ದೀಪಾವಳಿ; ಪಟಾಕಿ ಮಾರಾಟ ಮಾಡುವವರಿಗೆ ಖಡಕ್ ಸೂಚನೆ
ಬೆಂಗಳೂರು, ಅಕ್ಟೋಬರ್ 25 : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪಟಾಕಿ ಮಾರಾಟಗಾರರು ಹಾಗೂ ಜನರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ.
ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ತಮ್ಮ ಪರವಾನಗಿಯನ್ನು ಸಾರ್ವಜನಿಕವಾಗಿ ಅಂಗಡಿಗಳ ಮುಂಭಾಗದಲ್ಲಿ ಪ್ರದರ್ಶಿಸಬೇಕು ಎಂದು ಸೂಚನೆ ನೀಡಲಾಗಿದೆ. ಪರವಾನಗಿಯಲ್ಲಿ ಅನುಮತಿ ನೀಡಿರುವ ಪ್ರಮಾಣಕ್ಕಿಂತ ಹೆಚ್ಚಿನ ಪಟಾಕಿ ಹಾಗೂ ಚೈನೀಸ್ ಕ್ರಾಕರ್ಸ್ಗಳನ್ನು ಮಾರಾಟ ಮಾಡಬಾರದು ಎಂದು ತಿಳಿಸಲಾಗಿದೆ.
ಪಟಾಕಿಗಳನ್ನು ಬಳಸುವ ಸಂದರ್ಭದಲ್ಲಿ ಸುರಕ್ಷತಾ ದೃಷ್ಠಿಯಿಂದ ಸಾರ್ವಜನಿಕರು ಮಾಡಬೇಕಾದ ಹಾಗೂ ಮಾಡಬಾರದಂತಹ ಎಚ್ಚರಿಕೆ ಭಿತ್ತಿಪತ್ರಗಳನ್ನು ಕಡ್ಡಾಯವಾಗಿ ಅಂಗಡಿ ಮುಂಗಟ್ಟಗಳು ಹಾಗೂ ಪ್ರವೇಶ ದ್ವಾರ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪಟಾಕಿ ಅಂಗಡಿಗಳನ್ನು ಜನವಸತಿ ಪ್ರದೇಶದಲ್ಲಿ ಇಡಬಾರದು. ಪೆಟ್ರೋಲ್ ಬಂಕ್, ಗ್ಯಾಸ್ ಬಂಕ್, ವೆಲ್ಡಿಂಗ್ ಷಾಪ್ ಇತ್ಯಾದಿ ಕಡೆಗಳಿಂದ ಪಟಾಕಿ ಅಂಗಡಿ 15 ಮೀಟರ್ ದೂರವಿರಬೇಕು. ಸಮುದಾಯ ಭವನ, ಛತ್ರಗಳು ಇಂತಹ ಕಡೆಗಳಲ್ಲಿ ಮಾರಾಟ ಮಾಡಬಾರದು ಎಂದು ತಿಳಿಸಲಾಗಿದೆ.
ಪಟಾಕಿ ಮಳಿಗೆಗಳ ಪ್ರದೇಶದಲ್ಲಿ ಜನಸಂದಣಿಯಾಗದಂತೆ ಕ್ರಮ ಕೈಗೊಳ್ಳಬೇಕು. ಗುಪ್ತ ರೀತಿಯಲ್ಲಿ ವಿದೇಶಗಳಿಂದ ವಿವಿಧ ಬಗೆಯ ರೂಪುರೇಷಗಳಲ್ಲಿ ಆಟಿಕೆಗಳಂತೆ ಹಾಗೂ ವಿದ್ಯುನ್ಮಾನ ಉಪಕರಣಗಳೆಂದು ಕರೆಸಿಕೊಳ್ಳುವ ಸಿಡಿಮದ್ದುಗಳು ವಿಷಕಾರಕ ರಾಸಾಯನಿಕಗಳಿಂದ ಕೂಡಿದವುಗಳನ್ನು ಮಾರಾಟ ಮಾಡುವುದು ಕಾನೂನು ಬಾಹಿರ.
ವಿದೇಶಗಳಿಂದ ಆಮದಾಗುವ ಯಾವುದೇ ಪಟಾಕಿ ಅಥವಾ ಸಿಡಿಮದ್ದುಗಳಿಗೆ ಸ್ಪೋಟಕಗಳ ಕಾಯ್ದೆ 2008 ರಂತೆ ಯಾವುದೇ ಅನುಮತಿಯನ್ನು ನೀಡಲಾಗುವುದಿಲ್ಲ. ಪಿಇಎಸ್ಒ ಅಥವಾ ಜಿಲ್ಲಾ ಪ್ರಾಧಿಕಾರದಿಂದ ನೀಡಲಾಗುವ ಎಲ್-5 ಪರವಾನಗಿ ಹೊಂದಿದ ಸಗಟು ಮಾರಾಟಗಾರರಿಂದ ಮಾತ್ರ ತಾತ್ಕಾಲಿಕ ಪಟಾಕಿ ಮಾರಾಟಗಾರರು ಪಟಾಕಿ ಖರೀದಿಸಲು ಅವಕಾಶವಿದೆ.
ಪಟಾಕಿ ಮಾರಾಟ ಮಾಡುವ ಸ್ಥಳದಲ್ಲಿನ ಕೆಲಸಗಾರರು ಹಾಗೂ ಮಾರಾಟಗಾರರಿಗೆ ಸಿಡಿಮದ್ದುಗಳ ಬಗ್ಗೆ ಮುಂಜಾಗ್ರತೆ ಮತ್ತು ಅಪಾಯಗಳ ಬಗ್ಗೆ ಸೂಕ್ತ ತಿಳಿವಳಿಕೆ ಇರಬೇಕು.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications