ದೀಪಾವಳಿ; ಅಗ್ನಿ ದುರಂತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ
ಬೆಂಗಳೂರು, ನವೆಂಬರ್ 12; ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ದೀಪಗಳನ್ನು ಹಚ್ಚುವ ಮೂಲಕ, ಪಟಾಕಿ ಸಿಡಿಸುವ ಮೂಲಕ, ಮನೆಗಳಿಗೆ ದೀಪಗಳ ಅಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ದೀಪಗಳನ್ನು ಬೆಳಗಿಸುವುದು ಕತ್ತಲೆಯನ್ನು ಹೋಗಲಾಡಿಸಿ, ಸಂತೋಷದ ಭರವಸೆ ಮೂಡಿಸುವಂತದ್ದು. ಆದರೆ, ಈ ಸಂತಸವು ಪಟಾಕಿ ಸಿಡಿಸುವ ಸಮಯದಲ್ಲಿ ಸಂಭವಿಸುವ ದುರಂತಗಳಿಂದ ಮಾಸಿಹೋಗಬಾರದು.
ಸಾರ್ವಜನಿಕರು ಮತ್ತು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನವೆಂಬರ್ 12 ರಿಂದ 14ರವರೆಗೆ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಮುನ್ನೆಚ್ಚರಿಕೆ ವಹಿಸಿ ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ಮಾಹಿತಿ ನೀಡಿದೆ.

ಈ ಕುರಿತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರ್ದೇಶಕ ಟಿ. ಎನ್. ಶಿವಶಂಕರ ಜನರಿಗೆ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರು ಆಯಾ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕಿರಿದಾದ, ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.
ಮುಂಜಾಗ್ರತಾ ಕ್ರಮಗಳು; ಪಟಾಕಿಗಳನ್ನು ಸರ್ಕಾರದ ಅಧಿಕಾರಿಗಳು ನಿಗದಿಪಡಿಸಿದ ತೆರೆದ ಪ್ರದೇಶಗಳಲ್ಲಿ, ಸ್ಥಳೀಯ ಆಡಳಿತ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಬಹುದಾಗಿದೆ. ಜಿಲ್ಲಾ ದಂಡಾಧಿಕಾರಿ ಅಥವಾ ಪೊಲೀಸ್ ಆಯುಕ್ತರು ಸೂಚಿಸುವ ತೆರೆದ ಪ್ರದೇಶಗಳನ್ನು ಪರೀಕ್ಷಿಸಿ ಸೂಕ್ತ ಸುರಕ್ಷತಾ ಕ್ರಮಗಳ ಬಗ್ಗೆ ವಿವರ ನೀಡಲು ಕೋರಿಕೆ ಬಂದಲ್ಲಿ ಇಲಾಖಾ ನಿಯಮದಂತೆ ಹಾಗೂ ಈ ಮೊದಲು ನೀಡಿದ ಸುತ್ತೋಲೆಗಳಂತೆ ನಿಮ್ಮ ಅಭಿಪ್ರಾಯವನ್ನು ಸದರಿ ಅಧಿಕಾರಿಗಳಿಗೆ ಮಾತ್ರ ತಿಳಿಸಬಹುದು. ಹಾಗೂ ಅಂತಹ ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ನೇರವಾಗಿ ವಸೂಲಿ ಮಾಡುವ ಅವಶ್ಯಕತೆ ಇಲ್ಲ.
ಜಿಲ್ಲಾ ದಂಡಾಧಿಕಾರಿ ಅಥವಾ ಪೊಲೀಸ್ ಆಯುಕ್ತರವರಿಗೆ ಪ್ರತಿಯೊಬ್ಬ ಅರ್ಜಿದಾರರಿಂದ ಪರವಾನಿಗೆ ನೀಡುವಾಗ ಸರ್ಕಾರಿ ಆದೇಶದಂತೆ ನಿಗದಿತ ಶುಲ್ಕ ರೂ. 5,000 ಗಳನ್ನು ಸರ್ಕಾರದ ಬೊಕ್ಕಸಕ್ಕೆ ಜಮಾ ಮಾಡುವಂತೆ ಕೋರಬಹುದು. ಒಂದು ವೇಳೆ ಸದರಿ ಪ್ರಾಧಿಕಾರವು ಅಗ್ನಿಶಾಮಕ ಸೇವಾ ಇಲಾಖೆಯಿಂದ ಪ್ರತ್ಯೇಕ ಆಕ್ಷೇಪಣಾ ರಹಿತ ಪ್ರಮಾಣ ಪತ್ರ ಕೋರಿದ್ದಲ್ಲಿ ಅಂತಹ ಸಂದರ್ಭಗಳಲ್ಲಿ ನಿಗದಿತ ಶುಲ್ಕ ರೂ. 5,000 ಗಳನ್ನು ಅರ್ಜಿದಾರರಿಂದ ವಸೂಲಿ ಮಾಡಿ ಖಜಾನೆಗೆ ಜಮಾ ಮಾಡಿ ಹಾಗೂ ವಿವರಗಳನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ತಾತ್ಕಾಲಿಕ ಪಟಾಕಿ ಸಂಗ್ರಹಣೆ ಮಳಿಗೆಗಳು ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಮಾಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಗಟ್ಟುವ (fire retardant) ಸಾಮಗ್ರಿಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು. ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.
ಪ್ರತಿಯೊಂದು ಮಳಿಗೆಗಳ ಗಾತ್ರ 10X10 ಚದರ ಅಡಿಗೆ ಸೀಮಿತಗೊಳಿಸಿರಬೇಕು ಮತ್ತು ಒಳಗೆ ಯಾವುದೇ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು. ಪ್ರತಿಯೊಂದು ಮಳಿಗೆಗಳಲ್ಲಿ ಅಗ್ನಿ ನಿವಾರಣಾ ಹಾಗೂ ಅಗ್ನಿಶಮನ ವ್ಯವಸ್ಥೆ ಇರಬೇಕು. ಮಳಿಗೆಯಲ್ಲಿ ಒಂದು 9 ಲೀಟರ್ ಸಾಮರ್ಥ್ಯದ ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ಗಳಲ್ಲಿ ನೀರನ್ನು ಇಟ್ಟಿರಬೇಕು. ಪ್ರತಿಯೊಂದು ಮಳಿಗೆ ಪಕ್ಕದಲ್ಲಿ ಎರಡು ಡ್ರಮ್ ನಲ್ಲಿ ಕನಿಷ್ಠ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು.
ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬಂತೆ ಸಂಬಂಧಿತ ಸೂಚನಾ ಫಲಕವನ್ನು ಹಾಕಿರಬೇಕು. ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡುವಂತೆ ತಿಳಿಸಲಾಗುತ್ತಿದೆ. ಹಾಗೂ ರಾತ್ರಿ ವೇಳೆ ಮಳಿಗೆಯಲ್ಲಿ ಯಾರೂ ಮಲಗಬಾರದೆಂದು ಸೂಚಿಸಬೇಕು. ಅನಧಿಕೃತ ಮಾರಾಟದ ವ್ಯವಹಾರವು ಗಮನಕ್ಕೆ ಬಂದರೆ ಕೂಡಲೇ ಸಂಬಂಧಪಟ್ಟ ಪರವಾನಿಗೆ ನೀಡುವ ಅಧಿಕಾರಿಗಳ ಗಮನಕ್ಕೆ ತರಬೇಕು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂಬ ಆದೇಶವಿರುವುದರಿಂದ ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಮಳಿಗೆ ಹಾಗೂ ಗೋದಾಮುಗಳನ್ನು ಪರಿಶೀಲಿಸಿ ಅಲ್ಲಿ ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಪರವಾನಿಗೆ ನೀಡುವ ಪ್ರಾಧಿಕಾರಿಗಳ ಗಮನಕ್ಕೆ ತರಬೇಕು.
ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರ್ದೇಶಕರು ತಿಳಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಬೆಳಕಿನ ಹಬ್ಬ ದೀಪಾವಳಿಯನ್ನು ಸಂತಸ ಸಡಗರದಿಂದ ಆಚರಿಸಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications