Deepavali 2025: ಕರ್ನಾಟಕದಲ್ಲಿ ಪಟಾಕಿ ಸಿಡಿಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು
Deepavali 2025: ದೀಪಾವಳಿಗೆ ಇನ್ನೂ ಕೇವಲ ಎರಡು ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ಹಬ್ಬಕ್ಕೆ ಎಲ್ಲಾ ತಯರಿಗಳನ್ನು ಜನರು ಮಾಡಿಕೊಂಡಿದ್ದಾರೆ. ಅದರಲ್ಲೂ ಇದೀಗ ಪಟಾಕಿ ಸಿಡಿಸುವ ಮೂಲಕ ಈ ಹಬ್ಬವನ್ನು ಸಂಭ್ರಸುವವರೇ ಹೆಚ್ಚು. ಆದ್ದರಿಂದ ಪ್ರತಿಬಾರಿಯಂತೆ ಈ ಬಾರಿಯೂ ರಾಜ್ಯದಲ್ಲಿ ಪಟಾಕಿ ಬಳಕೆ ಸಂಬಂಧಪಟ್ಟಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಹಾಗಾದ್ರೆ, ಅದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೇವಲ ಎರಡೇ ದಿನಗಳಲ್ಲಿ ದೀಪಾವಳಿ ಎಂಟ್ರಿ ಕೊಡಲಿದ್ದು, ಬಹುತೇಕ ಮಂದಿ ಈ ವೇಳೆ ಪಟಾಕಿ ಹೊಡೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಹಿನ್ನೆಲೆ ಪಟಾಕಿ ಬಳಕೆ ಸಂಬಂಧಪಟ್ಟಂತೆ ಇದೀಹ ಮಹತ್ವದ ಆದೇಶವೊಂದು ಹೊರಬಿದ್ದಿದೆ. ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಒತ್ತು ನೀಡುವ ದೃಷ್ಟಿಯಿಂದ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಕೆ ಮಾಡಬೇಕು ಎಂದು ಮಂಡಳಿ ಸ್ಪಷ್ಟನೆ ನೀಡಿದೆ.

ಪಟಾಕಿ ಸಿಡಿಸುವ ಸಮಯಗಳ ವಿವರ: ರಾಜ್ಯದ ಯಾವುದೇ ಭಾಗದಲ್ಲಿ ರಾತ್ರಿ 10 ಗಂಟೆಯ ಬಳಿಕ ಪಟಾಕಿ ಸಿಡಿಸುವಂತಿಲ್ಲ. ಜೊತೆಗೆ ಅಧಿಕ ಹೊಗೆ ಹಾಗೂ ನಿಗದಿತ ಡೆಸಿಬಲ್ಗಿಂತ ಅಧಿಕ ಶಬ್ಧ ಮಾಡುವ ಎಲ್ಲಾ ರೀತಿಯ ಪಟಾಕಿಗಳನ್ನೂ ನಿಷೇಧಿಸಲಾಗಿದೆ. ನಿಗದಿತ ಅವಧಿಯೊಳಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಅಕ್ಟೋಬರ್ 21 ಮತ್ತು 22ರಂದು ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಡಳಿ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದೆ.
ಅಲ್ಲದೆ, ನಿಷೇಧಿತಗೊಂಡ ಪಟಾಕಿಗಳನ್ನು ಮಾರಾಟ ಮಾಡುವವರು ಮತ್ತು ಕಾನೂನುಬಾಹಿರವಾಗಿ ಸಂಗ್ರಹಿಸಿಡುವವರ ವಿರುದ್ಧವೂ ಪರಿಸರ ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ. ಹಬ್ಬದ ಸಮಯದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.
ಸಾಮಾನ್ಯವಾಗಿ ದೀಪಾವಳಿ ಹಬ್ಬ ಬಂತೆಂದರೆ ಸಾಕು ಬಹುತೇಕ ಮಂದಿ ಹೆಚ್ಚು ಶಬ್ಧ ಬರುವ ಡೆಸಿಬಲ್ ಜಾಸ್ತಿ ಇರುವ ಪಟಾಕಿಗಳ ಮೊರೆ ಹೋಗುತ್ತಿರುವುದು ಹೆಚ್ಚಾಗುತ್ತಿದೆ. ಇದರಿಂದ ಪರಿಸರಕ್ಕೆ ಜೀವಸಂಕುಲಗಳಿಗೆ ಹಾನಿಕರಕ. ಆದ್ದರಿಂದ ಇವುಗಳ ಬದಲಾಗಿದೆ ಹಸಿರು ಪಟಾಕಿಗಳನ್ನೇ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.
ಯಾರೆಲ್ಲಾ ಕ್ರಮ ಕೈಗೊಳ್ಳಬಹುದು?: ಪಟಾಕಿ ಸಂಗ್ರಹ ಮತ್ತು ಮಾರಾಟ ನಿಷೇಧಿಸಲು ಹಾಗೂ ಕ್ರಮ ಕೈಗೊಳ್ಳಲು ನಗರ ಪಾಲಿಕೆಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಆಯುಕ್ತರು, ಸಾರಿಗೆ ಆಯುಕ್ತರು, ವಾಣಿಜ್ಯ, ಪಶುಸಂಗೋಪನೆ, ಶಿಕ್ಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಅಗ್ನಿಶಾಮಕ ಮಹಾ ನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ. ಇನ್ನು ಸಾಂಪ್ರದಾಯಿಕ ಪಟಾಕಿಗಳಿಗೆ ಹೋಲಿಸಿದರೆ ಕಡಿಮೆ ವಾಯು ಮತ್ತು ಶಬ್ದ ಮಾಲಿನ್ಯವನ್ನು ಉಂಟುಮಾಡುವ ಪರಿಸರ ಸ್ನೇಹಿ ಪಟಾಕಿಗಳೇ ಹಸಿರು ಪಟಾಕಿಗಳಾಗಿದೆ. ಇವುಗಳು ಪರಿಸರಕ್ಕೆ ಅಷ್ಟೊಂದು ಮಾರಕ ಪರಿಣಾಮ ಬಿರುವುದಿಲ್ಲ. ಇವು ಸಾಮಾನ್ಯ ಪಟಾಕಿಗಳಿಗಿಂತ ಕಡಿಮೆ ವಾಯು ಮಾಲಿನ್ಯವನ್ನು ಹೊರಸೂಸುತ್ತವೆ. ಈ ಹಸಿರು ಪಟಾಕಿಗಳಲ್ಲಿ ಲೀಥಿಯಂ, ಆರ್ಸೆನಿಕ್, ಬೇರಿಯಂ ನೈಟ್ರೇಟ್ ಮತ್ತು ಸತುವಿನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುವುದಿಲ್ಲ. ಆದ್ದರಿಂದ ಇವುಗಳಿ ಪರಿಸರಕ್ಕೆ ಹಾನಿಕಾರಕ ಅಲ್ಲ. ಆದ್ದರಿಂದ ಈ ಹಸಿರು ಪಟಾಕಿಗಳನ್ನೇ ಬಳಕೆ ಮಾಡಿ ಎಂದು ಸೂಚನೆ ನೀಡಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications