಳಂತೆ ನಿಮ್ಮ ಅಭಿಪ್ರಾಯವನ್ನು ಸದರಿ ಅಧಿಕಾರಿಗಳಿಗೆ ಮಾತ್ರ ತಿಳಿಸತಕ್ಕದ್ದು ಹಾಗೂ ಅಂತಹ ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ನೇರವಾಗಿ ವಸೂಲಿ ಮಾಡುವ ಅವಶ್ಯಕತೆ ಇಲ್ಲ.
ಜಿಲ್ಲಾ ದಂಡಾಧಿಕಾರಿ ಅಥವಾ ಪೊಲೀಸ್ ಆಯುಕ್ತರವರಿಗೆ ಪ್ರತಿಯೊಬ್ಬ ಅರ್ಜಿದಾರರಿಂದ ಪರವಾನಿಗೆ ನೀಡುವಾಗ ಸರ್ಕಾರಿ ಆದೇಶ ಸಂಖ್ಯೆಯ ಪ್ರಕಾರ ನಿಗದಿತ ಶುಲ್ಕ ರೂ. 5,000ಗಳನ್ನು ಸರ್ಕಾರದ ಬೊಕ್ಕಸಕ್ಕೆ ಜಮಾ ಮಾಡುವಂತೆ ಕೋರತಕ್ಕದ್ದು. ಒಂದು ವೇಳೆ ಸದರಿ ಪ್ರಾಧಿಕಾರವು ಅಗ್ನಿಶಾಮಕ ಸೇವಾ ಇಲಾಖೆಯಿಂದ ಪ್ರತ್ಯೇಕ ಆಕ್ಷೇಪಣಾ ರಹಿತ ಪ್ರಮಾಣ ಪತ್ರ ಕೋರಿದ್ದಲ್ಲಿ ಅಂತಹ ಸಂದರ್ಭಗಳಲ್ಲಿ ನಿಗದಿತ ಶುಲ್ಕ ರೂ. 5,000 ಅರ್ಜಿದಾರರಿಂದ ವಸೂಲಿ ಮಾಡಿ ಖಜಾನೆಗೆ ಜಮಾ ಮಾಡತಕ್ಕದ್ದು ಹಾಗೂ ಈ ಎರಡು ಸಂದರ್ಭಗಳಲ್ಲಿ ವಿವರಗಳನ್ನು ಈ ಕಚೇರಿಗೆ ಸಲ್ಲಿಸತಕ್ಕದ್ದು.

ಮಳಿಗೆ ಹೇಗೆ ನಿರ್ಮಾಣ ಮಾಡಬೇಕು?
ತಾತ್ಕಾಲಿಕ ಪಟಾಕಿ ಸಂಗ್ರಹಣೆ ಮಾಡಿ ಮಾರಾಟ ಮಾಡಲು ನಿರ್ಮಿಸಬೇಕಾದ ಮಳಿಗೆಗಳಿಗೂ ಮಾರ್ಗಸೂಚಿಯಲ್ಲಿ ವಿವರಗಳನ್ನು ನೀಡಲಾಗಿದೆ. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಮಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಗಟ್ಟುವ ಸಾಮಗ್ರಿಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು.
ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು. ಪ್ರತಿಯೊಂದು ಮಳಿಗೆಗಳ ಗಾತ್ರ 10x10 ಚದರ ಅಡಿಗೆ ಸೀಮಿತಗೊಳಿಸಿರಬೇಕು ಮತ್ತು ಒಳಗೆ ಯಾವುದೇ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು.

ಅಗ್ನಿ ಶಾಮಕ ವ್ಯವಸ್ಥೆ ಇರಬೇಕು
ಪ್ರತಿಯೊಂದು ಮಳಿಗೆಯಲ್ಲಿ ಒಂದು 9 ಲೀಟರ್ ಸಾಮರ್ಥ್ಯದ ವಾಟರ್ ಪ್ರಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ಗಳಲ್ಲಿ ನೀರನ್ನು ಇಟ್ಟಿರಬೇಕು. ಪ್ರತಿಯೊಂದು ಮಳಿಗೆ ಪಕ್ಕದಲ್ಲಿ ಎರಡು ಡ್ರಮ್ನಲ್ಲಿ ಕನಿಷ್ಟ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. ಮಳಿಗೆಯಲ್ಲಿ ಅಡುಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬಂತೆ ಸಂಬಂಧಿತ ಸೂಚನಾ ಫಲಕವನ್ನು ಹಾಕಿರಬೇಕು.
ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡುವಂತೆ ತಿಳಿಸಬೇಕು. ರಾತ್ರಿ ವೇಳೆ ಮಳಿಗೆಯಲ್ಲಿ ಯಾರೂ ಮಲಗಬಾರದೆಂದು ಸೂಚಿಸಬೇಕು. ಅಗ್ನಿಶಾಮಕ ಠಾಣೆಯಲ್ಲಿ ಎಲ್ಲಾ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟಿರಬೇಕು ಹಾಗೂ ಯಾವುದೇ ಕರೆ ಬಂದರೆ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು.
ದೀಪಾವಳಿ ಸಮಯದಲ್ಲಿ ಅಧಿಕಾರಿ/ ಸಿಬ್ಬಂದಿಗಳಿಗೆ ತುರ್ತು ಸಂದರ್ಭ ಹೊರತು ಪಡಿಸಿ ಯಾವುದೇ ರಜೆ, ವಾರದ ರಜೆಯನ್ನು ನೀಡಬಾರದು ಹಾಗೂ ಕರ್ತವ್ಯದಲ್ಲಿನ ಸಿಬ್ಬಂದಿಗಳು ಸದಾ ಜಾಗರೂಕರಾಗಿರಬೇಕು.

ಪಟಾಕಿಗಳ ಅನಧಿಕೃತ ಮಾರಾಟ
ಅಧಿಕಾರಿಗಳು ಠಾಣೆಯನ್ನು ಬಿಟ್ಟು ನಿರೀಕ್ಷಣೆ ಹಾಗೂ ಇತರೆ ಕೆಲಸಗಳಿಗೆ ಹೊರ ಹೋಗಬಾರದು ಹಾಗೂ ಸದಾ 24 ಗಂಟೆಗಳಲ್ಲೂ ಕರೆಗೆ ತ್ವರಿತವಾಗಿ ಹಾಜರಾಗಲು ಲಭ್ಯವಿರಬೇಕು. ಅನಧಿಕೃತ ಪಟಾಕಿ ಮಾರಾಟದ ವ್ಯವಹಾರವು ಗಮನಕ್ಕೆ ಬಂದರೆ ಕೂಡಲೇ ಸಂಬಂಧಪಟ್ಟ ಪರವಾನಿಗೆ ನೀಡುವ ಅಧಿಕಾರಿಗಳ ಗಮನಕ್ಕೆ ತರತಕ್ಕದ್ದು.
ದೇಶಾದ್ಯಾಂತ್ಯ ಹರಡಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಆಗಾಗ ಸಾಬೂನು ಸ್ಯಾನಿಟೈಜರ್ನಿಂದ ಕೈ ಸ್ವಚ್ಛಗೊಳಿಸುವುದು ಹಾಗೂ ಕೋವಿಡ್-19 ಸಾಂಕ್ರಮಿಕ ರೋಗದ ಬಗ್ಗೆ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications